ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಜಾಮೀನು ವಜಾಗೊಳಿಸಿದ ಹೈಕೋರ್ಟ್
Team Udayavani, Aug 9, 2022, 10:53 PM IST
ಬೆಂಗಳೂರು: ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಹೈಕೋರ್ಟ್, ಪೊಲೀಸ್ ಸಿಬಂದಿ ಮತ್ತು ಠಾಣೆಗಳ ಮೇಲೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಬಳಸಿ ದಾಳಿ ನಡೆಸಿರುವುದು ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ (ಯುಎಪಿಎ) ಕಾಯ್ದೆಯಡಿ ಭಯೋತ್ಪಾದನ ಕೃತ್ಯ ಎನಿಸಿಕೊಳ್ಳುತ್ತದೆ ಎಂದು ಹೇಳಿದೆ.
ಎನ್ಐಎ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿ ಅತೀಕ್ ಅಹ್ಮದ್ ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ| ಕೆ. ಸೋಮಶೇಖರ್ ಮತ್ತು ನ್ಯಾ| ಶಿವಶಂಕರ್ ಅಮರಣ್ಣನವರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮೇಲ್ಮನವಿ ವಜಾಗೊಳಿಸಿದೆ.