ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಡಿಕೆಶಿ ಆಗ್ರಹ
Team Udayavani, Apr 14, 2022, 12:01 PM IST
ಬೆಂಗಳೂರು: ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈಶ್ವರಪ್ಪ ಪ್ರಕರಣದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು ಪ್ರತಿಭಟನೆ ನಡೆಸದಂತೆ ಕೋರ್ಟ್ ಮೂಲಕ ನಮಗೆ ನಿರ್ಬಂಧ ಹೇರಿದ್ದಾರೆ. ಸಿಎಂ ಕೂಡ ಈ ಎಲ್ಲಾ ವಿಚಾರಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಮೊದಲು ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಪ್ರಕರಣ ದಾಖಲಿಸಬೇಕು. ಈಶ್ವರಪ್ಪ ಅವರನ್ನು ಬಂಧಿಸಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.