ಜನರನ್ನು ಭಯಭೀತ ಮಾಡಲು ಬಿಜೆಪಿಯವರು ಹೊರಟಿದ್ದಾರೆ: ಡಿಕೆ ಸುರೇಶ್
Team Udayavani, May 17, 2022, 1:40 PM IST
ಬೆಂಗಳೂರು: ಆರ್ ಎಸ್ ಎಸ್ ಸಮಾಜವನ್ನು ಒಡೆಯಲು ಹೊರಟಿದೆ. ದೇಶ ಬಹುಭಾಷೆ ಮೇಲೆ ನಿಂತಿದೆ. ಅಶಾಂತಿ ಮೂಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಆಚಾರ ವಿಚಾರ ದಿನನಿತ್ಯದ ಸಂಗತಿಗಳಲ್ಲೂ ಜನರನ್ನು ಭಯಭೀತ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಹೇಳಿದರು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ಮಾತ್ರವಲ್ಲ ಯುನಿವರ್ಸಿಟಿಗಳಲ್ಲಿ, ಜೆಇಇ ನೇಮಕಾತಿಯಲ್ಲೂ ಅಕ್ರಮವಾಗಿದೆ. ಹಗರಣಗಳ ಮುಚ್ಚಿ ಹಾಕುವುದಕ್ಕೆ ಸರ್ಕಾರ ಹೊರಟಿದೆ. ಯುವಕರ ಭವಿಷ್ಯ ಹಾಳು ಮಾಡುವ ಕೆಲಸ ಮಾಡ್ತಿದ್ದಾರೆ ಎಂದರು.
ಇದನ್ನೂ ಓದಿ:ಹೊರಟ್ಟಿ ಪಕ್ಷ ಸೇರ್ಪಡೆಗೆ ತಾಂತ್ರಿಕ ಅಡ್ಡಿ; ಹಂಗಾಮಿ ಸಭಾಪತಿ ನೇಮಕಕ್ಕೆ ಮುಂದಾದ ಬಿಜೆಪಿ
ಹಗರಣಗಳಲ್ಲಿ ಮುಖ್ಯಮಂತ್ರಿಗಳೇ ಇದರಲ್ಲಿ ಪಾಲುದಾರರು. ಸಿಎಂಗೆ ಯುವಕರ ರಕ್ಷಣೆ ಜವಾಬ್ದಾರಿ ಇರಬೇಕು. ನ್ಯಾಯಸಮ್ಮತ ತನಿಖೆ ಮಾಡಲಿ. ನಮ್ಮ ಕಾಲದಲ್ಲಿ ಅಕ್ರಮವಾಗಿದ್ದರೂ ತನಿಖೆ ಮಾಡಲಿ. ಆದರೆ ಸರ್ಕಾರ ತನಿಖೆಯನ್ನೇ ಮಾಡ್ತಿಲ್ಲ. ಒಎಂಆರ್ ಶೀಟ್ ಇಡುವ ಕೀ ಬಂಚ್ ಯಾರದ್ದೋ ಮನೆಯಲ್ಲಿ ಸಿಗುತ್ತದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಬೇಕು. ಮಂತ್ರಿ ಮಂಡಲದ ಅನೇಕರು ಇದರಲ್ಲಿ ಪಾಲುದಾರರಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ