ಫೇಸ್‌ಬುಕ್‌ ಮೂಲಕ ಕಿರುಕುಳ ನೀಡುತ್ತಿದ್ದವನ ಬಂಧನ


Team Udayavani, Feb 19, 2022, 8:15 AM IST

ಫೇಸ್‌ಬುಕ್‌ ಮೂಲಕ ಕಿರುಕುಳ ನೀಡುತ್ತಿದ್ದವನ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಮೊಬೈಲ್‌ ನಂಬರ್‌ ಸಂಗ್ರಹಿಸಿ  ಮೆಸೆಂಜರ್‌ ಹಾಗೂ ವಾಟ್ಸ್‌ಆ್ಯಪ್‌ ಮೂಲಕ ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಹಾಸನ ಮೂಲದ ಆರೋಪಿ ಆಗ್ನೇಯ ವಿಭಾಗದ ಸೆನ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿವಾಸಿ ಹರೀಶ್‌(32) ಬಂಧಿತ. ಜೆಸಿಬಿ ಚಾಲಕನಾಗಿರುವ ಹರೀಶ್‌, ಇತ್ತೀಚೆಗೆ ಬಿಳೆಕಹಳ್ಳಿ ನಿವಾಸಿಯೊಬ್ಬರ ಪತ್ನಿಗೆ ಕಳೆದ ಮೂರು ತಿಂಗಳಿಂದ ಪದೇ ಪದೇ ಕರೆ ಮಾಡುತ್ತಿದ್ದು, ಜತೆಗೆ ವಾಟ್ಸ್‌ಆ್ಯಪ್‌ ಮೂಲಕ ಪೋರ್ನ್ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಮೊಬೈಲ್‌ ನಂಬರ್‌ನ ಸಿಡಿಆರ್‌ ಸಂಗ್ರಹಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸೆನ್‌ ಠಾಣೆ ಪೊಲೀಸರು ಹೇಳಿದರು.

ಫೇಸ್‌ಬುಕ್‌ನಲ್ಲಿ ಮೊಬೈಲ್‌ ನಂಬರ್‌
ಫೇಸ್‌ಬುಕ್‌ನಲ್ಲಿ ಮಹಿಳೆಯರು ಹಾಗೂ ಯುವತಿಯರ ಮೊಬೈಲ್‌ ನಂಬರ್‌ ಸಂಗ್ರಹಿಸುತ್ತಿದ್ದ ಆರೋಪಿ, ನಂತರ ಮೆಸೆಂಜರ್‌ ಮೂಲಕ ಅವರೊಡನೆ ಚಾಟಿಂಗ್‌ ಮಾಡುತ್ತಿದ್ದ. ಸಲುಗೆಯಿಂದ ಮಾತನಾಡುತ್ತಿದ್ದಂತೆ ಅವರ ವಾಟ್ಸ್‌ಆ್ಯಪ್‌ಗೆ ವಿಡಿಯೋ ಕಾಲ್‌ ಮಾಡಿ ಮಾತನಾಡುತ್ತಿದ್ದ. ನಂತರ ಹಂತ-ಹಂತವಾಗಿ ಸಲುಗೆ ಬೆಳೆಸಿಕೊಂಡು ಫೋರ್ನ್ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ. ನಂತರ ವಿಡಿಯೋ ಕಾಲ್‌ ಅಥವಾ ರೆಗ್ಯೂಲರ್‌ ಕಾಲ್‌ ಮಾಡಿ ವಿಡಿಯೋ ಬಗ್ಗೆ ವಿಶ್ಲೇಷಣೆ ಮಾಡುವಂತೆ ಕಿರುಕುಳ ನೀಡುತ್ತಿದ್ದ. ಅದರಿಂದ ಬೇಸತ್ತ ಕೆಲವರು ಈತನಿಗೆ ಎಚ್ಚರಿಕೆ ನೀಡಿದರೆ, ಇನ್ನು ಕೆಲವರು ನಿರ್ಲಕ್ಷ್ಯ ಮಾಡಿ, ನಂಬರ್‌ ಬ್ಲಾಕ್‌ ಮಾಡಿ ದೂರು ಇರುತ್ತಿದ್ದರು.

ಈತನ ವಿಚಾರಣೆಯಲ್ಲಿ ಆರೋಪಿ ಸೈಕೋ ರೀತಿ ವರ್ತಿಸುತ್ತಿದ್ದು, ಮಹಿಳೆಯರಿಗೆ ಕಿರುಕುಳ ನೀಡುವುದನ್ನೇ ಅಭ್ಯಾಸ ಮಾಡಿಕೊಂಡಿದ್ದಾನೆ. ಈತನ ಮೊಬೈಲ್‌ ಜಪ್ತಿ ಮಾಡಿದಾಗ ಸುಮಾರು 10ಕ್ಕೂ ಹೆಚ್ಚು ಮಹಿಳೆಯರಿಗೆ ಫೋರ್ನ್ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸಿ ಕಿರುಕುಳ ನೀಡಿರುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಆರೋಪಿಯಿಂದ ಕಿರುಕುಳಕ್ಕೊಳಗಾದ ಮಹಿಳೆಯರು ಆಗ್ನೇಯ ವಿಭಾಗದ ಸೆನ್‌ ಠಾಣೆಗೆ ದೂರು ನೀಡಬಹುದು ಎಂದು ಸೆನ್‌ ಠಾಣೆ ಪೊಲೀಸರು ಹೇಳಿದರು.

 ವೈಯಕ್ತಿಕ ಮಾಹಿತಿ ಹೈಡ್‌ ಮಾಡಿ
ಫೇಸ್‌ಬುಕ್‌ ಖಾತೆ ಹೊಂದಿರುವವರು ಫೇಸ್‌ಬುಕ್‌ನ ಸೆಟಿಂಗ್ಸ್‌ ಮೂಲಕ ತಮ್ಮ ವೈಯಕ್ತಿಕ ಮಾಹಿತಿಯನ್ನು ಕಾಣದಂತೆ ಮಾಡಲು ಅವಕಾಶವಿದೆ. ಹೀಗಾಗಿ ಖಾತೆದಾರರು ತಮ್ಮ ಮೊಬೈಲ್‌ ನಂಬರ್‌, ಇ-ಮೇಲ್‌ ವಿಳಾಸ ಸೇರಿ ಎಲ್ಲ ವೈಯಕ್ತಿಕ ಮಾಹಿತಿಯನ್ನು ಹೈಡ್‌ ಮಾಡಿ. ತಮಗೆ ಸಂಬಂಧಿಸಿದ ಕೆಲ ವಿಡಿಯೋ ಅಥವಾ ಫೋಟೋವನ್ನು ಹಾಕಬೇಡಿ ಎಂದು ಸೈಬರ್‌ ಪೊಲೀಸರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.