ಸೈಕಲ್ ವಿತರಣೆ: ಗುಣಮಟ್ಟ ಪರಿಶೀಲನೆಗೆ ಸೂಚನೆ
Team Udayavani, Jun 22, 2019, 3:00 AM IST
ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಎಂಟನೇ ತರಗತಿ ಮಕ್ಕಳಿಗೆ ವಿತರಿಸುವ ಸೈಕಲ್ಗಳ ಗುಣಮಟ್ಟವನ್ನು ಕಡ್ಡಾಯವಾಗಿ ಪರಿಶೀಲಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲಾ ಉಪನಿರ್ದೇಶಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಿದೆ.
2019-20ನೇ ಸಾಲಿನ ಎಂಟನೇ ತರಗತಿ ಮಕ್ಕಳಿಗೆ ಸೈಕಲ್ ವಿತರಿಸುವುದಕ್ಕಾಗಿ ಎ-ವನ್ ಮತ್ತು ಹೀರೋ ಸೈಕಲ್ ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗಿದೆ. ಸೈಕಲ್ ವಿತರಣೆ ನಂತರ ತಾಲೂಕು ಮಟ್ಟದಿಂದ ಆಯ್ಕೆ ಮಾಡಿರುವ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದಿಂದ 40 ಸೈಕಲ್ಗಳನ್ನು ಲೂದಿಯಾನಕ್ಕೆ ಕಳುಹಿಸಬೇಕು.
ಬೆಂಗಳೂರು, ಮೈಸೂರು, ಬೆಳಗಾವಿ ಕಲಬುರಗಿ ವಿಭಾಗದಿಂದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ತಲಾ 5 ಸೈಕಲ್ಗಳನ್ನು ಗುಣಮಟ್ಟ ಪರಿಶೀಲನೆಗೆ ಕಳುಹಿಸಿಕೊಡಲು ಇಲಾಖೆ ಸೂಚನೆ ನೀಡಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸೈಕಲ್ ಸರಬರಾಜು ಮಾಡಲು ಅನುಸರಿಸಬೇಕಾದ ಕ್ರಮ, ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಗ್ರಹಿಸಬೇಕು. ಶಾಲಾ ಮುಖ್ಯಸ್ಥರು ತಮ್ಮ ಶಾಲೆಗೆ ಅವಶ್ಯವಿರುವ ಬೇಡಿಕೆ ಪಟ್ಟಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಸೈಕಲ್ ಪಡೆದ ಬಳಿಕ ಯಾವ ದಿನಾಂಕದಂದು ಸೈಕಲ್ ವಿತರಣೆ ಮಾಡಲಾಗಿದೆ ಎಂಬುದನ್ನೂ ದಾಖಲಿಸುವಂತೆ ತಿಳಿಸಲಾಗಿದೆ.
ಸಾಧ್ಯವಾದಷ್ಟು ಮಟ್ಟಿಗೆ ಮಧ್ಯಂತರ ರಜೆ ಆರಂಭವಾಗುವುದರೊಳಗೆ ವಿತರಿಸುವಂತೆ ಸೂಚಿಸಲಾಗಿದೆ. ಸೈಕಲ್ ಗುಣಮಟ್ಟ ತಿಳಿಯುವುದಕ್ಕಾಗಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿಗಳು, ತಜ್ಞರು, ಸರ್ಕಾರಿ ಐಟಿಐ ಕಾಲೇಜು ಉಪನ್ಯಾಸಕರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಲು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ