ಕೋವಿಡ್ ಚಿಕಿತ್ಸೆಯ ಮೇಲೆ ನಿಗಾ ಇಡಲು ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಿ: ಸಿದ್ದರಾಮಯ್ಯ
Team Udayavani, Jun 30, 2020, 2:49 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ದೂರುಗಳು ಇವುಗಳ ಮೇಲೆ ನಿಗಾ ಇಡಲು ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಪಕ್ಷಗಳಲ್ಲಿರುವ ವೃತ್ತಿನಿರತ ನಾಯಕರನ್ನು ಹಾಗೂ ವೈದ್ಯಕೀಯ ಶಿಕ್ಷಣ ಪಡೆದಿರುವವರನ್ನು ಸಮಿತಿಗೆ ಸೇರಿಸಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್-19 ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ. ಮುಖ್ಯಮಂತ್ರಿಯವರೆ ಈ ಕಡೆ ಗಮನ ಹರಿಸಿ ಎಂದಿದ್ದಾರೆ.
ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ,ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಯಡಿಯೂರಪ್ಪನವರೇ ಇದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್