ಕುಡಿಯಲು ಹಣ ನೀಡದ್ದಕ್ಕೆ ತಾಯಿಯನ್ನೇ ಕೊಂದ ಮಗ
Team Udayavani, Feb 26, 2022, 9:00 PM IST
ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಪುತ್ರನೇ ತಾಯಿಯನ್ನು ತಳ್ಳಿ ಕೊಂದಿರುವ ಘಟನೆ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೇವರಜೀವನಹಳ್ಳಿಯ ಜೋಪಡಿಯಲ್ಲಿ ವಾಸವಾಗಿದ್ದ ಯಮನಮ್ಮ(70) ಕೊಲೆಯಾದ ಮಹಿಳೆ. ಈ ಸಂಬಂಧ ಆಕೆಯ ಪುತ್ರ ಅಂಬರೀಶ್(35) ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿ ಅಂಬರೀಶ್ ಕೂಲಿ ಕೆಲಸ ಮಾಡಿಕೊಂಡಿದ್ದು, ಜತೆಗೆ ವಿಪರೀತ ಮದ್ಯ ವ್ಯಸನಿಯಾಗಿದ್ದಾನೆ. ಈ ಮಧ್ಯೆ ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮತ್ತೊಂದೆಡೆ ಪುತ್ರ ಸರಿಯಾಗಿ ನೋಡಿಕೊಳ್ಳದರಿಂದ ತಾಯಿ ಯಮನಮ್ಮ ರಸ್ತೆಗಳಲ್ಲಿ ಭೀಕ್ಷೆ ಬೇಡುತ್ತಿದ್ದರು. ನಿತ್ಯ ಒಂದಿಲ್ಲೊಂದು ವಿಚಾರಕ್ಕೆ ತಾಯಿ ಜತೆ ಜಗಳ ಮಾಡುತ್ತಿದ್ದ.
ಶನಿವಾರ ಕೂಡ ಭೀಕ್ಷೆ ಬೇಡಿ ಮನೆಗೆ ಬಂದ ಯಮನಮ್ಮ ಜತೆ ಆರೋಪಿ ವಾಗ್ವಾದ ನಡೆಸಿ,ಕುಡಿಯಲು ಹಣ ಕೊಡುವಂತೆ ಪೀಡಿಸಿದ್ದಾನೆ. ತಾಯಿ ನಿರಾಕರಿಸಿದಾಗ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಜೋಪಡಿಯಿಂದ ಹೊರಕಡೆ ಕರೆತಂದು ಜಗಳವಾಡಿ ಜೋರಾಗಿ ತಳ್ಳಿದ್ದು,ಪಕ್ಕದಲ್ಲೇ ಇದ್ದ ಚಪ್ಪಡಿ ಕಲ್ಲಿಗೆ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಉಂಟಾಗಿ ಯಮನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಮಾರತ್ತಹಳ್ಳಿ ಪೊಲೀಸರು ಮದ್ಯದ ಅಮಲಿನಲ್ಲಿ ಬಿದ್ದಿದ್ದ ಆರೋಪಿಯನ್ನು ವಶಕ್ಕೆ ಪಡೆದು, ವೈದ್ಯಕೀಯ ತಪಾಸಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?