ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ, ಚುನಾವಣೆಯೇ ಮುಖ್ಯವಾಗಿದೆ: ಡಿಕೆಶಿ ವಾಗ್ದಾಳಿ
Team Udayavani, Apr 18, 2021, 1:13 PM IST
ಬೆಂಗಳೂರು: ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ. ವೋಟ್ ಕೊಡಿ ಎಂದು ಪ್ರಚಾರಕ್ಕೆ ಒತ್ತು ಕೊಡುತ್ತಾರೆ. ಇವರಿಗೆ ಚುನಾವಣೆಯೇ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಘೋಷಣೆ ಮಾಡಿದೆ. ಇಲ್ಲಿಯವರೆಗೆ ಯಾರಿಗೆ ಆ ಹಣ ಸಿಕ್ಕಿದೆ? ಜಿಎಸ್ ಟಿ ಕಟ್ಟುವ ದುಡ್ಡಿಗೂ ಪೆನಾಲ್ಟಿ ಹಾಕ್ತಿದ್ದಾರೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಸಿಮೆಂಟ್, ಗೊಬ್ಬರದ ಬೆಲೆ ಗಗನಕ್ಕೆ ಹೋಗಿದೆ. ರೈತರು ಇವತ್ತು ಪರದಾಡುತ್ತಿದ್ದಾರೆ. ಹೆಣ್ಣುಮಕ್ಕಳು ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಯಾವ ಸಹಾಯಧನ ನೀಡುತ್ತಿದೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ಪಕ್ಷ ಸೇರಿದ ಜೆಡಿಎಸ್ ಮಾಜಿ ಶಾಸಕ ಕೆ.ರಾಜು
ಸರ್ಕಾರ ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಲು ಹೊರಟಿದೆ. ಇಲಾಖೆಗಳ ಅಧಿಕಾರಿಗಳನ್ನ ಬಳಸಿಕೊಳ್ಳಿ. ಕೋವಿಡ್ ನಿಯಂತ್ರಣಕ್ಕೆ ಅವರನ್ನು ಬಳಸಿಕೊಳ್ಳಿ. ಅಭಿವೃದ್ಧಿ ಕೆಲಸ ನಿಲ್ಲಿಸಿ,ಆರೋಗ್ಯಕ್ಕೆ ಒತ್ತು ಕೊಡಿ. ಕೋವಿಡ್ ಗೆ ಸದ್ಯಕ್ಕೆ 300 ಕೋಟಿ ಹಣ ಮೀಸಲಿಡಿ ಎಂದರು. ಹೆಣ ಸುಡುವವರಿಗೆ ವೇತನ ಕೊಡುತ್ತಿಲ್ಲ. ಹೆಣ ಹೂಳಲು ಜಾಗವಿಲ್ಲ. ಹೆಣ ಸುಡುವುದಕ್ಕೂ ಕ್ಯೂ ನಿಲ್ಲಬೇಕಾಗಿದೆ. ಕಂದಾಯ ಭೂಮಿಯನ್ನು ಗುರುತಿಸಿ ಅವಕಾಶ ಮಾಡಿಕೊಡಬೇಕು ಎಂದು ಡಿಕೆಶಿ ಸಲಹೆ ನೀಡಿದರು.
ಅಧಿಕಾರಿಗಳನ್ನು ಕೇಳಿದರೆ ನಮಗೇನು ನಿರ್ದೇಶನ ಬಂದಿಲ್ಲ ಎನ್ನುತ್ತಾರೆ. ಅವರು ವೇತನ ಪಡೆಯುತ್ತಿಲ್ವಾ? ಬರೀ ಮೀಟಿಂಗ್ ಮಾಡಿದರೆ ಸಾಲದು, ಜನರನ್ನು ಬದುಕಿಸುವ ಕೆಲಸ ಮಾಡಲಿ. ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ಕೊಡಬೇಕು ಸಿಎಂ ಒಬ್ಬರೇ ಅಲ್ಲ, ಸಚಿವರು, ಸರ್ಕಾರ ವ್ಯಾಕ್ಸಿನ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:ಕೋವಿಡ್ ಸೋಂಕು ಸಮುದಾಯಕ್ಕೆ ಹರಡಿದೆ, ವಿಶೇಷ ಕ್ರಮದ ಅವಶ್ಯಕತೆಯಿದೆ: ಸುಧಾಕರ್
ಲಾಕ್ ಡೌನ್ ನಿಂದ ಏನು ಪ್ರಯೋಜನ? ರಾತ್ರಿ ಮಾಡಿದರೆ ಮಾತ್ರ ಉಪಯೋಗವಾಗುತ್ತದೆಯೇ? ಹಗಲು ಹೊತ್ತು ಕೊರೊನಾ ಬರಲ್ವಾ? ಜನರ ಜೀವದ ಜೊತೆ ಬದುಕು ಮುಖ್ಯ. ಅದಕ್ಕೆ ನಾವು ಲಾಕ್ ಡೌನ್ ಗೆ ವಿರೋಧವಿದ್ದೇವೆ ಎಂದರು.
ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಅವರು, ಸಾರಿಗೆ ನೌಕರರನ್ನು ಕರೆದು ಮಾತನಾಡಲು ಸಮಸ್ಯೆಯೇನು? ಸರ್ಕಾರಕ್ಕೆ ಪ್ರತಿಷ್ಠೆ ಯಾಕೆ? ಖಾಸಗಿಯವರಿಗೆ ಕೊಡಲು ಹೊರಟಿದ್ದೀರಾ? ನೌಕರರದ್ದು ಸರಿಯೋ, ತಪ್ಪೋ ಗೊತ್ತಿಲ್ಲ. ಆದರೆ ಮೊದಲು ಅವರನ್ನು ಕರೆದು ಮಾತುಕತೆ ನಡೆಸಿ ಎಂದು ಡಿ ಕೆ ಶಿವಕುಮಾರ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ