ಹಳ್ಳಿ ವಿದ್ಯಾರ್ಥಿಗಳಿಗೆ ಸಿಯುಇಟಿ ಕಂಟಕ?

ಪದವಿ ಪ್ರವೇಶಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯಿಂದ ಅನಗತ್ಯ ತೊಂದರೆ

Team Udayavani, Apr 13, 2022, 7:10 AM IST

ಹಳ್ಳಿ ವಿದ್ಯಾರ್ಥಿಗಳಿಗೆ ಸಿಯುಇಟಿ ಕಂಟಕ?

ಬೆಂಗಳೂರು: ಗುಣಮಟ್ಟದ ಶಿಕ್ಷಣ ನೆಪದಲ್ಲಿ ವಿಶ್ವವಿದ್ಯಾ ನಿಲಯಗಳ ಅನುದಾನ ಆಯೋಗ (ಯುಜಿಸಿ) ರಾಷ್ಟ್ರಮಟ್ಟದಲ್ಲಿ ನಡೆಸಲು ಉದ್ದೇಶಿಸಿರುವ ವಿ.ವಿ.ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ)ಗೆ ಆಕ್ಷೇಪ ವ್ಯಕ್ತವಾಗಿದೆ. ಇದು ಗ್ರಾಮೀಣ ಪ್ರದೇಶ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ

ಶಿಕ್ಷಣದ ಕನಸನ್ನು ಕಿತ್ತುಕೊಳ್ಳಲಿದೆ ಎಂಬ ಆತಂಕ ಆರಂಭವಾಗಿದೆ. ಸದ್ಯ ವೃತ್ತಿಪರ ಕೋರ್ಸ್‌ಗಳಿಗೆ ಮಾತ್ರ ಸಿಇಟಿ ಇದೆ. ಇದನ್ನು ಪದವಿ ಕೋರ್ಸ್‌ಗಳಿಗೂ ವಿಸ್ತರಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಿಂದೆ ಸರಿಯಬಹುದು ಎಂದು ತಜ್ಞರು ಅಭಿ ಪ್ರಾಯ ಪಡುತ್ತಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಗ್ರಾಮೀಣ ಭಾಗದಲ್ಲಿ ಸೂಕ್ತ ಮಾರ್ಗದರ್ಶನ ಅಥವಾ ವಿಷಯ ತಜ್ಞರು ಇರುವುದಿಲ್ಲ. ಕೆಲವೆಡೆ ಗುಣ ಮಟ್ಟದ ಶಿಕ್ಷಣ ದೊರೆತರೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುತ್ತಿಲ್ಲ. ಗ್ರಾಮೀಣ ವಿದ್ಯಾರ್ಥಿಗಳು ಈಗಾಗಲೇ ನೀಟ್‌, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದುಳಿಯುತ್ತಿದ್ದಾರೆ. ಇದಕ್ಕೆ ಪದವಿ ಕೋರ್ಸ್‌ ಕೂಡ ಸೇರ್ಪಡೆಯಾಗಬಹುದು ಎಂಬುದು ತಜ್ಞರ ಆತಂಕ.

ವಂಚಿತರಾಗುವ ಆತಂಕ
ಸಾಮಾನ್ಯವಾಗಿ ಉನ್ನತ ಶ್ರೇಣಿ ಪಡೆದಿರುವವರು ವಿಜ್ಞಾನ ವಿಭಾಗ ಆಯ್ದುಕೊಳ್ಳುತ್ತಾರೆ. ಮುಂದಿನ ಆಯ್ಕೆ ವಾಣಿಜ್ಯಶಾಸ್ತ್ರ. ಕನಿಷ್ಠ ಉತ್ತೀರ್ಣ ಆಗಿರುವವರು ಕಲಾ ವಿಭಾಗ ಸೇರಿಕೊಳ್ಳುತ್ತಾರೆ. ರಾಜ್ಯ ಸರಕಾರ ಯಾವುದೇ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶ ಹೊಂದಿದೆ. ಹೀಗಾಗಿ ಮತ್ತೂಂದು ಪರೀಕ್ಷೆಯ  ಅಗತ್ಯವಿಲ್ಲ ಎಂದು ಬೆಂಗಳೂರು ವಿ.ವಿ. ವಿಶ್ರಾಂತ ಕುಲಪತಿ ಡಾ| ಎನ್‌. ಪ್ರಭುದೇವ್‌ ಹೇಳುತ್ತಾರೆ.

ಒಂದಲ್ಲ ಒಂದು ಕೋರ್ಸ್‌ಗಾಗಿ ಸಿಇಟಿ ಎದುರಿಸಲೇಬೇಕು ಎಂದಾ ದಾಗ ಸಹಜವಾಗಿಯೇ ಕೋಚಿಂಗ್‌ ಮಾಫಿಯಾ ಗ್ರಾಮೀಣ ಪ್ರದೇಶ ಗಳಿಗೂ ಹರಡಬಹುದು. ಇದರಿಂದ ಉನ್ನತ ಶಿಕ್ಷಣ ವ್ಯವಸ್ಥೆ ಹದಗೆಡಲಿದೆ ಎಂದು ಪ್ರಭುದೇವ್‌ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಹೊರೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ವರ್ಷಪೂರ್ತಿ ಸಿದ್ಧತೆ ನಡೆಸಿರುತ್ತಾರೆ. ಈ ಪರೀಕ್ಷೆ ನಡೆದ ತಿಂಗಳೊಳಗೆ ಮತ್ತೊಂದು ಪರೀಕ್ಷೆ ಎದುರಿಸುವುದು ಹೊರೆಯಾಗಲಿದೆ. ಇದರಿಂದ ಮೊದಲ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಬಹುದು. ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕ ಮಾತ್ರ ಪರಿಗಣಿಸುವ ನಿಯಮದಿಂದಲೂ ತೊಂದರೆ ಆಗಬಹುದು ಎಂದು ಬೆಂಗಳೂರು ವಿ.ವಿ.ಯ ವಿಶ್ರಾಂತ ಕುಲಪತಿ ಡಾ| ಎಂ.ಎಸ್‌. ತಿಮ್ಮಪ್ಪ ಅಭಿಪ್ರಾಯಪಟ್ಟಿದ್ದಾರೆ.

ವೈದ್ಯ ಕೋರ್ಸ್‌ ಪ್ರವೇಶದ ನೀಟ್‌ ವಿಫ‌ಲವಾಗಿದೆ. ಇಂಥ ಸಮಯದಲ್ಲಿ ಸಾಮಾನ್ಯ ಪದವಿಗಳಿಗೂ ಸಿಇಟಿ ಏರ್ಪಡಿಸಿದರೆ ಗ್ರಾಮೀಣ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ.
-ಡಾ| ಎನ್‌. ಪ್ರಭುದೇವ್‌, ವಿಶ್ರಾಂತ ಕುಲಪತಿ

ಸಿಯುಇಟಿಯಿಂದ ವಿದ್ಯಾರ್ಥಿಗಳಲ್ಲಿ ಪರಕೀಯ ಭಾವ ಹುಟ್ಟಲಿದೆ. ಉನ್ನತ ಶಿಕ್ಷಣದ ಸ್ವಾಯತ್ತೆ ಮತ್ತು ಕಾರ್ಯಭಾರಕ್ಕೆ ಅಡ್ಡಿ ಯಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ತತ್‌ಕ್ಷಣ ಮತ್ತೂಂದು ಪರೀಕ್ಷೆಗೆ ಸಿದ್ಧತೆ ಹೊರೆಯಾಗಲಿದೆ.
– ಡಾ| ಎಂ.ಎಸ್‌. ತಿಮ್ಮಪ್ಪ , ವಿಶ್ರಾಂತ ಕುಲಪತಿ

- ಎನ್‌.ಎಲ್‌. ಶಿವಮಾದು

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.