ಕೋವಿಡ್: ಇನ್ನು 7 ದಿನ ಹೋಂ ಐಸೊಲೇಶನ್‌

14 ದಿನಗಳ ಬದಲಾಗಿ ಹೊಸ ವ್ಯವಸ್ಥೆ 10 ದಿನಕ್ಕೇ ಬಿಡುಗಡೆ, ಸೋಂಕು ಪರೀಕ್ಷೆ ಇಲ್ಲ

Team Udayavani, Aug 12, 2020, 6:15 AM IST

ಕೋವಿಡ್: ಇನ್ನು 7 ದಿನ ಹೋಂ ಐಸೊಲೇಶನ್‌

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳುವವರಿಗೆ 14 ದಿನಗಳ ಹೋಂ ಕ್ವಾರಂಟೈನ್‌ ಬದಲಾಗಿ ಏಳು ದಿನ ಮನೆಯಲ್ಲಿಯೇ ಐಸೊಲೇಶನ್‌ ನಿಯಮ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಸೋಂಕು ಲಕ್ಷಣ ಇಲ್ಲದವರು ಮತ್ತು ಅಲ್ಪ ಪ್ರಮಾಣದ ಲಕ್ಷಣ ಹೊಂದಿರುವ ಪ್ರಕರಣಗಳಲ್ಲಿ ಸೋಂಕುಪೀಡಿತರು ಆಸ್ಪತ್ರೆ, ಕೊರೊನಾ ಕೇರ್‌ ಸೆಂಟರ್‌ನಿಂದ ಬಿಡುಗಡೆಯಾದ ಬಳಿಕ ಕಡ್ಡಾಯವಾಗಿ 14 ದಿನಗಳ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಿತ್ತು. ಸದ್ಯ ಏಳು ದಿನಗಳ ಐಸೊಲೇಶನ್‌ಗೆ ಸೂಚಿಸಲಾಗಿದೆ. 14 ದಿನಗಳ ಹೋಂ ಕ್ವಾರಂಟೈನ್‌ ನಿಯಮ ಕೈಬಿಡಲಾಗಿದೆ.

10 ದಿನಕ್ಕೆ ಬಿಡುಗಡೆ: ಸೋಂಕು ಪರೀಕ್ಷೆ ಇಲ್ಲ
ಸೋಂಕು ಲಕ್ಷಣ ಇಲ್ಲದ ಮತ್ತು ಅಲ್ಪ ಪ್ರಮಾಣದ ಲಕ್ಷಣ ಹೊಂದಿರುವ ಪ್ರಕರಣಗಳಲ್ಲಿ ಪರೀಕ್ಷೆ ನಡೆದ ದಿನದಿಂದ 10ನೇ ದಿನಕ್ಕೆ ಬಿಡುಗಡೆ ಮಾಡಲು ಸೂಚಿಸಲಾಗಿದೆ. ಹಿಂದೆ ಸೋಂಕುಪೀಡಿತರು ಆಸ್ಪತ್ರೆ, ಕೊರೊನಾ ಕೇರ್‌ ಸೆಂಟರ್‌ಗೆ ದಾಖಲಾಗಿ 10 ದಿನದ ಬಳಿಕ ಬಿಡುಗಡೆ ಮಾಡಲಾಗುತ್ತಿತ್ತು. ಬಿಡುಗಡೆ ವೇಳೆ ಸೋಂಕು ಪರೀಕ್ಷೆ ಅಗತ್ಯವಿಲ್ಲ ಎಂದು ಮತ್ತೂಮ್ಮೆ ಸ್ಪಷ್ಟಪಡಿಸಲಾಗಿದೆ. ಒಂದು ವೇಳೆ ಬಿಡುಗಡೆ ಬಳಿಕ ಲಕ್ಷಣ ಕಾಣಿಸಿಕೊಂಡರೆ ಸಮೀಪದ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಬೇಕು ಎಂದು ಸೂಚಿಸಿದೆ.

ಆರಂಭದಲ್ಲಿ ಸೋಂಕು ಲಕ್ಷಣ ಕಾಣಿಸಿಕೊಂಡು ಚಿಕಿತ್ಸೆ ಬಳಿಕ ಗುಣಮುಖರಾದವರಿಗೆ ಕೊನೆಯ ಮೂರು ದಿನ ಸೋಂಕು ಲಕ್ಷಣ ಇಲ್ಲದಿದ್ದರೆ 10ನೇ ದಿನ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು. ಒಂದು ವೇಳೆ 14 ದಿನ ಸೋಂಕು ಲಕ್ಷಣ ಇದ್ದರೆ ಮೂರು ದಿನಗಳ ಬಳಿಕ, ಅಂದರೆ 17ನೇ ದಿನ ಸೋಂಕು ಪರೀಕ್ಷೆ ಮಾಡದೆ ಬಿಡುಗಡೆ ಮಾಡಬಹುದು. ಸೋಂಕುಪೀಡಿತರ ಬಿಡುಗಡೆಗೆ ಮುನ್ನ ಮೂರು ದಿನ ಸೋಂಕಿನ ಲಕ್ಷಣವಿರಬಾರದು. ಉಳಿದಂತೆ ಎಚ್‌ಐವಿ, ಕಸಿ ಚಿಕಿತ್ಸೆಗೆ ಒಳಗಾದ ಸೋಂಕುಪೀಡಿತರಿಗೆ ಸಂಪೂರ್ಣ ಗುಣಮುಖರಾದ ಬಳಿಕ ಒಮ್ಮೆ ಸೋಂಕು ಪರೀಕ್ಷೆ ಮಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮನೆಯಲ್ಲಿ ಆರೈಕೆ: ಹೋಂ ಕೇರ್‌
ಸೋಂಕು ದೃಢಪಟ್ಟು ಲಕ್ಷಣ ಇಲ್ಲದೆ ಮನೆಯಲ್ಲಿಯೇ ಆರೈಕೆಯಲ್ಲಿದ್ದರೆ ಅದನ್ನು “ಹೋಂ ಕೇರ್‌’ ಎಂದು ನಮೂದಿಸಬೇಕು. ಲಕ್ಷಣ ಕಾಣಿಸಿಕೊಂಡ ಅನಂತರದ ಹತ್ತು ದಿನ ಅಥವಾ ಪರೀಕ್ಷೆಗೆ ಒಳಗಾದ ಅನಂತರದ 10 ದಿನ ಹೋಂ ಕೇರ್‌ನಲ್ಲಿರಬೇಕು. ಅನಂತರ 7 ದಿನ ಹೋಂ ಐಸೊಲೇಶನ್‌ನಲ್ಲಿರಬೇಕು. ಜತೆಗೆ 60 ವರ್ಷ ಮೇಲ್ಪಟ್ಟ ಸೋಂಕುಪೀಡಿತರಿಗೂ ವೈದ್ಯರ ತಪಾಸಣೆ ಬಳಿಕ ಹೋಂ ಕೇರ್‌ಗೆ ಅವಕಾಶ ನೀಡಲಾಗಿದೆ. ಸೋಂಕುಪೀಡಿತ ಗರ್ಭಿಣಿಯರು ಹೆರಿಗೆ ದಿನಾಂಕದ ಎರಡು ವಾರದ ವರೆಗೆ ಹೋಂ ಕೇರ್‌ನಲ್ಲಿರಬಹುದು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ವ್ಯತ್ಯಾಸ ಏನು?
ಕ್ವಾರಂಟೈನ್‌ ಎಂದರೆ ಸೋಂಕುಪೀಡಿತನ ಸಂಪರ್ಕ, ಸೋಂಕು ಲಕ್ಷಣ ಇದ್ದಾಗ ಬಾಹ್ಯ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧ್ಯವಾಗಬಾರದು ಎಂದು ಮನೆಯಲ್ಲಿಯೇ ಇರುವುದು. ಸ್ವಯಂ ಐಸೊಲೇಶನ್‌ ಎಂದರೆ ಮನೆಯಲ್ಲಿ ಆರೈಕೆಯಲ್ಲಿರುವ ಜತೆಗೆ ಸ್ವಯಂ ಆರೋಗ್ಯದ ಮೇಲೆ ನಿಗಾ ವಹಿಸುವುದು ಎಂದರ್ಥ ಎಂದು ಆರೋಗ್ಯ ಇಲಾಖೆ ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.