ನಾನು ಶುಭ ಕೋರುತ್ತೇನೆ : ಇಡಿ ಹೊಸ ಚಾರ್ಜ್ ಶೀಟ್ ಗೆ ಡಿಕೆಶಿ ವ್ಯಂಗ್ಯವಾಗಿ ಆಕ್ರೋಶ
ನಾನೇನೂ ತಪ್ಪು ಮಾಡಿಲ್ಲ ಅನ್ನುವುದು ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ
Team Udayavani, May 26, 2022, 1:58 PM IST
ಬೆಂಗಳೂರು: 2019ರಲ್ಲಿ ನಡೆಸಿದ್ದ ದಾಳಿ ಸಂಬಂಧ ಇಡಿ ಅಧಿಕಾರಿಗಳು ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದು, ನಾನು ಅವರಿಗೆ ಶುಭ ಕೋರುತ್ತೇನೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಚಾರ್ಜ್ ಶೀಟ್ ಫೈಲ್ ಮಾಡಿರುವುದು ಮಾಧ್ಯಮದಲ್ಲಿ ಗೊತ್ತಾಯಿತು.
ನಮಗೆ ಇನ್ನೂ ಕಾಪಿ ಸಿಕ್ಕಿಲ್ಲ. ಸಾಮಾನ್ಯವಾಗಿ 6 ತಿಂಗಳಲ್ಲಿ ಚಾರ್ಜ್ ಶೀಲ್ ಫೈಲ್ ಮಾಡುತ್ತಾರೆ. ರೆಬಹಳ ದೊಡ್ಡ ತನಿಖೆ ಮಾಡಿದ್ದಾರೆ. ಅವರು ಹೊಸದಾಗಿ ಸೃಷ್ಠಿ ಮಾಡಲು ಸಾಧ್ಯವಿಲ್ಲ. ಕಾಪಿ ಬರಲಿ, ಕಾನೂನಿದೆ ದೇಶದಲ್ಲಿ. ಸತ್ಯ ಧರ್ಮ ಇದೆ. ನಾನೇನೂ ತಪ್ಪು ಮಾಡಿಲ್ಲ ಅನ್ನುವುದು ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ ಎಂದರು.
ಅವರ ಪಾರ್ಟಿಯನ್ನೇ ಬಿಡುವುದಿಲ್ಲ, ಇನ್ನು ನಮ್ಮ ಬಿಡುತ್ತಾರಾ? ಅಹಮದ್ ಪಟೇಲ್ ಗೆ ಸಹಾಯ ಮಾಡಿದ್ದಕ್ಕೆ ಇದೆಲ್ಲ ಮಾಡುತ್ತಿದ್ದಾರೆ. ರಾಜಕೀಯವಾಗಿ ಎಲ್ಲಾ ಅಸ್ತ್ರ ಉಪಯೋಗಿಸುತ್ತಿದ್ದಾರೆ. ಅವರು ನಮಗೆ ಮುಂದೆ ನೋಟಿಸ್ ಕೊಡುತ್ತಾರೆ. ಆಗ ಖಂಡಿತ ಪರಿಶೀಲಿಸುತ್ತೇವೆ. ನಾವು ಕಾನೂನು ಪರಿಪಾಲನೆ ಮಾಡುವವರು ಎಂದರು.
ಇದನ್ನೂ ಓದಿ : ಪರಮೇಶ್ವರ್ ರನ್ನು ಸೋಲಿಸಲು ಸಿದ್ದರಾಮಯ್ಯ ಜೊತೆ ಡಿಕೆಶಿ ಕೈಜೋಡಿಸಲಿದ್ದಾರೆ: ಬಿಜೆಪಿ
ಬಿಜೆಪಿಗೆ ರಾಜಕೀಯವಾಗಿ ಎದುರಿಸುವವರಿಗೆಲ್ಲ ಹೀಗೆ ಮಾಡುತ್ತಾ ಇದೆ. ಒಂದು ಅವರಿಗೆ ಶರಣಾಗ ಬೇಕು. ಇಲ್ಲ ಅವರ ಜತೆ ಸೇರಿಕೊಳ್ಳ ಬೇಕು. ಐ ವಿಶ್ ದೆಮ್ ಆಲ್ ದಿ ಬೆಸ್ಟ್ ಎಂದು ವ್ಯಂಗ್ಯವಾಗಿ ಆಕ್ರೋಶ ಹೊರ ಹಾಕಿದರು.
ಇಡಿ ಅಧಿಕಾರಿಗಳು ದೆಹಲಿ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ