ಮಹಾ”ಚಿಂತೆ”


Team Udayavani, Mar 12, 2021, 8:00 AM IST

ಮಹಾ”ಚಿಂತೆ”

ಮಹಾ”ಚಿಂತೆ”

ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆಯ ಅಬ್ಬರದ ಹಿನ್ನಲೆ ರಾಜ್ಯದಲ್ಲಿಯೂ ಸೋಂಕು ಹೆಚ್ಚಳವಾಗುವ ಆತಂಕದ ಮೂಡಿದೆ. ಇದಕ್ಕೆ ಪೂರಕವೆಂಬಂತೆ ರಾಜ್ಯದಲ್ಲಿ ಕಳೆದ ತಿಂಗಳಿಗೆ (ಫೆಬ್ರವರಿ) ಹೋಲಿಸಿದರೆ ಸದ್ಯ ಸೋಂಕು ಪ್ರಕರಣಗಳು ಶೇ.50 ರಷ್ಟು ಹೆಚ್ಚಾಗಿದ್ದು, ಸೋಂಕಿತರ ಸಾವು ದುಪ್ಪಟ್ಟಾಗಿವೆ.

ಕಳೆದ ವರ್ಷ (2020) ರಾಜ್ಯದಲ್ಲಿ ಕೋವಿಡ್ ಹೆಚ್ಚಳಕ್ಕೆ ಮಹಾರಾಷ್ಟ್ರ ಕೊಡುಗೆ ಹೆಚ್ಚಿತ್ತು. ಮೇ ನಂತರದಲ್ಲಿ ಲಾಕ್‌ಡೌನ್ ಒಂದಿಷ್ಟು ಸಡಿಲವಾಗುತ್ತಿದ್ದಂತೆ, ಸೋಂಕು ಹೆಚ್ಚಿದ್ದ ಮಹಾರಾಷ್ಟ್ರದಿಂದ ಸಾವಿರಾರು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬದವರು ಸೋಂಕನ್ನು ಹೊತ್ತು ಉತ್ತರ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಿಗೆ ಹಿಂದಿರುಗಿದ್ದರು. ಇದರಿಂದ ಆ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ಗಣನೀಯ ಏರಿಕೆ ಕಂಡಿದ್ದವು. ಅಲ್ಲದೆ, 2020 ಮೇ ಮತ್ತು ಜೂನ್‌ನಲ್ಲಿ ಮಹಾರಾಷ್ಟ್ರ ಸಂಪರ್ಕ ಹೊಂದಿದವ ಪ್ರಕರಣಗಳೇ ಶೇ 70ಕ್ಕೂ ಹೆಚ್ಚಿದ್ದವು.

ಈಗ ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆಯ ಆರ್ಭಟ ಹೆಚ್ಚಿದ್ದು, ಬುಧವಾರ ಒಂದೇ ದಿನ 13 ಸಾವಿರ ಮಂದಿಗೆ ಸೋಂಕು ತಗುಲಿದೆ. ಈಗಾಗಲೇ ನಾಗಪೂರ್ ಜಿಲ್ಲೆಯಲ್ಲಿ ಪೂರ್ಣಪ್ರಮಾಣದಲ್ಲಿ ಲಾಕ್‌ಡೌನ್ ಜಾರಿಗೊಂಡಿದೆ. ಈ ಹಿನ್ನೆಲೆ ಕಳೆದ ಬಾರಿಯಂತೆ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಳವಾಯಿತು ಎಂಬ ಕಾರಣಕ್ಕೆ ವಲಸೆ ಕಾರ್ಮಿಕರು ಹಿಂದಿರುಗುವ ಸಾಧ್ಯತೆಗಳಿವೆ. ಇದರಿಂದ ಉತ್ತರ ಕರ್ನಾಟಕ ಗಡಿಜಿಲ್ಲೆಗಳು ಮತ್ತು ಹೋಟೆಲ್ ಕಾರ್ಮಿಕರು ಹೆಚ್ಚಿರುವ ಸೋಂಕು ಹೆಚ್ಚಳವಾಗುವ ಆತಂಕವಿದೆ.

ರಾಜ್ಯದ ಸ್ಥಿತಿ ಹೇಗಿದೆ? :

ರಾಜ್ಯದಲ್ಲಿ ಜನವರಿಗಿಂತ ಫೆಬ್ರವರಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಮತ್ತು ಸೋಂಕಿತರ ಸಾವು ಇಳಿಕೆ ಕಂಡರೂ, ಮಾರ್ಚ್ನಿಂದ ಮತ್ತೆ ಏರುಗತಿಯಲ್ಲಿ ಸಾಗಿವೆ. ಜನವರಿ, ಫೆಬ್ರವರಿ ಹಾಗೂ ಮಾರ್ಚ್ನ ಮೊದಲ ಹತ್ತು ದಿನಗಳ ಅಂಕಿ ಅಂಶಗಳನ್ನು ನೋಡಿದರೆ ಜನವರಿಗಿಂತ ಫೆಬ್ರವರಿಯಲ್ಲಿ ಪ್ರಕರಣಗಳು ಮತ್ತು ಸೋಂಕಿತರ ಸಾವು ಶೇ.50 ರಷ್ಟು ಕಡಿಮೆಯಾದವು. ಆದರೆ, ಫೆಬ್ರವರಿಗಿಂತ ಮಾರ್ಚ್ನಲ್ಲಿ ಸೋಂಕು ಪ್ರಕರಣಗಳು ಶೇ.25 ರಷ್ಟು ಸೋಂಕಿತರ ಸಾವು ಶೇ.50 ರಷ್ಟು ಹೆಚ್ಚಳವಾಗಿವೆ.

ಹಿಂದಿನ ತಪ್ಪಿನಿಂದ ಪಾಠ ಕಲಿಯಬೇಕು! :

ಕಳೆದ ವರ್ಷ ಲಾಕ್‌ಡೌನ್ ಇದ್ದರೂ ಗಡಿಪ್ರದೇಶಗಳ ಭದ್ರತಾ ವೈಫಲ್ಯದಿಂದ ನಿಜಾಮುದ್ಧೀನ್, ಅಹಮದಾಬಾದ್‌ನ ತಬ್ಲಿಘೀ ಜಮಾತ್ ಸದಸ್ಯರು, ಅಜ್ಮೀರ್ ಧಾರ್ಮಿಕ ಯಾತ್ರಿಗಳು, ಮಹಾರಾಷ್ಟ್ರ ವಲಸೆ ಕಾರ್ಮಿಕರು, ದೆಹಲಿ ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿ ಸೋಂಕಿನ ಹೆಚ್ಚಳಕ್ಕೆ ಕಾರಣವಾಗಿದ್ದರು. ಸದ್ಯ ಅನ್‌ಲಾಕ್ ಆಗಿದ್ದು, ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವರಿಗೆ ಸೋಂಕು ಪರೀಕ್ಷಾ ವರದಿ ಕಡ್ಡಾಯ ಮಾಡಲಾಗಿದೆ. ಆದರೆ, ಬಂದ ನಂತರವೂ ಹಲವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೇ ಬೆಂಗಳೂರಿನ ಕ್ಲಸ್ಟರ್ ಸೋಂಕಿಗೆ ಕಾರಣವಾಗಿದೆ. ಹೀಗಾಗಿ, ಗಡಿಯಲ್ಲಿ ತಪಾಸಣೆ ಉನ್ನತೀಕರಿಸಬೇಕು ಅಥವಾ ಕೆಲ ದಿನಗಳ ಮಟ್ಟಿಗೆ ಗಡಿಯನ್ನು ಬಂದ್ ಮಾಬೇಕು. ಜತೆಗೆ ಹೊರರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್ ನಿಯಮ ಕಡ್ಡಾಯಗೊಳಿಸಬೇಕು ಎಂಬ ಅಭಿಪ್ರಾಯ ಕೇಳಿಬಂದಿದೆ.

ಆರೋಗ್ಯ ಸಚಿವರು ಆತಂಕ : 
ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಳವಾಗಿರುವ ಕುರಿತು ಟ್ವಿಟ್ ಮಾಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, `ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು’ ಎಂದಿದ್ದಾರೆ.

ಅಲ್ಲದೆ, ಈಗಾಗಲೇ ಜಾರಿಯಲ್ಲಿರುವ ತಡರಾತ್ರಿವರೆಗೂ ಸಭೆ ಸಮಾರಂಭಗಳಿಗೆ ನಿಷೇಧ, ಗಡಿಯಲ್ಲಿ ತಪಾಸಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ನಿರ್ಧರಿಸಲಾಗಿದೆ. ಜತೆಗೆ ಗಡಿ ಜಿಲ್ಲೆಗಳಲ್ಲಿ ಮತ್ತು ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಪರೀಕ್ಷೆ ಹೆಚ್ಚಿಸಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
—-
ಅಂಕಿ-ಅಂಶ : ರಾಜ್ಯದಲ್ಲಿ ಸೋಂಕು ಹೆಚ್ಚಿರುವ ಜಿಲ್ಲೆಗಳಿವು :

(ಮಾರ್ಚನಲ್ಲಿ ನಿತ್ಯ ಸರಾಸರಿ ಕೋವಿಡ್ ಕೇಸ್)
ಬೆಂಗಳೂರು (350), ಕಲಬುರಗಿ (24), ಮೈಸೂರು(19), ತುಮಕೂರು (19), ಉಡುಪಿ (17), ದಕ್ಷಿಣ ಕನ್ನಡ (18) ಉಳಿದ ಜಿಲ್ಲೆಗಳಲ್ಲಿ ನಿತ್ಯ ಬೆರಳೆಣಿಕೆಯಷ್ಟು ಪ್ರಕರಣಗಳು ವರದಿಯಾಗುತ್ತಿವೆ.

ತಿಂಗಳು (ಮೊದಲ ಹತ್ತು ದಿನ) ಪ್ರಕರಣಗಳು

ಸೋಂಕಿತರು -ಸಾವು- ಸಕ್ರಿಯ ಪ್ರಕರಣಗಳು
ಜನವರಿ 8063 -50 -9649
ಫೆಬ್ರವರಿ 4240 -27 -5875
ಮಾರ್ಚ್ 5550 -48 -7456

 –ಜಯಪ್ರಕಾಶ್ ಬಿರಾದಾರ್ 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.