ಮಂಡ್ಯದಲ್ಲಿ ಮೈತ್ರಿ ಬೇಕು ಎಂದು ಯಾರೂ ಗೋಗರೆಯುತ್ತಿಲ್ಲ:ಪುಟ್ಟರಾಜು
Team Udayavani, Oct 9, 2018, 12:30 PM IST
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ನ ಭದ್ರಕೋಟೆ. ಯಾರ ಬಳಿಯೂ ನಮಗೆ ಅಂಗಲಾಚಬೇಕಾದ ಸ್ಥಿತಿ ಇಲ್ಲ . ಮೈತ್ರಿಗಾಗಿ ಯಾರೂ ಗೋಗೆರೆಯುತ್ತಿಲ್ಲ ಎಂದು ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪುಟ್ಟರಾಜು ಚಲುವರಾಯ ಸ್ವಾಮಿ ಅವರ ವಿರುದ್ಧ ಕಿಡಿ ಕಾರಿದರು. ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಈ ಬಗ್ಗೆ ವರಿಷ್ಠರಾದ ದೇವೇಗೌಡರು ಮತ್ತು ಕುಮಾರಣ್ಣ ತೀರ್ಮಾನ ಮಾಡುತ್ತಾರೆ ಎಂದರು.
ಇದೇ ವೇಳೆ ಚಲುವರಾಯಸ್ವಾಮಿ ಅವರಿಗೆ ಟಾಂಗ್ ನೀಡಿ ಈಗ ಡೆಡ್ ಹಾರ್ಸ್ಗಳೆಲ್ಲಾ ಮಾತನಾಡುವ ಹಾಗೆ ಆಗಿದೆ. ನಾಗಮಂಗಲದ ಇತಿಹಾಸದಲ್ಲಿ 52 ಸಾವಿರ ಮತಗಳ ಅಂತರದಿಂದ ಸೋತದ್ದು ಎಂದಾದರೂ ನೋಡಿದ್ದೀರಾ . ಅವರು ಬಾಯಿ ಮುಚ್ಚಿಕೊಂಡು ಇರಲಿ ಎಂದರು.
ಜನ ಕೊಟ್ಟ ತೀರ್ಪಿನಿಂದ ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಳ್ಳಲಾಗಿದೆ. ಎರಡೂ ಪಕ್ಷದ ನಾಯಕರ ತೀರ್ಮಾನಕ್ಕೂ ಬದ್ಧರಾಗಿರಬೇಕಾಗುತ್ತದೆ. ಚಲುವರಾಯ ಸ್ವಾಮಿ ಅವರೂ ನಡೆಯಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ