ಒಂಟಿ ಮಹಿಳೆಯರೇ ಟಾರ್ಗೆಟ್: ಹಣಕ್ಕಾಗಿ ತಲೆ ಒಡೆದು,ಹೊಟ್ಟೆ ಹರಿದು..ಅಬ್ಬಾ ಇದೆಂಥಾ ಪೈಶಾಚಿಕತೆ


Team Udayavani, Jul 26, 2022, 6:20 PM IST

ಒಂಟಿ ಮಹಿಳೆಯರೇ ಟಾರ್ಗೆಟ್: ಹಣಕ್ಕಾಗಿ ತಲೆ ಒಡೆದು,ಹೊಟ್ಟೆ ಹರಿದು..ಅಬ್ಬಾ ಇದೆಂಥಾ ಪೈಶಾಚಿಕತೆ

ಧಾರವಾಡ : ನೀವು ಒಂಟಿ ಮಹಿಳೆಯಾಗಿ ಜೀವನ ನಡೆಸುತ್ತಿದ್ದೀರಾ ? ನೀವು ಒಬ್ಬರೇ ದನಕರು ಮೇಯಿಸುತ್ತ ಹೊಲಕ್ಕೆ ಹೋಗುತ್ತೀರಾ ? ಹಾಗಾದರೆ ಇನ್ನು ಮುಂದೆ ಎಚ್ಚರಿಕೆಯಿಂದಲೇ ಇರಿ. ಅತ್ಯಂತ ಪೈಶಾಚಿಕ ಮನಸ್ಥಿತಿಯ ದಂಡುಪಾಳ್ಯ ಗ್ಯಾಂಗ್ ಮಾದರಿಯ ಕ್ರೂರಿಗಳು ಕೇವಲ ಮೋಜು ಮಸ್ತಿಗಾಗಿ ಒಂಟಿ ಮಹಿಳೆಯರನ್ನು ಹತ್ಯೆ ಮಾಡುತ್ತಿದ್ದಾರೆ.

ಹೌದು…,ಕಷ್ಟಪಟ್ಟು ದುಡಿದು ನಾಲ್ಕು ಕಾಸು ಉಳಿಸಿಕೊಂಡು ಸಂಸ್ಕೃತಿಯ ಸಂಕೇತವಾದ ತಾಳಿ,ಬೆಂಡೋಲಿ,ಮೂಗುತಿಯನ್ನು ಕೂಡ ಹೆಣ್ಣು ಮಕ್ಕಳು ಇಟ್ಟುಕೊಳ್ಳದಷ್ಟು ಕಾಲ ಕೆಟ್ಟು ಹೋಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ಕಳೆದ ಎರಡು ತಿಂಗಳಿನಲ್ಲಿ ಇಬ್ಬರು ಮಹಿಳೆಯರನ್ನು ಅಪಹರಿಸಿ ಕೊಲೆ ಮಾಡಿ ಅವರ ಮೈಮೇಲೆ ಇದ್ದ ಬಂಗಾರದ ಆಭರಣ ಕದ್ದು ಅವರ ಶವವನ್ನು ಸುಟ್ಟು ಹಾಕಿದ ಪ್ರಕರಣವನ್ನು ಧಾರವಾಡ ಜಿಲ್ಲೆಯ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೇಧಿಸಿದ್ದು ಕಡೆಗೂ ಪೈಶಾಚಿಕ ಕೃತ್ಯ ವೆಸಗಿದ ಆರು ಆರೋಪಿಗಳನ್ನು  ಒದ್ದು ಒಳಗೆ ಹಾಕಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಪ್ರಕರಣ ಕುರಿತು ಮಾಹಿತಿ ನೀಡಿ, ಹುಬ್ಬಳ್ಳಿಯ ಈಶ್ವರ ನಗರದಿಂದ ಕಾಣೆಯಾಗಿ ಕಲಘಟಗಿ ತಾಲೂಕಿನ ಕಾಡನಕೊಪ್ಪದ ಬಳಿ ಹಾಗೂ ತಂಬೂರ ಕ್ರಾಸ್ ಬಳಿ ಅರೆ ಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯರಿಬ್ಬರು ದುಷ್ಕರ್ಮಿಗಳಿಂದ ಕೊಲೆಯಾಗಿದ್ದಾರೆ. ಮೋಜು ಮಸ್ತಿಯ ಉದ್ದೇಶಕ್ಕಾಗಿ ಹುಬ್ಬಳ್ಳಿಯ ಈಶ್ವರ ನಗರ ನಿವಾಸಿ ಇಂದಿರಾಬಾಯಿ ಪವಾರ, (73) ಎಂಬ ಮಹಿಳೆಯನ್ನು ಮೇ 11 ರಂದು ಅಪಹರಿಸಿ ಕಾಡನಕೊಪ್ಪ ಬಳಿ ಸುಟ್ಟು ಹಾಕಿದ್ದರು. ನಂತರ ಜು.2 ರಂದು ಇದೇ ಮಾದರಿಯಲ್ಲೇ ಈಶ್ವರ ನಗರ ಇನ್ನೋರ್ವ ನಿವಾಸಿ ಮಹಾದೇವಿ ನೀಲಣ್ಣವರ(52) ಅವರನ್ನು ಕೂಡ ಕೊಲೆ ಮಾಡಿ ಕಲಘಟಗಿ ತಾಲೂಕಿನ ತಂಬೂರು ಕ್ರಾಸ್ ಬಳಿ ಸುಟ್ಟು ಹಾಕಿದ್ದರು. ಇದು ತೀವ್ರ ಆತಂಕವನ್ನುಂಟು ಮಾಡಿದ್ದ ಪ್ರಕರಣವಾಗಿತ್ತು ಎಂದರು.

ಅದರಗುಂಚಿ ಆರೋಪಿಗಳು : ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಪೈಕಿ ಸಾಗರ ಮೂಲದ ದೇವರಾಜ ಮೊಗಲೇರ,ಅದರಗುಂಚಿ ಗ್ರಾಮದ ಕಾಳಪ್ಪ ರಘುವೀರ ರೋಗಣ್ಣವರ, ಬಸವರಾಜ ಶಂಕರಪ್ಪ ವಾಳದ, ಮಹಮ್ಮದ ರಫೀಕ ಬಡಿಗೇರ, ಶಿವಾನಂದ ಕೆಂಚಣ್ಣವರ ಮತ್ತು ಗಂಗಪ್ಪ ಮರತಂಗಿ ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲರೂ 30-40 ವಯಸ್ಸಿನ ಆಸುಪಾಸಿನ ವಯಸ್ಸಿನವರಾಗಿದ್ದಾರೆ ಎಂದರು.

ಕೇವಲ ಮೋಜು ಮಸ್ತಿಗಾಗಿ ಬೇಕಾಗುವ ಹಣಕ್ಕಾಗಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಬಹಳ ಎಚ್ಚರಿಕೆಯಿಂದ ಸಾಕ್ಷಿಗಳನ್ನು ನಾಶ ಮಾಡಿ ತಪ್ಪಿಸಿಕೊಳ್ಳುತ್ತಿದ್ದ ಈ ಗ್ಯಾಂಗ್‌ನ್ನು ಕಷ್ಟುಪಟ್ಟು ಹಿಡಿದು ಹಾಕಿದ್ದೇವೆ. ನಾವು ರಚಿಸಿದ ತನಿಖಾ ತಂಡದಲ್ಲಿನ ಎಲ್ಲರೂ ಅಭಿನಂದನಾರ್ಹರು ಎಂದು ಲೋಕೇಶ ಜಗಲಾಸರ ಹೇಳಿದರು.

ಉತ್ತರ ವಿಭಾಗದ ಐಜಿಪಿ ಎನ್.ಸತೀಶಕುಮಾರ್, ಹುಬ್ಬಳ್ಳಿ-ಧಾರವಾಡ ನ ಪೊಲೀಸ್ ಆಯುಕ್ತ ಲಾಭುರಾಮ್, ಡಿಎಸ್‌ಪಿ ಎಂ.ಬಿ.ಸಂಕದ, ನೇತೃತ್ವದ ಈ ತಂಡದಲ್ಲಿ ಕಲಘಟಗಿ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಶೈಲ ಕೌಜಲಗಿ, ರಮೇಶ ಗೋಕಾಕ, ಪ್ರಮೋದ ಯಲಿಗಾರ, ಜಯಪಾಲ ಪಾಟೀಲ, ಬಿಎಸ. ಮಂಟೂರ, ಬಿ.ಎನ್. ಸಾತನ್ನವರ ಒಳಗೊಂಡ ತನಿಖಾ ತಂಡ ಪ್ರಕರಣ ಬೇಧಿಸಿದೆ.

ಪೈಶಾಚಿಕತೆ ಮೆರೆದ ಆರೋಪಿಗಳು :

ಹಣ,ಚಿನ್ನಕ್ಕಾಗಿ ಕೊಲೆ ಮಾಡುವ ಅನೇಕ ಪ್ರಕರಣಗಳು ನಡೆಯುತ್ತವೆ. ಆದರೆ ಇಲ್ಲಿ ಹಣಕ್ಕಾಗಿಯೇ ಕೊಲೆ ಮಾಡಲು ನಿಶ್ಚಯಿಸಿ, ಸ್ಕೆಚ್ ಹಾಕಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡಲಾಗಿದೆ. ಮೊದಲು ಮಹಿಳೆಯರ ತಲೆ ಒಡೆದು ನಂತರ ಹೊಟ್ಟೆ ಹರಿದು ಕೈ,ಕಾಲುಗಳನ್ನು ಕತ್ತರಿಸಿ ಮುರಿದು ಚೀಲದಲ್ಲಿ ತುಂಬಿಕೊಂಡು ಹೋಗಿ ರಾಷ್ಟ್ರೀಯ ಹೆದ್ದಾರಿ 63 ರ ಅಕ್ಕಪಕ್ಕ ಪೆಟ್ರೋಲ್ ಸುರಿದು ಸುಡಲಾಗಿದೆ. ಅಷ್ಟೇಯಲ್ಲ, ಕೊಲೆ ಮಾಡಿದ್ದಕ್ಕೆ ಯಾವುದೇ ದಾಖಲೆ,ಸಾಕ್ಷಿಗಳು ಸಿಕ್ಕದಂತೆ ಮಾಡಲು ಯತ್ನಿಸಿದ್ದಾರೆ. ಮೊದಲ ಪ್ರಕರಣ ಮೇ 11,2022 ರಂದು ಮಹಿಳೆಯನ್ನು ಅವಳ ಮನೆಯಲ್ಲೆ ಕೊಲೆ ಮಾಡಿ ಸಾಗಿಸಿದ್ದರೆ, ಎರಡನೇ ಮಹಿಳೆಯನ್ನು ಜು 2 ರಂದು ಎಮ್ಮೆ ಮೇಯಿಸುತ್ತಿರುವಾಗಲೇ ಅಪಹರಿಸಿಕೊಂಡು ಹೋಗಿ ಕೊಲೆ ಮಾಡಿ ಚೀಲದಲ್ಲಿ ತುಂಬಿಕೊಂಡು ಮಾರುತಿ ವ್ಯಾನ್‌ನಲ್ಲಿ ಸಾಗಿಸಿ ತಂಬೂರು ಕ್ರಾಸ್ ಬಳಿ ಸುಡಲಾಗಿತ್ತು. ಮಹಿಳೆಯರನ್ನು ಇಷ್ಟೊಂದು ಕ್ರೂರವಾಗಿ ಕೊಲೆ ಮಾಡಿದ ಪಾತಕರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಎನ್‌ಕೌಂಟರ್ ಮಾಡಬೇಕಿತ್ತು ? :

ಮುಗ್ದ ಮಹಿಳೆಯರನ್ನು ಪೈಶಾಕಿಕವಾಗಿ ನಡೆಸಿಕೊಳ್ಳುವ ಪಾಪಿಗಳಿಗೆ ಎನ್‌ಕೌಂಟರ್ ಶಿಕ್ಷೆಯೇ ಸೂಕ್ತವಲ್ಲವೇ ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಎಸ್‌ಪಿ ಲೋಕೇಶ ಅವರು, ಕಾನೂನು ತನ್ನ ಚೌಕಟ್ಟಿನಲ್ಲಿಯೇ ಕೆಲಸ ಮಾಡಬೇಕು. ಪೊಲೀಸರು ಇದಕ್ಕೆ ಹೊರತಾಗಿಲ್ಲ. ಆರೋಪಿಗಳನ್ನು ಬಂಧಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದೇವೆ. ಕಾನೂನು ಅನ್ವಯ ಅವರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಹೇಳಿದರು.

ಮೂರನೇ ಕೊಲೆ ತಪ್ಪಿಸಿದ್ದೇವೆ : ಎಸ್‌ಪಿ ಲೋಕೇಶ :

ಈ ಆರು ಜನ ಆರೋಪಿಗಳು ಮೋಜಿಗೆ ಹಣ ಬೇಕಾದಾಗಲೆಲ್ಲ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿದ್ದು, ೨ನೇ ಪ್ರಕರಣ ಆಗುತ್ತಿದ್ದಂತೆಯೇ ತೀವ್ರ ಎಚ್ಚರಿಕೆ ವಹಿಸಿ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿದ್ದೇವೆ. ಇಲ್ಲವಾದರೆ ೩ನೇ ಮಹಿಳೆಯೂ ಕೊಲೆಯಾಗಬೇಕಿತ್ತು. ತನಿಖೆಗೆ ಅತ್ಯಂತ ಉತ್ತಮ ಸಹಕಾರ ನೀಡಿದ ಈಶ್ವರ ನಗರ ನಿವಾಸಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಲೋಕೇಶ ಜಗಲಾಸರ,ಎಸ್‌ಪಿ,ಧಾರವಾಡ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.