Attibele; ಪಟಾಕಿ ಗೋಡೌನ್ ನಲ್ಲಿ ಭೀಕರ ಅವಘಡ : ಕನಿಷ್ಠ 13 ಮಂದಿ ಮೃತ್ಯು
Team Udayavani, Oct 7, 2023, 9:20 PM IST
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆ-ಹೊಸೂರು ಗಡಿಯಲ್ಲಿರುವ ಗೋದಾಮಿನಲ್ಲಿ ಶನಿವಾರ ಸಂಜೆ ಪಟಾಕಿ ಬಾಕ್ಸ್ ಗಳನ್ನು ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಭೀಕರ ಅವಘಡ ಸಂಭವಿಸಿದ್ದು ಕನಿಷ್ಠ 13 ಮಂದಿ ಸಜೀವ ದಹನಗೊಂಡಿದ್ದಾರೆ.
ಅಗ್ನಿ ಶಾಮಕ ದಳದ ಹಲವು ವಾಹನಗಳು ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ರಾಷ್ಟ್ರೀಯ ಹೆದ್ದಾರಿ 44 ರ ಬದಿಯಲ್ಲೇ ಘಟನೆ ನಡೆದಿದ್ದು ಭಾರೀ ಹೊಗೆ ಆವರಿಸಿಕೊಂಡಿತ್ತು.ಜನರನ್ನು ನಿಯಂತ್ರಿಸಲು ಪೊಲೀಸರು ಕಾರ್ಯಾಚರಣೆಗಿಳಿದಿದ್ದರು.
ಸ್ಥಳದಲ್ಲಿದ್ದ 20 ಮಂದಿ ಕಾರ್ಮಿಕರ ಪೈಕಿ ನಾಲ್ಕು ಮಂದಿ ಬಚಾವ್ ಆಗಿದ್ದು, ಈಗಾಗಲೇ 13 ಮಂದಿಯ ಶವಗಳು ಪತ್ತೆಯಾಗಿವೆ. ಇನ್ನೂ ಮೂವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಪಟಾಕಿ ಗೋದಾಮು ಸುಟ್ಟು ಭಸ್ಮವಾಗಿದ್ದು, ಅಕ್ಕಪಕ್ಕದ ಕೆಲವು ಅಂಗಡಿಗಳು ಮತ್ತು 9 ವಾಹನಗಳು ಜಖಂಗೊಂಡಿವೆ.
ಅವಘಡದಲ್ಲಿ ಪಟಾಕಿ ಗೋದಾಮಿನ ಮಾಲಕ ಸೇರಿ ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಿರುವ ಬಗ್ಗೆ ವರದಿಯಾಗಿದೆ. ಮೃತರ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ