ಕಾರ್ಯಕ್ರಮಕ್ಕೆ ಸಿಎಂ ಅನುಮತಿ ಕೊಟ್ಟಿದ್ದಾರೆ, ಪೊಲೀಸರು ಅಡಚಣೆ ಮಾಡುವಂತಿಲ್ಲ: ಡಿಕೆಶಿ
Team Udayavani, Jul 1, 2020, 1:51 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದು, ಪೊಲೀಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬುಧವಾರ ಮಾಧ್ಯಮಗಳಿಗೆ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ನಾಳೆ ನಡೆಯಲಿರುವ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಕೆಲವು ಕಡೆಗಳಲ್ಲಿ ಪೊಲೀಸರು ತೊಂದರೆ ನೀಡುತ್ತಿದ್ದಾರೆ ಎಂಬ ಕರೆಗಳು ಬಂದಿವೆ. ಮುಖ್ಯಮಂತ್ರಿಗಳೇ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಅನುಮತಿ ಕೊಟ್ಟಿದ್ದಾರೆ. ನಾನು ಈ ಸಂಬಂಧ ಗೃಹ ಮಂತ್ರಿಗಳು, ಪೊಲೀಸ್ ಮಹಾನಿರ್ದೇಶಕರ ಜತೆ ಮಾತನಾಡಿದ್ದೇನೆ. ಯಾರು ಧೃತಿಗೆಡುವ ಅಗತ್ಯವಿಲ್ಲ ಎಂದಿದ್ದಾರೆ.
ಮುಖ್ಯಮಂತ್ರಿಗಳು ಹೇಳಿಕೆಯಲ್ಲಿ ಅನುಮತಿ ನೀಡಿದ್ದು, ಈ ಕಾರ್ಯಕ್ರಮಕ್ಕೆ ಲಿಖಿತ ಅನುಮತಿ ಬೇಕಿಲ್ಲ. ನಿಮ್ಮ ನಿಮ್ಮ ಪ್ರದೇಶಗಳಲ್ಲೇ ಇದ್ದು ಸುದ್ದಿ ವಾಹಿನಿಗಳಲ್ಲಿ ಬರುವ ಕಾರ್ಯಕ್ರಮ ನೇರ ಪ್ರಸಾರ ವೀಕ್ಷಿಸಿ. ನಾನು ಆಮಂತ್ರಣ ನೀಡಿರುವವರನ್ನು ಬಿಟ್ಟು ಇನ್ಯಾರು ಇಲ್ಲಿಗೆ ಬರಬೇಡಿ. ಕಟ್ಟಡ ನಿರ್ವಹಣೆಯನ್ನು ಪೊಲೀಸರು ಹಾಗೂ ಸೇವಾದಳದವರಿಗೆ ವಹಿಸಿದ್ದು, ಅನಗತ್ಯವಾಗಿ ಬಂದು ತೊಂದರೆ ಅನುಭವಿಸುವುದು ಬೇಡ ಎಂದರು.
ನಮ್ಮ ಜತೆ ನೀವು ಟಿವಿ ಹಾಗೂ ಜೂಮ್ ಮೂಲಕ ನಿಮ್ಮ ಪ್ರದೇಶಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ತಾವೆಲ್ಲಾ ಸಹಕಾರ ನೀಡಬೇಕು. ಕಾರ್ಯಕರ್ತರು ಹಗಲು ರಾತ್ರಿ ದುಡಿಯುತ್ತಿದ್ದಾರೆ. ಎಲ್ಲಾ ಮಠ ಹಾಗೂ ಸಮುದಾಯದ ಗುರು ಹಿರಿಯರು ಆಶೀರ್ವಾದ ಮಾಡಬೇಕು ಎಂದು ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆ. ಜನರು ಕೂಡ ನಾವು ನೀಡಿರುವ ಸಂಖ್ಯೆಗೆ ಮಿಸ್ ಕಾಲ್ ನೀಡಿ ಆ ಮೂಲಕ ಆಶೀರ್ವಾದ ನೀಡಬಹುದು.
ನಾವು ಇಲ್ಲಿಗೆ ಬರುವವರಿಗೆ ಪಾಸ್ ನೀಡಿದ್ದು, ನನ್ನ ಮನೆಯಿಂದ ಇಬ್ಬರು ಮಾತ್ರ ಬರುತ್ತಿದ್ದೇವೆ. ಕೆಲವು ನಾಯಕರು, ಹೊರ ರಾಜ್ಯದಿಂದ ನಾಲ್ಕೈದು ಜನ ಹಾಗೂ ಮಾಧ್ಯಮದವರಿಗೆ ಮಾತ್ರ ಈ ಪಾಸ್ ನೀಡಲಾಗಿದೆ. ಅವರು ಮಾತ್ರ ಇಲ್ಲಿಗೆ ಬರಲು ಅವಕಾಶವಿದೆ. ಹೀಗಾಗಿ ಹೆಚ್ಚಿನ ಜನ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…