ಕರ್ನಾಟಕ ಕೋವಿಡ್-19 ಕಳವಳ: ರಾಜ್ಯದಲ್ಲಿಂದು 378 ಜನರಿಗೆ ಸೋಂಕು ದೃಢ
Team Udayavani, Jun 6, 2020, 5:58 PM IST
ಬೆಂಗಳೂರು: ರಾಜ್ಯದಲ್ಲಿ ಜನರ ದೇಹಕ್ಕೆ ಕೋವಿಡ್-19 ಸೋಂಕು ಸೇರಿರುವುದು ಇಂದು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ ಐದು ಸಾವಿರ್ ಗಡಿ ದಾಟಿದ್ದು, 5213ಕ್ಕೆ ಏರಿಕೆಯಾಗಿದೆ.
ಇಂದೂ ಕೂಡಾ ಕೋವಿಡ್-19 ಸೋಂಕಿತರಲ್ಲಿ ಹೆಚ್ಚಿನವರು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದವರೇ ಆಗಿದ್ದಾರೆ. ಇಂದು ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 121 ಜನರಿಗೆ ಸೋಂಕು ಕಾಣಿಸಿಕೊಂಡರೆ, ಯಾದಗಿರಿ ಜಿಲ್ಲೆಯಲ್ಲಿ103 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಕಲಬುರಗಿಯಲ್ಲಿ ಇಂದು 69 ಹೊಸ ಸೋಂಕು ಪ್ರಕರಣಗಳು ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಹೊಸ ಪ್ರಕರಣಗಳು, ಬೆಂಗಳೂರು ನಗರದಲ್ಲಿ 18 ಪ್ರಕರಣಗಳು ದೃಢವಾಗಿದೆ.
ವಿಜಯಪುರ ಮತ್ತು ದಾವಣಗೆರೆಯಲ್ಲಿ ತಲಾ ಆರು ಪ್ರಕರಣಗಳು, ಬೆಳಗಾವಿ ಐದು, ಮಂಡ್ಯ, ಹಾಸನ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ತಲಾ ಮೂರು, ರಾಯಚೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡದಲ್ಲಿ ತಲಾ ಎರಡು ಸೋಂಕು ಪ್ರಕರಣಗಳು ದೃಢವಾಗಿದ್ದರೆ, ಬೀದರ್, ತುಮಕೂರು, ಕೋಲಾರ, ಕೊಪ್ಪಳ ಜಿಲ್ಲೆಗಳಲ್ಲಿ ತಲಾ ಒಂದು ಕೋವಿಡ್-19 ಸೋಂಕು ಪ್ರಕರಣ ದೃಢವಾಗಿದೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 280 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1968 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 3184 ಸಕ್ರೀಯ ಪ್ರಕರಣಗಳಿದ್ದು, 59ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ