ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ!
ದೇವಸ್ಥಾನದ ಕೆರೆಯಲ್ಲಿ ವಾಸವಾಗಿರುವ ದೇವರ ಮೊಸಳೆ ಎಂದೇ ಭಕ್ತರ ನಂಬಿಕೆ...
Team Udayavani, Oct 22, 2020, 11:53 AM IST
ಕಾಸರಗೋಡು: ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿರುವ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದೊಳಗೆ “ಬಬಿಯಾ” ಮೊಸಳೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಈ ದೇವಸ್ಥಾನ ಕೆರೆಯ ಮಧ್ಯದದಲ್ಲಿದ್ದು, ಮಂಗಳೂರಿನಿಂದ ಸುಮಾರು 45 ಕಿಲೋ ಮೀಟರ್ ದೂರದಲ್ಲಿ ಈ ದೇವಸ್ಥಾನವಿದೆ.
ದೇವಸ್ಥಾನದ ಕೆರೆಯಲ್ಲಿ ವಾಸವಾಗಿರುವ ದೇವರ ಮೊಸಳೆ ಎಂದೇ ಭಕ್ತರು ನಂಬಿರುವ “ಬಬಿಯಾ” ಎನ್ನುವ ಮೊಸಳೆ ದೇವಸ್ಥಾನದ ಗರ್ಭಗುಡಿ ಸಮೀಪ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ದೇವಾಲಯದ ಮೂಲಗಳ ಪ್ರಕಾರ, ದೇವಸ್ಥಾನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೊಸಳೆ ಬಬಿಯಾ ಗರ್ಭಗುಡಿ ಒಳಗೆ ಪ್ರವೇಶಿಸಿರುವುದಾಗಿ ತಿಳಿಸಿದೆ.
ಕುಂಬಳೆಯ ಶ್ರೀಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಕೆರೆಯಲ್ಲಿರುವ “ಬಬಿಯಾ” ಮೊಸಳೆಗೆ ಪ್ರತಿನಿತ್ಯ ಪೂಜೆಯ ನಂತರ ನಿರ್ದಿಷ್ಟ ಸ್ಥಳವೊಂದರಲ್ಲಿ ನೈವೇದ್ಯ ಅರ್ಪಿಸುವುದು ವಾಡಿಕೆಯಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.
ಕೆರೆಯ ಮಧ್ಯೆ ಇರುವ ಅನಂತಪದ್ಮನಾಭ ಸ್ವಾಮಿಯನ್ನು “ಬಬಿಯಾ” ಮೊಸಳೆ ಕಾವಲು ಕಾಯುವ ಕೆಲಸ ಮಾಡುತ್ತದೆ ಎಂಬ ನಂಬಿಕೆ ಭಕ್ತರದ್ದು. ಕೆರೆಯ ಮಧ್ಯೆದಲ್ಲಿ ಬಬಿಯಾ ಮೊಸಳೆ ವಾಸವಾಗಿದ್ದು, ಇದೇ ಮೊದಲ ಬಾರಿ ದೇವಾಲಯದ ಗರ್ಭಗುಡಿಯೊಳಗೆ ಬಂದು ಅಚ್ಚರಿ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!