ಯಮ ಯಾರಿಗೂ ಕರುಣೆ ತೋರುವುದಿಲ್ಲ, ಸುರೇಶ್ ಅಂಗಡಿ ಸಾವು ಅನ್ಯಾಯ: ಡಿ.ಕೆ ಶಿವಕುಮಾರ್


Team Udayavani, Sep 24, 2020, 4:41 PM IST

ಯಮ ಯಾರಿಗೂ ಕರುಣೆ ತೋರುವುದಿಲ್ಲ, ಸುರೇಶ್ ಅಂಗಡಿ ಸಾವು ಅನ್ಯಾಯ: ಡಿ.ಕೆ ಶಿವಕುಮಾರ್

ಬೆಂಗಳೂರು: ಯಮ ಯಾರಿಗೂ ಕರುಣೆ ತೋರುವುದಿಲ್ಲ, ಸುರೇಶ್ ಅಂಗಡಿ ಸಾವು ಅನ್ಯಾಯ. ಈ ಸಮಯದಲ್ಲಿ ದೇವರು ಬಹಳ ಕ್ರೂರಿ ಎಂದು ಭಾವಿಸುವಂತಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಧಾನಸೌಧದಲ್ಲಿ ಹೇಳಿದರು.

ಬುಧವಾರ ರಾತ್ರಿ ಕೋವಿಡ್ ಸೋಂಕಿನಿಂದ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಿಗೆ ಗುರುವಾರ ವಿಧಾನಸಭೆಯಲ್ಲಿ ನಡೆದ ಸಂತಾಪ ಸೂಚಕ ಚರ್ಚೆಯಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್ ‘ನಿನ್ನೆ ರಾತ್ರಿ ನಮ್ಮ ಶಾಸಕರಿಗೆಲ್ಲ ಔತಣಕೂಟ ಆಯೋಜಿಸಿದ್ದೆ. 20 ವರ್ಷಗಳ ಹಿಂದೆ ಅದೇ ಜಾಗದಲ್ಲಿ ಒಂದು ಕಾರ್ಯಕ್ರಮ ನಡೆಸಿದಾಗ ಆಗಿನ ಸಹಕಾರಿ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಮುದ್ದೂರ್ ಅವರು ಆ ಕಾರ್ಯಕ್ರಮಕ್ಕೆ ಬಂದಿದ್ದರು. ಅವರು ಕಾರ್ಯಕ್ರಮ ಮುಗಿಸಿ ಮನೆಗೆ ಮರಳಿದ ನಂತರ ಕೆಲ ಹೊತ್ತಿನಲ್ಲೇ ಅವರು ಸಾವನ್ನಪಿದರು ಅಂತಾ ಸುದ್ದಿ ಬಂತು. ಅವತ್ತು ಅರು ಕಾರ್ಯಕ್ರಮದಲ್ಲಿ ನನಗೆ ಒಂದು ಮಾತು ಹೇಳಿದ್ದರು. ‘ಕ್ಷಣಂ ವಿತ್ತಂ, ಕ್ಷಣಂ ಚಿತ್ತಂ, ಕ್ಷಣಂ ಜೀವಿತಮೇವಚ ಯಮಸ್ಯ ಕರುಣಾ ನಾಸ್ತಿ, ತಸ್ಮಾತ್ ಜಾಗ್ರತ.. ಜಾಗ್ರತ.’ ಈ ಮನಸ್ಸು, ಹಣ ಚಂಚಲ ಇದ್ದಂತೆ. ಅದೇರೀತಿ ಯಮ ಕೂಡ ನಾನು ಯಾರಿಗಾದರೂ ಸಹಾಯ ಮಾಡುತ್ತೇನೆ, ಮಕ್ಕಳ ಮದುವೆ ಮಾಡುತ್ತೇನೆ ಕರುಣೆ ತೋರಿಸು ಎಂದರೆ ತೋರಿಸುವುದಿಲ್ಲವಂತೆ. ಅವನು ನಿರ್ಧರಿಸಿದರೆ ಯಾರನ್ನಾದರೂ ಮುಲಾಜಿಲ್ಲದೆ ಕರೆಸಿಕೊಳ್ಳುತ್ತಾನಂತೆ. ಅದೇ ರೀತಿ ಇಂದು ಸುರೇಶ ಅಂಗಡಿ ಅವರನ್ನು ಕರೆಸಿಕೊಂಡಿದ್ದಾನೆ. ಅವರು ಮಂತ್ರಿತಾಗಿ ಕೇವಲ ಒಂದು ಕಾಲು ವರ್ಷವಾಗಿದೆ. ಅವರು ಮಂತ್ರಿಯಾಗಿದ್ದಾಗ ಅವರನ್ನು ಭೇಟಿ ಮಾಡಿದ್ದೆ. ಆಗ ನಾನು ಮಂತ್ರಿ ಸ್ಥಾನ ನಿರೀಕ್ಷೆ ಮಾಡಿರಲಿಲ್ಲ. ಅವರೇ ನನಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ನನಗೆ ಸಿಕ್ಕಿರುವ ಅವಕಾಶದಲ್ಲಿ ನನ್ನ ಕೈಲಾದ ಸಹಾಯವನ್ನು ರಾಜ್ಯಕ್ಕೆ ಮಾಡುತ್ತೇನೆ ಎಂದಿದ್ದರು. ಅವರು ಅಲ್ಪಾವಧಿಯಲ್ಲೇ ರಾಜ್ಯಕ್ಕೆ ಉತ್ತಮ ಯೋಜನೆ ತರುವ ಪ್ರಯತ್ನ ಮಾಡಿದ್ದಾರೆ. ಅವರ ಬಗ್ಗೆ ಯಮ ಕರುಣೆ ತೋರಲಿಲ್ಲ ಎಂದರು.

ಇದನ್ನೂ ಓದಿ: ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಕೋವಿಡ್ ಸೋಂಕಿಗೆ ಬಲಿ

ನಾನು ಈ ಕೋವಿಡ್-19 ವಿಚಾರದಲ್ಲಿ ಸಾಕಷ್ಟು ಉಡಾಫೆ ಮಾಡುತ್ತಿದ್ದೆ. ನನಗೆ ಅದು ಬಂದಾಗ ನನಗೆ ಅರಿವಾಯಿತು. ಆಸ್ಪತ್ರೆಗೆ ಹೋಗಿ ಬಂದ ನಂತರ ಮತ್ತೆ ಜ್ವರ ಬಂತು. ಆ ಮೇಲೆ ಉರಾಟದ ಸಮಸ್ಯೆ ಕಾಣಿಸಿಕೊಂಡಿತು. ನಮ್ಮ ಶಾಸಕಾಂಗ ಪಕ್ಷದ ನಾಯಕರೂ ಕೂಡ ಎಚ್ಚರವಹಿಸುವಂತೆ ಹೇಳುತ್ತಿದ್ದರು. ನಾನು ಅವರ ಮಾತನ್ನು ನಿರ್ಲಕ್ಷಿಸುತ್ತಿದ್ದೆ ಎಂದರು.

ಕೆಲದಿನಗಳ ಹಿಂದೆ ಚೆನ್ನಾಗಿದ್ದು, ದೆಹಲಿಗೆ ಹೋದ ಅವರು ಈಗ ಇಲ್ಲ ಎಂದರೆ ನಂಬಲು ಸಾಧ್ಯವಾಗಲಿಲ್ಲ. ನಿನ್ನೆ ಶಾಸಕರ ಔತಣ ಕೂಟದಲ್ಲಿ ಈ ವಿಚಾರ ಕೇಳಿದಾಗ ಯಾರಿಗೂ ಊಟ ಮಾಡುವ ಮನಸ್ಸು ಇರಲಿಲ್ಲ. ಅವರೊಬ್ಬ ಅಜಾತಶತ್ರು. ಅವರ ಅಗಲಿಕೆ ರಾಜ್ಯಕ್ಕೆ ಆದ ನಷ್ಟ ಹಾಗೂ ಅನ್ಯಾಯ. ಯಾರಿಗೂ ಇಂತಹ ಪರಿಸ್ಥಿತಿ ಬರಬಾರದು. ರೈತಕುಟುಂಬದಿಂದ ಬಂದು, ಶಿಕ್ಷಣ ಸಂಸ್ಥೆ ಕಟ್ಟಿ ರಾಜಕೀಯವಾಗಿ ಇಷ್ಟು ಎತ್ತರಕ್ಕೆ ಬೆಳೆದವರಿಗೆ ಈ ರೀತಿ ಆಗಬಾರದಿತ್ತು. ಸೌಮ್ಯ, ವಿನಯತೆಯಿಂದ ರಾಜಕೀಯ ಮಾಡಿಕೊಂಡು ಬಂದ ನಾಯಕನಿಗೆ ಭಗವಂತ ಈ ಶಿಕ್ಷೆ ಕೊಟ್ಟಿದ್ದು, ಭಗವಂತ ಎಷ್ಟು ಕ್ರೂರಿ ಯಾಕೆ? ಎಂದು ದೇವರ ಮೇಲೆ ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಹುಟ್ಟಿದ ಮೇಲೆ ಸಾಯಬೇಕು ನಿಜ, ಆದರೆ ಯಾವುದೇ ಅಭ್ಯಾಸ ಇಲ್ಲದೆ ಚೆನ್ನಾಗಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಸಾಯುತ್ತಾರೆ ಎಂದರೆ ನಿಜಕ್ಕೂ ಬೇಸರವಾಗುತ್ತದೆ ಎಂದು ಡಿಕೆಶಿ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.