ಕೇರಳದಿಂದ ಬರುವವರಿಗೆ ಕೋವಿಡ್ ವರದಿ ಕಡ್ಡಾಯ
Team Udayavani, Jul 2, 2021, 6:45 AM IST
ಬೆಂಗಳೂರು: ಕೇರಳದ ಹಲವು ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್ ವೈರಾಣು ಪತ್ತೆಯಾಗಿರುವ ಹಿನ್ನೆಲೆ ಯಲ್ಲಿ ರಾಜ್ಯಕ್ಕೆ ಆಗಮಿಸುವವರಿಗೆ ಸೋಂಕು ಪರೀಕ್ಷೆ ಕಡ್ಡಾಯಗೊಳಿಸಿದೆ. ಆದರೆ ಎರಡು ಡೋಸ್ ಲಸಿಕೆ ಪಡೆದವರಿಗೆ ಪರೀಕ್ಷೆ ವರದಿಯಿಂದ ವಿನಾಯಿತಿ ನೀಡಲಾಗಿದೆ.
ಕೇರಳದಿಂದ ವಿಮಾನ, ರೈಲು, ಬಸ್, ಖಾಸಗಿ ವಾಹನಗಳಲ್ಲಿ ರಾಜ್ಯಕ್ಕೆ ಆಗಮಿಸುವರು 72 ಗಂಟೆಯೊಳಗೆ ನಡೆಸಿರುವ ಕೊರೊನಾ ನೆಗೆಟಿವ್ ವರದಿಯನ್ನು ಹೊಂದಿರಬೇಕು. ಗಡಿ ಜಿಲ್ಲೆಗಳಾದ ಮೈಸೂರು, ಚಾಮರಾಜ ನಗರ, ಕೊಡಗು, ದಕ್ಷಿಣ ಕನ್ನಡದಲ್ಲಿ ಹೆಚ್ಚುವರಿ ಸಿಬಂದಿ ನಿಯೋಜಿಸಿ ತಪಾಸಣೆಗೆ ಒಳಪಡಿಸಬೇಕು. ವಿಮಾನ ಯಾನ ಸಂಸ್ಥೆಯು ನೆಗೆಟಿವ್ ವರದಿ ಇದ್ದರೆ ಮಾತ್ರ ಬೋರ್ಡಿಂಗ್ ಪಾಸ್ ವಿತರಿಸಬೇಕು. ರೈಲು ನಿಲ್ದಾಣ ದಲ್ಲಿ ಕಡ್ಡಾಯವಾಗಿ ತಪಾಸಣೆ ಮಾಡ ಬೇಕು. ಕೇರಳದಿಂದ ಬರುವವರು ಪ್ರತಿ 15 ದಿನಗಳಿಗೊಮ್ಮೆ ಪರೀಕ್ಷೆಗೆ ಒಳಗಾಗಿ ನೆಗೆಟಿವ್ ವರದಿಯನ್ನು ಹೊಂದಿರ ಬೇಕು ಎಂದು ತಿಳಿಸಲಾಗಿದೆ.
ವಿನಾಯಿತಿ : ಕೊರೊನಾ ಲಸಿಕೆಯ 2 ಡೋಸ್ ಪಡೆದುಕೊಂಡವರು, ವೈದ್ಯಾಧಿಕಾರಿಗಳು, ಎರಡು ವರ್ಷದೊಳಗಿನ ಮಕ್ಕಳು, ವೈದ್ಯಕೀಯ ಚಿಕಿತ್ಸೆ, ಸಂಬಂಧಿಗಳ ಮರಣದಂತಹ ತುರ್ತು ಸಂದರ್ಭದಲ್ಲಿ ರಾಜ್ಯಕ್ಕೆ ಬರುವವರಿಗೂ ನೆಗೆಟಿವ್ ವರದಿಯಿಂದ ವಿನಾಯಿತಿ ಯಿದೆ. ಆದರೆ ಅವರು ಕೊರೊನಾ ಸೋಂಕು ಪರೀಕ್ಷೆಗೆ ಮಾದರಿ, ಆಧಾರ್ ನಂಬರ್ ಹಾಗೂ ವಿಳಾಸ ನೀಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ