ದ.ಭಾರತದಲ್ಲಿ ಕೋವಿಡ್‌ 19 ಮುಕ್ತ ಜಿಲ್ಲೆಗಳು 2 ಮಾತ್ರ!


Team Udayavani, Jun 6, 2020, 7:10 AM IST

dakshina-kannada

ಚಾಮರಾಜನಗರ: ದಕ್ಷಿಣ ಭಾರತದಲ್ಲಿ ಪ್ರಸ್ತುತ ಎರಡೇ ಜಿಲ್ಲೆಗಳು ಕೋವಿಡ್‌ 19 ಮುಕ್ತವಾಗಿದ್ದು, ತೆಲಂಗಾಣದ ವಾರಂಗಲ್‌ ಗ್ರಾಮಾಂತರ ಜಿಲ್ಲೆ ಮತ್ತು ಕರ್ನಾಟಕದ ಚಾಮರಾಜನಗರ ಜಿಲ್ಲೆ ಈ ಗೌರವಕ್ಕೆ ಪಾತ್ರವಾಗಿವೆ. www.covid19india.org ಎಂಬ ಜಾಲತಾಣದಲ್ಲಿ ಪ್ರತಿದಿನ ಇಡೀ ದೇಶದ ಎಲ್ಲ ರಾಜ್ಯಗಳ ಕೋವಿಡ್‌ 19 ಅಂಕಿ ಅಂಶಗಳನ್ನು ಸಮಗ್ರವಾಗಿ ಪ್ರಕಟಿಸಲಾಗುತ್ತಿದೆ. ಪ್ರತಿ ರಾಜ್ಯದ ಜಿಲ್ಲೆಗಳಲ್ಲಿರುವ ಕೋವಿಡ್‌ 19 ಪ್ರಕರಣಗಳ ಸಂಖ್ಯೆಯನ್ನು ಪ್ರತಿ ದಿನ ಜಾಲತಾಣದಲ್ಲಿ ಅಪ್‌ ಡೇಟ್‌ ಮಾಡಲಾಗುತ್ತಿದೆ.

ಇಡೀ ದೇಶದ ಕೋವಿಡ್‌ 19 ಪ್ರಕರಣಗಳ ಕುರಿತು ಸಮಗ್ರವಾದ ಮಾಹಿತಿಯನ್ನು ಈ ಜಾಲತಾಣ ನೀಡುತ್ತಿದೆ. ಇದರಲ್ಲಿ ದಕ್ಷಿಣ ಭಾರತದಲ್ಲಿ ತೆಲಂಗಾಣದ ವಾರಂಗಲ್‌ ಗ್ರಾಮಾಂತರ ಮತ್ತು ಕರ್ನಾಟಕದ ಚಾಮರಾಜ  ನಗರ ಜಿಲ್ಲೆಗಳು ಮಾತ್ರ ಕೋವಿಡ್‌ 19 ಮುಕ್ತ ಜಿಲ್ಲೆ  ಗಳಾಗಿ ಭೂಪಟದಲ್ಲಿ ಬಿಳಿ ಬಣ್ಣದಲ್ಲಿ ನಮೂದಿಸಲಾಗಿದೆ. ಚಾಮರಾಜನಗರ ಜಿಲ್ಲೆ ಕರ್ನಾಟಕದ ಏಕೈಕ ಕೋವಿಡ್‌ 19  ಮುಕ್ತ ಜಿಲ್ಲೆ ಎಂಬುದು ಖಚಿತವಾಗಿತ್ತು. ಆದರೆ ದಕ್ಷಿಣ ಭಾರತದಲ್ಲಿ ಎರಡೇ ಜಿಲ್ಲೆಗಳು ಕೋವಿಡ್‌ 19 ಮುಕ್ತ ಎಂಬುದು ಬೆಳಕಿಗೆ ಬಂದಿರಲಿಲ್ಲ.

ದಕ್ಷಿಣ ಭಾರತದ ಆಂಧ್ರ, ತಮಿಳುನಾಡು, ಕೇರಳದ ಎಲ್ಲ ಜಿಲ್ಲೆಗಳಲ್ಲೂ ಕೋವಿಡ್‌ 19  ಪಾಸಿಟಿವ್‌ ಪ್ರಕರಣಗಳಿವೆ. ವಾರಂಗಲ್‌ ಗ್ರಾಮಾಂತರ ಸಹ ಈ ಸಾಧನೆ ಮಾಡಿರುವುದನ್ನು ತಿಳಿದು, ಈ ಬಗ್ಗೆ ಖಚಿತ ಪಡಿಸಿಕೊಳ್ಳಲು ಉದಯವಾಣಿ ವಾರಂಗಲ್‌ ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎಂ.ಹರಿತಾ ಅವರನ್ನು  ಸಂಪರ್ಕಿಸಿತು. ಈ ಕುರಿತು ಮಾತನಾಡಿದ ಹರಿತಾ, ವಾರಂಗಲ್‌ ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್‌ 19 ಪಾಸಿಟಿವ್‌ ಕಂಡು ಬಂದಿಲ್ಲ.

ನಮ್ಮ ಜಿಲ್ಲೆ ಅರಣ್ಯ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವುದು, ವಿದೇಶದಿಂದ ಬಂದವರ ಸಂಖ್ಯೆ ಕಡಿಮೆ ಇರುವುದು, ದೊಡ್ಡ  ನಗರಗಳು ಇಲ್ಲದಿರುವುದು ಇದಕ್ಕೆ ಕಾರಣವಿರಬಹುದು ಎಂದರು. ಇಡೀ ದಕ್ಷಿಣ ಭಾರತದಲ್ಲಿ ಕರ್ನಾಟಕದ ಚಾಮರಾಜನಗರ ಬಿಟ್ಟರೆ ವಾರಂಗಲ್‌ ಗ್ರಾಮಾಂತರ ಮಾತ್ರ ಕೋವಿಡ್‌ 19  ಮುಕ್ತ ಎಂಬ ವಿಷಯ ತಿಳಿದು ಸಂತಸ ವ್ಯಕ್ತಪಡಿಸಿದರು. ಇತ್ತ ಕರ್ನಾಟಕದ ಏಕೈಕ ಕೋವಿಡ್‌ 19 ಮುಕ್ತ ಜಿಲ್ಲೆಯಾದ ಚಾಮರಾಜನಗರ ವಾರಂಗಲ್‌ ಗ್ರಾಮಾಂತರ ಜಿಲ್ಲೆಯ ಜೊತೆ ಗೌರವ ಹಂಚಿಕೊಳ್ಳುವ ಮೂಲಕ ಅಪರೂಪದ ಸಾಧನೆ ಮಾಡಿದೆ.

ಜಿಲ್ಲಾಡಳಿತ, ಆರೋಗ್ಯ ಇಲಾಖೆ, ನಗರಸಭೆ, ಪುರಸಭೆಗಳು  ಕೈಗೊಂಡ ಕ್ರಮದಿಂದ ಜಿಲ್ಲೆ ಇದುವರೆಗೂ ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ಕಾಣಿಸಿಕೊಂಡಿಲ್ಲ. ಈಗ ವಾರಂಗಲ್‌ ಗ್ರಾಮೀಣ ಮತ್ತು ಚಾಮರಾಜನಗರ ಕೋವಿಡ್‌ 19 ಮುಕ್ತ ಜಿಲ್ಲೆಗಳೆಂಬ  ಹೆಗ್ಗಳಿಕೆಗೆ ಪಾತ್ರವಾಗಿ ಫೈನಲ್‌ ತಲುಪಿವೆ. ಇವೆರಡರಲ್ಲಿ ಟ್ರೋμ ಯಾವ ಜಿಲ್ಲೆಯ ಪಾಲಿಗೆ ದೊರಕುತ್ತದೋ ಎಂಬ ಕುತೂಹಲ ಮೂಡಿದೆ!

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.