ಮೇ 1ರಿಂದ ಲಸಿಕೆ ಕಷ್ಟ


Team Udayavani, Apr 30, 2021, 6:40 AM IST

ಮೇ 1ರಿಂದ ಲಸಿಕೆ ಕಷ್ಟ

ಬೆಂಗಳೂರು/ಹೊಸದಿಲ್ಲಿ: ಲಸಿಕೆ ಕೊರತೆ ಯಿಂದಾಗಿ 18 ವರ್ಷ ತುಂಬಿದ ಎಲ್ಲರಿಗೂ ಮೇ 1ರಿಂದ ಲಸಿಕೆ ನೀಡುವ ಅಭಿಯಾನ ಆರಂಭವಾಗುವುದಿಲ್ಲ. ಮೇ 3ನೇ ವಾರದಲ್ಲಷ್ಟೇ ಆರಂಭವಾಗುವ ಸಾಧ್ಯತೆಗಳಿವೆ.

ಮೇ 1ರಿಂದ ದೇಶಾದ್ಯಂತ 18ರಿಂದ 45 ವರ್ಷದೊಳಗಿನ ಎಲ್ಲರಿಗೂ ಲಸಿಕೆ ವಿತರಣೆ ಆರಂಭವಾಗಬೇಕಾಗಿತ್ತು. ಆದರೆ ಕರ್ನಾಟಕದಲ್ಲಿ ಲಸಿಕೆ ದಾಸ್ತಾನು ಇಲ್ಲದಿರುವುದರಿಂದ ಇದು ಕಷ್ಟಸಾಧ್ಯ. ಹೀಗಾಗಿ ಕೋವಿನ್‌ ಪೋರ್ಟಲ್‌ನಲ್ಲೂ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೋಂದಣಿಗೆ ಅವಕಾಶ ನೀಡಲಾಗಿದೆ.

ಕರ್ನಾಟಕದ ಆರೋಗ್ಯ ಇಲಾಖೆ ಮೂಲಗಳ ಪ್ರಕಾರ ಸೋಂಕು ಹೆಚ್ಚಳವಾಗಿರುವುದರಿಂದ 45 ವರ್ಷ ಮೇಲ್ಪಟ್ಟವರು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಇವರಿಗೂ ಲಸಿಕೆಯ ಕೊರತೆ ಆಗಿದೆ. ಸದ್ಯ ರಾಜ್ಯದಲ್ಲಿ 8 ಲಕ್ಷ ಡೋಸ್‌ ದಾಸ್ತಾನು ಇದ್ದು, ಇದನ್ನು 45 ವರ್ಷ ಮೀರಿದವರಿಗೆ ಮಾತ್ರ ಕೊಡಬೇಕು ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ.

ಕನಿಷ್ಠ 30 ಲಕ್ಷ ಲಸಿಕೆ ದಾಸ್ತಾನು :

ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಿದರೆ ನಿತ್ಯ 4-5 ಲಕ್ಷ ಡೋಸ್‌ ಬೇಕಾಗುತ್ತದೆ. ಹೀಗಾಗಿ ಕನಿಷ್ಠ 30 ಲಕ್ಷ ದಾಸ್ತಾನು ಇದ್ದರೆ ಮಾತ್ರವೇ ಸುಗಮವಾಗಿ ಲಸಿಕೆ ಅಭಿಯಾನ ನಡೆಯಲು ಸಾಧ್ಯ ಎಂದು ಲಸಿಕೆ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ.

ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಿಗೆ ಆದ್ಯತೆ :

ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿರುವ ಜಿಲ್ಲೆಗಳಿಗೆ ಆದ್ಯತೆಯಲ್ಲಿ ಸರಬರಾಜು ಮಾಡಲಾಗುತ್ತಿದೆ. ಈ ಜಿಲ್ಲೆಗಳಿಗೆ ತುರ್ತಾಗಿ ಲಸಿಕೆ ನೀಡಿ ಹೆಚ್ಚು ಜನರಿಗೆ ಲಸಿಕೆ ಹಾಕಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ಲಸಿಕೆ ವಿಭಾಗದ ಉಪ ನಿರ್ದೇಶಕಿ ಡಾ| ಬಿ.ಎನ್‌. ರಜನಿ ತಿಳಿಸಿದ್ದಾರೆ.

ಸಿದ್ದರಾಮಯ್ಯಗೆ ಮಾಹಿತಿ? :

ದಾಸ್ತಾನು ಕೊರತೆ ಹಿನ್ನೆಲೆಯಲ್ಲಿ ಮೇ 1ರಿಂದ 18-44 ವರ್ಷದವರಿಗೆ ಲಸಿಕೆ ನೀಡಲು ಕಷ್ಟ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಹಂತ ಹಂತವಾಗಿ ಲಸಿಕೆ: ಸಿಎಂ  :

ಮೇ 1ರಿಂದ ಲಸಿಕೆ ಅಭಿಯಾನ ಆರಂಭವಾಗುವುದಿಲ್ಲ ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ಹಂತ ಹಂತವಾಗಿ ಲಸಿಕೆ ಹಾಕಲಾಗುತ್ತದೆ ಎಂದಿರುವ ಅವರು, ಅಭಿಯಾನ ಆರಂಭವಾಗುವ ದಿನಾಂಕದ ಬಗ್ಗೆ ಏನನ್ನೂ ಹೇಳಿಲ್ಲ.

ಖಾಸಗಿಯಲ್ಲಿಯೂ ಇಲ್ಲ :

ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಅರ್ಧಕ್ಕರ್ಧ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಲಸಿಕೆ ಅಭಿಯಾನ ನಡೆಯುತ್ತಿಲ್ಲ. ಸರಕಾರಿ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ಸಾಧ್ಯವಾಗದ್ದರಿಂದ ಖಾಸಗಿಯವರಿಗೆ ಪೂರೈಕೆ ಇನ್ನಷ್ಟು ತಡವಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕುಪೀಡಿತರ ಆರೈಕೆಯೂ ನಡೆಯುತ್ತಿದೆ.

ಇತರ ರಾಜ್ಯಗಳಲ್ಲಿ  ಹೇಗೆ? :

ದಾಸ್ತಾನು ಕೊರತೆಯಿಂದಾಗಿ ದಿಲ್ಲಿ, ರಾಜಸ್ಥಾನ, ಪಂಜಾಬ್‌, ಮಹಾರಾಷ್ಟ್ರ, ತಮಿಳುನಾಡು, ಗುಜರಾತ್‌ ರಾಜ್ಯಗಳಲ್ಲಿ ಕೂಡ ಮೇ 15ರ ಬಳಿಕವೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಅಭಿಯಾನ ಆರಂಭವಾಗುವ ಸಾಧ್ಯತೆಗಳಿವೆ.

ಲಕ್ಷಣ ಇಲ್ಲದವರೂ ಆಸ್ಪತ್ರೆಗೆ :

ಸೋಂಕಿನ ಲಕ್ಷಣಗಳು ಇದ್ದು, ಪರೀಕ್ಷೆಯಲ್ಲಿ ನೆಗೆಟಿವ್‌ ಬಂದರೆ ಅಂಥವರನ್ನೂ ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ| ಸುಧಾಕರ್‌ ಹೇಳಿದ್ದಾರೆ. ಅಲ್ಲಿ ಅವರಿಗೆ ಸಿಂಡ್ರೋಮಿಕ್‌ ಚಿಕಿತ್ಸೆ ವಿಧಾನ ಅನುಸರಿಸಲಾಗುತ್ತದೆ. ಹಲವು ಪ್ರಕರಣಗಳಲ್ಲಿ ಪರೀಕ್ಷೆ ಮಾಡಿಸಿದರೂ ನೆಗೆಟಿವ್‌ ವರದಿ ಬರುತ್ತಿದೆ. ವ್ಯಕ್ತಿಗೆ ರೋಗ ಲಕ್ಷಣ ಇದ್ದರೂ ವರದಿಯಲ್ಲಿ ನೆಗೆಟಿವ್‌ ಬರುವುದರಿಂದ, ರೋಗ ತೀವ್ರತೆ ಹೆಚ್ಚಾದಾಗ ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ. ಇದಕ್ಕಾಗಿ ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಡ್ರೋಮಿಕ್‌ ವಿಧಾನ ಅನುಸರಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. ಈ ವಿಧಾನದಲ್ಲಿ ಸಂಬಂಧಪಟ್ಟ ವೈದ್ಯರು ರೋಗಿಗಳ ಸ್ಥಿತಿಯನ್ನು ಪ್ರಮಾಣೀ ಕರಿಸುತ್ತಾರೆ. ಬಳಿಕ ರೋಗಿಗೆ ಪ್ರತ್ಯೇಕ ಸಂಖ್ಯೆ ನೀಡಿ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ.

ಒಂದು ಕೋಟಿ ಡೋಸ್‌ ಲಸಿಕೆಗೆ ಬೇಡಿಕೆ ಸಲ್ಲಿಸಿದ್ದೇವೆ. ಪೂರೈಕೆಯನ್ನು ಆಧರಿಸಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ದಿನಾಂಕ ತಿಳಿಸುತ್ತೇವೆ. ಆದಷ್ಟು  ಶೀಘ್ರ ಲಸಿಕೆ ಹಾಕಲು ಕ್ರಮ ಕೈಗೊಳ್ಳುತ್ತೇವೆ. -ಪಿ. ರವಿಕುಮಾರ್‌, ಮುಖ್ಯ ಕಾರ್ಯದರ್ಶಿ

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.