ಗಟ್ಟಿ ಚರ್ಮದ ಸರ್ಕಾರ, ಸಾಮಾನ್ಯ ಜ್ಞಾನ ಇರೋರು ಹೀಗೆ ಮಾಡಲ್ಲ: ಡಿಕೆಶಿ ವಾಗ್ದಾಳಿ
Team Udayavani, Mar 14, 2021, 1:50 PM IST
ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತರ ರಕ್ಷಣೆಗೆ ಆಯೋಜಿಸಿದ್ದ ಜನಾಕ್ರೋಶ ಸಮಾವೇಶ ಯಶಸ್ವಿಯಾಗಿದೆ. ಜಿಲ್ಲೆಯ ಜನರು ಉತ್ತಮ ಸಹಕಾರ ನೀಡಿದ್ದಾರೆ. ಉತ್ಸಾಹದಿಂದ ನೊಂದವರು ಭಾಗಿಯಾಗಿದ್ದಾರೆ. ರಾಜ್ಯದ ಯಾವುದೇ ಕಾರ್ಯಕರ್ತರಿಗೂ ಅಧಿಕಾರ ಬಳಸಿ ಕಿರುಕುಳ ನೀಡಬಾರದು ಎಂಬುದು ನಮ್ಮ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಬಿಜೆಪಿಯ ಶಕ್ತಿ ಕೇಂದ್ರ ಎನ್ನವುದು ನಮಗೆ ಗೊತ್ತಿದೆ. ಅಂತಗದರಲ್ಲೂ ಪರಿವರ್ತನೆಯಾಗಿ ಜನರು, ವರ್ತಕರು, ಮಹಿಳೆಯರು ಎಲ್ಲರೂ ಬಂದಿದ್ದರು. ಇದು ರಾಜ್ಯದಲ್ಲಿ ಜನರು ಪರವರ್ತನೆ ಅಗುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಇದನ್ನೂ ಓದಿ:ಲಾಕ್ ಡೌನ್ ಆಗಬಾರದು ಅಂದ್ರೆ ಸರ್ಕಾರದ ಜೊತೆ ಸಹಕರಿಸಿ : ಸಿಎಂ
ಶಾಸಕ ಸಂಗಮೇಶ್ ಪುತ್ರನ ಬಂಧನ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಬಹಳ ಗಟ್ಟಿ ಚರ್ಮದ್ದು, ಸಾಮಾನ್ಯ ಜ್ಞಾನ ಇರೋರು ಹೀಗೆ ಮಾಡುವುದಿಲ್ಲ. ಘಟನೆ ನಡೆದಾಕ್ಷಣ ಕೊಲೆ ಪ್ರಕರಣ ದಾಖಲಿಸಿದ್ದಾರೆ. ರಾಜಕೀಯಕ್ಕಾಗಿ ಹೀಗೆ ಮಾಡಿದ್ದಾರೆ. ಸದನದಲ್ಲಿ ಕೂಡ ನೊಂದವರಿಗೆ ಮಾತನಾಡಲು ಅವಕಾಶವೇ ನೀಡಲಿಲ್ಲ. ಹಾಗೆಂದು ಸಂಗಮೇಶ್ ಶರ್ಟ್ ಬಿಚ್ಚಿದ್ದು ಸರಿ ಎನ್ನುವುದಿಲ್ಲ, ಅವರು ನೋವನ್ನು ವ್ಯಕ್ತಪಡಿಸಲು ಹೋದರಷ್ಟೇ. ಆದರೆ ತಕ್ಷಣವೇ ಆತನನ್ನು ಕರೆದು ಸಸ್ಪೆಂಡ್ ಮಾಡಿಸಿದ್ದಾರೆ. ಈ ಹಂತಕ್ಕೆ ಯಾರು ಹೋಗಬಾರದು ಎಂದು ಡಿಕೆಶಿ ಹೇಳಿದರು.
ಅಧಿವೇಶನದಲ್ಲೂ ಕೂಡ ಈ ಬಗ್ಗೆ ಹೋರಾಟ ಮಾಡುತ್ತೇವೆ. ಅನೇಕ ವಿಚಾರಗಳಿದ್ದು, ಚರ್ಚಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ