ಬರಲಿದೆ “ನಿರ್ಬಂಧ ಪಕ್ಷ “
ಡಿ. 20ರಿಂದ ಜ. 3ರ ವರೆಗೆ ಗರಿಷ್ಠ ಎಚ್ಚರ
Team Udayavani, Dec 5, 2020, 5:58 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಜನವರಿ ಅಥವಾ ಫೆಬ್ರವರಿಗೆ ಕೋವಿಡ್ ಎರಡನೇ ಅಲೆ ಬರಲಿದೆ. ಹೀಗಾಗಿ ಡಿಸೆಂಬರ್ 20ರಿಂದ ಜನವರಿ 3ರ ವರೆಗಿನ 15 ದಿನಗಳ ಕಾಲ ಗರಿಷ್ಠ ಎಚ್ಚರಿಕೆ ವಹಿಸಿ!
ವರ್ಷಾಂತ್ಯ ಮತ್ತು ಹೊಸ ವರ್ಷದ ಆರಂಭದ 15 ದಿನಗಳ ಅವಧಿಯಲ್ಲಿ ತೀವ್ರ ಎಚ್ಚರಿಕೆ ವಹಿಸಬೇಕು. ಮದುವೆಗೆ 100, ರಾಜಕೀಯ-ಧಾರ್ಮಿಕ ಸಮಾರಂಭಗಳಿಗೆ 200, ಅಂತ್ಯಕ್ರಿಯೆಗಳಲ್ಲಿ 50ಕ್ಕಿಂತ ಹೆಚ್ಚು ಜನರ ಸೇರುವಂತಿಲ್ಲ. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.
ಎರಡನೇ ಅಲೆ ಬರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಅವರು ಗುರುವಾರ ಬೆಂಗಳೂರಿನಲ್ಲಿ ತಾಂತ್ರಿಕ ಸಮಿತಿ ಜತೆಗೆ ಸಭೆ ನಡೆಸಿದರು.
ಡಿಸೆಂಬರ್, ಜನವರಿ, ಫೆಬ್ರವರಿ ಚಳಿಗಾಲವಾದ್ದರಿಂದ ನಿರ್ಣಾಯಕ. ಸೋಂಕಿಗೆ ಚಿಕಿತ್ಸೆ ನೀಡಲು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸದಾ ಸಿದ್ಧವಿವೆ. ಫೆಬ್ರವರಿ ಅಂತ್ಯದವರೆಗೂ ಹೆಚ್ಚು ಪರೀಕ್ಷೆ ನಡೆಸಬೇಕು ಎಂದರು.
ಸಿಎಂ ಜತೆ ಚರ್ಚಿಸಿ ನಿರ್ಧಾರ: ಬೊಮ್ಮಾಯಿ
ರಾತ್ರಿ ಕರ್ಫ್ಯೂ ಬಗ್ಗೆ ರವಿವಾರ ಸಿಎಂ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೊಸ ವರ್ಷಾಚರಣೆ ಅರ್ಥಹೀನ
ಹೊಸ ವರ್ಷ ನಮಗೆ ಹಬ್ಬವಲ್ಲ ಎಂದಿರುವ ಸಚಿವ ಸುಧಾಕರ್, ಈ ಸಂದರ್ಭದಲ್ಲಿ ಹೊಸ ವರ್ಷಾಚರಣೆ ಅರ್ಥಹೀನ. ಜನರು ಜವಾಬ್ದಾರಿಯುತವಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ