ಉಪಚುನಾವಣೆ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ : ಸಿ.ಟಿ. ರವಿ
Team Udayavani, Mar 20, 2021, 5:16 PM IST
ಬೆಂಗಳೂರು : ಉಪಚುನಾವಣೆ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ, ಸ್ಥಳೀಯ ಅಭಿಪ್ರಾಯ ಪಡೆದು ವರಿಷ್ಠರಿಗೆ ಕಳುಹಿಸುವುದನ್ನು ರಾಜ್ಯಾಧ್ಯಕ್ಷರಿಗೆ ಬಿಡಲಾಗಿದೆ. ಮಸ್ಕಿ ಕ್ಷೇತ್ರದಲ್ಲಿ ಸಹಜವಾಗಿ ಶಾಸಕರಿದ್ದವರು ರಾಜೀನಾಮೆ ಕೊಟ್ಟ ಕಾರಣ ಅವರಿಗೆ ನ್ಯಾಯ ಒದಗಿಸಬೇಕಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಡಿ ವಿಚಾರದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ, ಕೋರ್ ಕಮಿಟಿಯಲ್ಲಿ ಸಿಡಿ ವಿಚಾರ ಯಾವುದೇ ಚರ್ಚೆ ಆಗಿಲ್ಲ. ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಎಷ್ಟು ದಿನಗಳ ಒಳಗೆ ಆಗುತ್ತದೆ ಎಂಬುದನ್ನು ರಾಜ್ಯಾಧ್ಯಕ್ಷರಿಗೆ ಕೇಳಿ ಎಂದರು.
ಬೆಳಗಾವಿಯಲ್ಲಿ ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡುವ ವಿಚಾರ ಕೂಡ ವರಿಷ್ಠರಿಗೆ ಬಿಟ್ಟಿದ್ದು, ಅಂಗಡಿ ಕುಟುಂಬದ ಅಭಿಪ್ರಾಯದ ಬಗ್ಗೆಯೂ ಚರ್ಚೆಯಾಗಿದೆ ಎಂದರು.