ಸಿದ್ದು ಪಡೆಯ ವಿರುದ್ಧ ಹೈಕಮಾಂಡ್ ಅಸ್ತ್ರ ಪ್ರಯೋಗಿಸಿದ ಡಿಕೆ ಶಿವಕುಮಾರ್
Team Udayavani, Jul 26, 2022, 9:33 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆಯುತ್ತಿದ್ದ ಹೋರಾಟ ಈಗ ಮತ್ತೊಂದು ಮಜಲಿಗೆ ಹೊರಳಿದ್ದು, ತಮ್ಮ ವಿರುದ್ಧ ಧ್ವನಿ ಎತ್ತುತ್ತಿದ್ದವರಿಗೆ ಹೈಕಮಾಂಡ್ ಮೂಲಕವೇ ಉತ್ತರ ಕೊಡಿಸುವುದಕ್ಕೆ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.
ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕೆಂದು ನೀಡಿದ ಎಚ್ಚರಿಕೆಯ ಬಳಿಕವೂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದ ಶಾಸಕ ಜಮೀರ್ ಅಹಮದ್ ಖಾನ್ ಗೆ ಹೈಕಮಾಂಡ್ ನೋಟಿಸ್ ನೀಡಿದ್ದು, ಭವಿಷ್ಯದಲ್ಲಿ ಇಂಥ ಹೇಳಿಕೆ ನೀಡುವವರಿಗೆಲ್ಲ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ.
ಜಮೀರ್ ಗೆ ಹೈಕಮಾಂಡ್ ನೀಡಿರುವ ನೋಟಿಸ್ ಈಗ ಪಕ್ಷದ ವಲಯದಲ್ಲಿ ಬೇರೆ ಬೇರೆ ಚರ್ಚೆಗೆ ಕಾರಣವಾಗಿದೆ. ಮೂಲ ಕಾಂಗ್ರೆಸಿಗರೆಲ್ಲರೂ ಸೇರಿ ಇಂಥದೊಂದು ಗಟ್ಟಿ ನಿರ್ಧಾರವನ್ನು ಹೈಕಮಾಂಡ್ ಮೂಲಕವೇ ಹೇಳಿಸಿದ್ದಾರೆಂದು ತಿಳಿದು ಬಂದಿದೆ. ಇಲ್ಲವಾದರೆ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಲು ಅವರ ಆಪ್ತರು ಇನ್ನಷ್ಟು ಮುಂದಾಗಬಹುದೆಂದು ಈ ತಡೆ ಹಾಕಲಾಗಿದೆ.
ಇದನ್ನೂ ಓದಿ:ಇನ್ನು ಒಂದು ವರ್ಷ ನೆಮ್ಮದಿ: ಕೇಂದ್ರ ಸಚಿವರನ್ನು ಭೇಟಿಯಾದ ರಾಜ್ಯ ನಿಯೋಗ
ಎಲ್ಲದಕ್ಕಿಂತ ಮುಖ್ಯವಾಗಿ ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬಂದರೆ ಅವರ ಸಮ್ಮುಖದಲ್ಲಿ ಯಾರೂ ಇಂಥ ಉಪದ್ವ್ಯಾಪ್ಯ ಮಾಡದೇ ಇರಲಿ ಎಂಬ ಕಾರಣಕ್ಕೆ ಹೈಕಮಾಂಡ್ ಈ ಬಿಸಿ ಮುಟ್ಟಿಸಿದೆ. ಮೌನವಾಗಿದ್ದುಕೊಂಡೆ ಸಿದ್ದರಾಮಯ್ಯ ಬಣಕ್ಕೆ ಶಿವಕುಮಾರ್ ಡೋಸ್ ಕೊಟ್ಟಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು