ದಕ್ಷಿಣ ಕನ್ನಡ ಉಡುಪಿ ಕೊಡಗು : 3 ಜಿಲ್ಲೆಗಳಲ್ಲಿ ಶಾಲಾರಂಭ ಇಲ್ಲ
Team Udayavani, Aug 22, 2021, 7:30 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತು ಸೋಂಕುಪೀಡಿತರ ಸಾವು ಏರಿಳಿಕೆಯಾದರೂ ಸತತ ಒಂದು ವಾರದಿಂದ ಪರೀಕ್ಷೆಗಳ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆ ವರದಿಯಾಗುತ್ತಿದೆ. ಈ ಮೂಲಕ ಮೂರನೇ ಅಲೆ ಆತಂಕ ಸದ್ಯದ ಮಟ್ಟಿಗೆ ದೂರವಾಗಿದೆ.
ಇದರ ಮಧ್ಯೆ ಸೋಮವಾರದಿಂದ ರಾಜ್ಯದಲ್ಲಿ ಶಾಲಾರಂಭ ಆಗಲಿದ್ದರೂ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭವಾಗುವುದಿಲ್ಲ ಎಂದು ಸರಕಾರ ಹೇಳಿದೆ. ಈ ಮೊದಲು ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಐದು ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವುದಿಲ್ಲ ಎಂದಿತ್ತು. ಆದರೆ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಕಂಡುಬಂದ ಹಿನ್ನೆಲೆಯಲ್ಲಿ ಇಲ್ಲಿ ಸೋಮವಾರ ತರಗತಿ ಆರಂಭಿಸಲಾಗುತ್ತಿದೆ. ಪ್ರಸಕ್ತ ವಾರದ ಕೊರೊನಾ ವಾರ್ ರೂಂ ಬುಲೆಟಿನ್ ಪ್ರಕಾರ, ದಕ್ಷಿಣ ಕನ್ನಡ (ಶೇ. 3.2), ಉಡುಪಿ (ಶೇ. 2.8), ಕೊಡಗು (ಶೇ. 2.3) ಜಿಲ್ಲೆಗಳು ಮಾತ್ರ ಶೇ. 2ಕ್ಕಿಂತ ಅಧಿಕ ಪಾಸಿಟಿವಿಟಿ ದರ ಹೊಂದಿವೆ.
ಶನಿವಾರ ರಾಜ್ಯದಲ್ಲಿ 1,350 ಮಂದಿಗೆ ಸೋಂಕು ತಗಲಿದ್ದು, 18 ಸೋಂಕುಪೀಡಿತರು ಸಾವಿಗೀಡಾಗಿದ್ದಾರೆ. ಶುಕ್ರವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 15 ಸಾವಿರ ಕಡಿಮೆಯಾಗಿದ್ದು, ಹೊಸ ಪ್ರಕರಣಗಳ ಸಂಖ್ಯೆ 103 ಇಳಿಕೆಯಾಗಿವೆ. ಸೋಂಕುಪೀಡಿತರ ಸಾವು ಒಂದು ಹೆಚ್ಚಾಗಿದ್ದು, ಪಾಸಿಟಿವಿಟಿ ದರ ಶೇ. 0.8 ಇದೆ. ಮರಣ ದರ ಶೇ. 1.3 ಇದೆ.
ಆಗಸ್ಟ್ ಮೂರನೇ ವಾರ ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತದೆ ಎಂದು ಕೆಲವು ತಜ್ಞರು ಅಂದಾಜಿಸಿದ್ದರು. ಪ್ರಸಕ್ತ ವಾರ ಪೂರ್ತಿ ಹೊಸ ಪ್ರಕರಣಗಳು ಒಂದು ಸಾವಿರದಿಂದ ಒಂದೂವರೆ ಸಾವಿರ ಮಧ್ಯೆ ಏರಿಳಿಕೆಯಾಗುತ್ತಲೆ ಇವೆ. ಸಾವು 20ರ ಆಸುಪಾಸಿಗೆ ತಗ್ಗಿದೆ. ಆದರೆ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಮಾತ್ರ ಕಳೆದ ವಾರ ಸರಾಸರಿ ಶೇ. 1.1 ಇದ್ದುದು ಸದ್ಯ ಶೇ. 0.9ಕ್ಕೆ ತಗ್ಗಿದೆ. ಸತತ ಒಂದು ವಾರದ ಅವಧಿಯಲ್ಲಿ ಶೇ. 1ಕ್ಕಿಂತಲೂ ಕಡಿಮೆ ಇತ್ತು. ಈ ಮೂಲಕ ಮೂರನೇ ಅಲೆಯ ಆತಂಕ ಸದ್ಯದ ಮಟ್ಟಿಗೆ ದೂರವಾಗಿದೆ.
ಶನಿವಾರ ಅತೀ ಹೆಚ್ಚು ದಕ್ಷಿಣ ಕನ್ನಡದಲ್ಲಿ 320, ಬೆಂಗಳೂರಿನಲ್ಲಿ 260, ಉಡುಪಿಯಲ್ಲಿ 177, ಮೈಸೂರಿನಲ್ಲಿ 102, ಹಾಸನದಲ್ಲಿ 101 ಪ್ರಕರಣಗಳು ವರದಿಯಾಗಿವೆ. ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್