ದಲಿತ ನಾಯಕರಿಗೆ ನಕ್ಸಲ್ ಹಣೆಪಟ್ಟಿ: ಎ ಕೆ ಸುಬ್ಬಯ್ಯ ಕಿಡಿ
Team Udayavani, Jun 9, 2018, 7:01 PM IST
ಬೆಂಗಳೂರು : ದಲಿತ ಚಳವಳಿ ನಾಯಕರಿಗೆ ನಕ್ಸಲ್ ಹಣೆಪಟ್ಟಿ ಹಚ್ಚುವ ಸರಕಾರದ ಯತ್ನಕ್ಕೆ ವಿಚಾರವಾದಿ ಎ ಕೆ ಸುಬ್ಬಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ನಡೆದ ಕೋರೆಗಾಂವ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಲಿತ ಚಳವಳಿ ನಾಯಕ ಪ್ರಕಾಶ್ ಅಂಬೇಡ್ಕರ್ ಮತ್ತು ಗುಜರಾತ್ ಪಕ್ಷೇತರ ಶಾಸಕರಾಗಿರುವ ದಲಿತ ನಾಯಕ ಜಿಗ್ನೇಶ್ ಮೇವಾನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ ಎಂಬ ಮಾವೋ ವಾದಿ ನಾಯಕರ ಪತ್ರದಲ್ಲಿ ಈ ಇಬ್ಬರೂ ದಲಿತ ನಾಯಕರ ಹೆಸರಿದೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ದಲಿತ ಚಳವಳಿಯನ್ನು ನಾಶ ಮಾಡುವ ಪಿತೂರಿ ದೇಶದಲ್ಲಿ ನಡೆಯುತ್ತಿದೆ ಎಂದು ಸುಬ್ಬಯ್ಯ ಅವರು ನಗರದ ಪ್ರಸ್ ಕ್ಲಬ್ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಆರೋಪಿಸಿದರು.
ಪ್ರಧಾನಿಯವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಬಗ್ಗೆ ಯಾವದೇ ವಿಶ್ವಾಸವಿಲ್ಲ. ಈ ಬಗ್ಗೆ ನಿಷ್ಪಕ್ಷ ತನಿಖೆ ನಡೆಯಬೇಕು; ತಪ್ಪುಗಾರರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸುಬ್ಬಯ್ಯ ಆಗ್ರಹಿಸಿದರು.
ಪ್ರಧಾನಿ ಮೋದಿ ಅವರಿಗೆ ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯು ನುಂಗಲಾರದ ತುತ್ತಾಗಿದೆ. ಅವರ ನಾಲ್ಕು ವರ್ಷಗಳ ಅವಧಿಯಲ್ಲಿ ಯಾವೆಲ್ಲ ಭರವಸೆಗಳು ಈಡೇರಿವೆ ಎಂದು ಜನರೀಗ ಪ್ರಶ್ನಿಸುತ್ತಿದ್ದಾರೆ. ಮೋದಿ ವೈಫಲ್ಯವನ್ನು ಮುಚ್ಚಿ ಹಾಕಲು ದಲಿತ ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಸುಬ್ಬಯ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೋಮು ಸೌಹಾರ್ದ ವೇದಿಕೆಯ ತ್ರಿಮೂರ್ತಿ, ದಲಿತ ಮುಖಂಡರಾದ ಎನ್ ವೆಂಕಟೇಶ್, ಕೃಷ್ಣಾ ರೆಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ