ಕೊಲೆ: ಮಂಗಳೂರಿನಲ್ಲಿ ದಂಪತಿ ಬಂಧನ: ಮೂರು ದಿನ ಹಿಂಸೆ ಕೊಟ್ಟು ಮೂಟೆ ಕಟ್ಟಿದ ಹಂತಕರು!
Team Udayavani, Jul 13, 2022, 12:46 AM IST
ಬೆಂಗಳೂರು: ತನ್ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತಿ ಜತೆ ಸೇರಿ ಕೊಲೆಗೈದು ಮೂಟೆ ಕಟ್ಟಿದ್ದ ಮಹಿಳೆ ಸೇರಿ ಮೂವರನ್ನು ಬೆಂಗಳೂರಿನ ಕಾಡುಗೋಡಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಕಾಡುಗೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ವಿಶಾಲ್ ಪ್ರಜಾಪತಿ (24), ಆತನ ಪತ್ನಿ ರೂಬಿ ಪ್ರಜಾಪತಿ (23) ಮತ್ತು ಕೊಲೆಯಾದ ಬಿಹಾರ ಮೂಲದ ಓಂನಾಥ್ಸಿಂಗ್ ಪತ್ನಿ ಗುಂಜಾದೇವಿ (35) ಬಂಧಿತರು. ಆರೋಪಿಗಳು ಕೆಲವು ದಿನಗಳ ಹಿಂದೆ ಗುಟ್ಕಾ ವ್ಯಾಪಾರಿ ಓಂನಾಥ್ ಸಿಂಗ್ (40) ಅವರನ್ನು ಮೂರು ದಿನ ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಕೊಲೆಗೈದು ಮೃತದೇಹವನ್ನು ಮೂಟೆ ಕಟ್ಟಿ ಬೆಳತೂರು-ಕೊಡಿಗೇಹಳ್ಳಿ ಮುಖ್ಯ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿಯ ಚರಂಡಿಯಲ್ಲಿ ಬಿಸಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಕೆಲವು ತಿಂಗಳ ಹಿಂದೆ ವಿಶಾಲ್ 15 ಸಾವಿರ ರೂ.ಸಾಲವನ್ನು ಓಂನಾಥ್ ಸಿಂಗ್ಗೆ ಕೊಟ್ಟು ಕೆಲಸಕ್ಕೆ ಮಂಗಳೂರಿಗೆ ಹೋಗಿದ್ದ. ಆಗ ರೂಬಿ ಮತ್ತು ಓಂನಾಥ್ ಆತ್ಮೀಯತೆ ಹೆಚ್ಚಾಗಿತ್ತು. ವಿಶಾಲ್ ವಾಪಸ್ ಮನೆಗೆ ಬಂದಾಗ ಈ ವಿಷಯ ಗೊತ್ತಾಗಿತ್ತು. ದೈಹಿಕ ಸಂಪರ್ಕಕ್ಕಾಗಿ ಓಂನಾಥ್ಸಿಂಗ್ ಬಲವಂತಪಡಿಸಿದ್ದ ಎನ್ನುವ ಅಂಶವನ್ನು ರೂಬಿ ತನ್ನ ಪತಿಗೆ ತಿಳಿಸಿದ್ದಳು. ಅನಂತರ ಅವರು ಈ ವಿಷಯವನ್ನು ಗುಂಜಾದೇವಿಗೆ ತಿಳಿಸಿ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ