ಸೈಬರ್ ಭದ್ರತಾ ನೀತಿ: ಸರಕಾರಕ್ಕೆ ನೆರವು ನೀಡಲು ಐಬಿಎಂ ಆಸಕ್ತಿ

ಐಟಿ, ಬಿಟಿ ಸಚಿವರನ್ನು ಭೇಟಿಯಾದ ಕಂಪನಿಯ ಉನ್ನತ ನಿಯೋಗ

Team Udayavani, Apr 12, 2022, 3:20 PM IST

ಸೈಬರ್ ಭದ್ರತಾ ನೀತಿ: ಸರಕಾರಕ್ಕೆ ನೆರವು ನೀಡಲು ಐಬಿಎಂ ಆಸಕ್ತಿ

ಬೆಂಗಳೂರು: ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ತಾನು ಗಳಿಸಿರುವ ಪರಿಣತಿಯನ್ನು ಕರ್ನಾಟಕ ಸರಕಾರದೊಂದಿಗೆ ಹಂಚಿಕೊಳ್ಳಲು ಸಿದ್ಧವಿದ್ದು, ಸೈಬರ್ ಭದ್ರತಾ ನೀತಿಯನ್ನು ರೂಪಿಸಲು ಅಗತ್ಯ ನೆರವು ನೀಡಲು ಮುಕ್ತ ಮನಸ್ಸು ಹೊಂದಿರುವುದಾಗಿ ಪ್ರತಿಷ್ಠಿತ ಐಬಿಎಂ ಕಂಪನಿ ಹೇಳಿದೆ.

ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಮಂಗಳವಾರ ವಿಕಾಸ ಸೌಧದಲ್ಲಿ ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿದ ಮೂವರು ಸದಸ್ಯರ ಐಬಿಎಂ ನಿಯೋಗವು ಈ ಭರವಸೆ ನೀಡಿದೆ.

ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರಕಾರವು ಅಗತ್ಯ ವಿಷಯಗಳಲ್ಲಿ ಐಬಿಎಂನ ನೆರವು ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ನಿಯೋಗದಲ್ಲಿ ಕಂಪನಿಯ ದಕ್ಷಿಣ ಏಷ್ಯಾ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ಪಟೇಲ್, ಐಬಿಎಂ ಕ್ಲೌಡ್ ಮತ್ತು ಕಾಗ್ನಿಟೀವ್ ಸಾಫ್ಟ್ ವೇರ್ ಲ್ಯಾಬ್ಸ್ ವಿಭಾಗದ ಉಪಾಧ್ಯಕ್ಷ ಗೌರವ್ ಶರ್ಮ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಬಾಲಾಜಿ ಇದ್ದರು.

ನಿಯೋಗದ ಪರವಾಗಿ ಮಾತನಾಡಿದ ಸಂದೀಪ್ ಪಟೇಲ್, ‘ಸೈಬರ್ ಭದ್ರತೆಗೆ ಸಂಬಂಧಿಸಿದಂತೆ ಐಬಿಎಂ ಇತ್ತೀಚೆಗೆ ಬೆಂಗಳೂರಿನಲ್ಲಿ ತನ್ನ ಸೆಕ್ಯುರಿಟಿ ಕಮಾಂಡ್ ಸೆಂಟರ್ ಅನ್ನು ತೆರೆದಿದೆ. ಸರಕಾರವು ತನ್ನ ದತ್ತಾಂಶಗಳ ಸುರಕ್ಷಿತ ಸಂಗ್ರಹಣೆಗೆ ಇದನ್ನು ಬಳಸಿಕೊಳ್ಳಬಹುದು. ಸರಕಾರವು ಈ ನಿಟ್ಟಿನಲ್ಲಿ ಆಸಕ್ತಿ ತೋರಿಸಿದರೆ, ಸರಕಾರದ ಸಿಬ್ಬಂದಿಗೆ ಕಂಪನಿಯ ವತಿಯಿಂದ ಸೂಕ್ತ ಮತ್ತು ದಕ್ಷ ತರಬೇತಿ ನೀಡಲಾಗುವುದು’ ಎಂದರು.

ಸೈಬರ್ ಭದ್ರತೆಯು ಮುಂದಿನ ದಿನಗಳಲ್ಲಿ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ. ಅದನ್ನು ಎದುರಿಸಲು ಈಗಿನಿಂದಲೇ ಸಜ್ಜಾಗುವುದು ಮುಖ್ಯವಾಗಿದೆ. ತಂತ್ರಜ್ಞಾನವನ್ನು ಆಧರಿಸಿರುವ ಜಗತ್ತಿನಲ್ಲಿ ಇಂತಹ ಕ್ರಮಗಳು ಅನಿವಾರ್ಯವಾಗಿವೆ. ಸೈಬರ್ ಭದ್ರತಾ ನೀತಿಯನ್ನು ಪಾಲಿಸಲು ಮುಂದಾಗಿರುವ ರಾಜ್ಯ ಸರಕಾರಕ್ಕೆ ಎಲ್ಲ ಬಗೆಯ ನೆರವು ನೀಡಲು ಸಿದ್ಧ. ಇದರ ಜತೆಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಮುಂತಾದ ಸಹಕಾರಿ ಸಂಸ್ಥೆಗಳಲ್ಲೂ ಐಬಿಎಂ ನೆರವಿನ ಕೈ ಜೋಡಿಸಲು ಉತ್ಸುಕವಾಗಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಐಟಿ ಬಿಟಿ ನಿರ್ದೇಶಕಿ ಮೀನಾ ನಾಗರಾಜ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಇದ್ದರು.

ರಾಜ್ಯದಲ್ಲಿ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಿದ್ದು, ಇವುಗಳ ಸಬಲೀಕರಣಕ್ಕೆ ರಾಜ್ಯ ಸರಕಾರ ಮುಂದಾಗಿರುವುದು ರಚನಾತ್ಮಕ ಕ್ರಮವಾಗಿದೆ. ಈ ವಲಯದಲ್ಲಿ ಅತ್ಯುತ್ತಮ ಪಠ್ಯಕ್ರಮ ಮತ್ತು ಸಂಶೋಧನಾ ವಿನ್ಯಾಸಗಳನ್ನು ರೂಪಿಸಲು ಕಂಪನಿಯ ನೆರವು ಬಯಸಿದರೆ ಸಹಾಯಹಸ್ತ ಚಾಚಲು ಐಬಿಎಂ ಸಿದ್ಧವಿದೆ. ಈ ಪರಿಣತಿಯನ್ನು ಬಳಸಿಕೊಂಡರೆ, ಮುಖ್ಯವಾಗಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಜಾಗತಿಕ ಗುಣಮಟ್ಟದ ಶಿಕ್ಷಣ ಲಭ್ಯವಾಗಲಿದೆ ಎಂದು ಪಟೇಲ್ ವಿವರಿಸಿದರು.

ಸರಕಾರವು ರಾಜ್ಯಾದ್ಯಂತ ಹೊಂದಿರುವ ಅಟಲ್ ಟಿಂಕರಿಂಗ್ ಲ್ಯಾಬ್ ಗಳನ್ನು ಉನ್ನತೀಕರಿಸುವುದಕ್ಕೆ ಕಂಪನಿಯು ಆಸಕ್ತಿ ಹೊಂದಿದೆ. ಇದಕ್ಕೆ ಸರಕಾರದಿಂದ ಸಹಕಾರವನ್ನು ಅಪೇಕ್ಷಿಸುತ್ತಿರುವುದಾಗಿ ಅವರು ಸಚಿವರ ಗಮನಕ್ಕೆ ತಂದರು.

ಇದಲ್ಲದೆ ಐಬಿಐಂ ತನ್ನ ಸಿಎಸ್ಆರ್ ಹೊಣೆಗಾರಿಕೆಯ ಭಾಗವಾಗಿ ರಾಜ್ಯದಲ್ಲಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಶೈಕ್ಷಣಿಕ ಪರಿಸರಕ್ಕೆ ನೀಡುತ್ತಿರುವ ಕೊಡುಗೆಗಳನ್ನು ಕುರಿತೂ ನಿಯೋಗವು ವಿಚಾರ ವಿನಿಮಯ ನಡೆಸಿತು.

ಬೆಂಗಳೂರಿನ ಕೃಷ್ಣರಾಜೇಂದ್ರ ಎಂಜಿನಿಯರಿಂಗ್ ಕಾಲೇಜನ್ನು ಅಭಿವೃದ್ಧಿಪಡಿಸುವ ಸಂಬಂಧ ಶೈಕ್ಷಣಿಕ ಪಾಲುದಾರಿಕೆ ವಹಿಸಿಕೊಳ್ಳುವಂತೆ ಸಚಿವರು ಕೋರಿದ್ದಕ್ಕೆ ಐಬಿಎಂ ನಿಯೋಗ‌ ಸಕಾರಾತ್ಮಕವಾಗಿ ಸ್ಪಂದಿಸಿತು. ಕಾಲೇಜನ್ನು ಯಾವ ರೀತಿ‌ ಅಭಿವೃದ್ಧಿ ಪಡಿಸುವ ಸಂಬಂಧ ಚರ್ಚಿಸಲಾಗುವುದು ಎಂದರು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.