ಶಿಕ್ಷಣ ಸಂಸ್ಥೆಗಳ ಪಕ್ಕದ ಇಂಗುಗುಂಡಿ ಗುರುತು


Team Udayavani, Sep 12, 2019, 5:00 AM IST

e-25

ಸವಣೂರು: ಶಿಕ್ಷಣ ಸಂಸ್ಥೆಗಳ ಸಮೀಪವಿರುವ ಅಪಾಯಕಾರಿ ಇಂಗು ಗುಂಡಿ, ಹೊಂಡ, ತೋಡುಗಳನ್ನು ಗುರುತಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್‌ ನೀಡಿ, ಮಕ್ಕಳ ಸುರಕ್ಷತೆ ಕುರಿತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಾಹಿತಿ ನೀಡುವಂತೆ ಸವಣೂರು ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯು ಗ್ರಾ.ಪಂ. ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ. ಅಧ್ಯ ಕ್ಷತೆಯಲ್ಲಿ ನಡೆಯಿತು.

ವಿಷಯ ಪ್ರಸ್ತಾವಿಸಿದ ಸದಸ್ಯ ಗಿರಿಶಂಕರ ಸುಲಾಯ, ಶಿಕ್ಷಣ ಸಂಸ್ಥೆಗಳಿಗೆ ಬರುವ ದಾರಿಯಲ್ಲಿ ಹಾಗೂ ಸಮೀಪ ಇರುವ ಇಂಗುಗುಂಡಿಗಳಲ್ಲಿ ಮಳೆಗಾಲದಲ್ಲಿ ನೀರು ತುಂಬಿರುವುದರಿಂದ ಅವ ಘಡಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದರು.

ಬಸ್‌ ಬೇ ಬಳಿ ರಸ್ತೆ ಸರಿಪಡಿಸಿ
ಸವಣೂರು ಬಸ್‌ ತಂಗುದಾಣದ ಪಕ್ಕ ಬಸ್‌ ಬೇ ದಾಟಿ ಮುಂದಕ್ಕೆ ಚಲಿಸಿದಾಗ ರಸ್ತೆ ಕಿರಿದಾಗಿದ್ದು, ಅದರ ಬದಿಗಳು ತಗ್ಗಿನಲ್ಲಿವೆ. ಇದರಿಂದ ಸೈಡ್‌ ಕೊಡುವ ಸಂದರ್ಭದಲ್ಲಿ ವಾಹನ ಸವಾರರಿಗೆ ಸಮಸ್ಯೆಯಾಗುತ್ತದೆ. ಹಲವು ಅಪಘಾತಗಳೂ ಸಂಭವಿಸಿವೆ. ಈ ಸಮಸ್ಯೆ ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಬರೆದುಕೊಳ್ಳಬೇಕೆಂದು ಸದಸ್ಯ ಎಂ.ಎ. ರಫೀಕ್‌ ಹೇಳಿದರು.

ಆಧಾರ್‌ ತಿದ್ದುಪಡಿ ಕೇಂದ್ರ ತೆರೆಯಲಿ
ಹಲವರ ಆಧಾರ್‌ ಕಾರ್ಡ್‌ಗಳಲ್ಲಿ ತಿದ್ದುಪಡಿಗಳು ಇರುವುದರಿಂದ ಸರಕಾರದ ಯೋಜನೆಗಳು ಫಲಾ ನುಭವಿಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಆದರಿಂದ ಸವಣೂರು ಸಿಂಡಿಕೇಟ್ ಬ್ಯಾಂಕ್‌ ಮತ್ತು ಕಾಣಿಯೂರು ಅಂಚೆ ಕಚೇರಿಯಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರ ತೆರೆದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸದಸ್ಯ ಸತೀಶ್‌ ಬಲ್ಯಾಯ ಹೇಳಿದರು. ಈ ಕುರಿತು ಸಂಬಂಧಪಟ್ಟವರಿಗೆ ಬರೆಯುವಂತೆ ನಿರ್ಧರಿಸಲಾಯಿತು.

ಕಿಸಾನ್‌ ಸಮ್ಮಾನ್‌ ಯೋಜನೆ ಹಾಗೂ ಕೊಳೆರೋಗದ ಪರಿಹಾರ ಮೊತ್ತ ಇನ್ನೂ ಹಲವರಿಗೆ ಬಂದಿಲ್ಲ. ಈ ಕುರಿತು ಇಲಾಖೆಗೆ ಬರೆದುಕೊಳ್ಳುವಂತೆ ನಿರ್ಧರಿಸಲಾಯಿತು.

ಗ್ರಾ.ಪಂ. ಸದಸ್ಯೆ ಮೀನಾಕ್ಷಿ ಬಂಬಿಲ ಮಾತನಾಡಿ, ಮಳೆಯಿಂದಾಗಿ ತನ್ನ ವಾಸದ ಮನೆಯ ಒಳಗೆ ನೀರು ಜಿನುಗುತ್ತಿದೆ. ಇದಕ್ಕೆ ಪರಿಹಾರ ಒದಗಿಸುವಂತೆ ಸಭೆಯಲ್ಲಿ ವಿನಂತಿಸಿದರು.

ಸಹಾಯ ಯಾಚಿಸಿ ಮನವಿ
ಮನೆ ನಿರ್ಮಾಣಕ್ಕೆ ಒಂದು ಬಡ ಕುಟುಂಬ ಹಾಗೂ ಮಗಳ ಮದುವೆ ವಿಚಾರವಾಗಿ ಸಹಾಯ ಯಾಚಿಸಿ ಮಹಿಳೆಯೋರ್ವರು ಗ್ರಾಮ ಪಂಚಾಯತ್‌ಗೆ ಮನವಿ ಮಾಡಿದ್ದರು. ಬಳಿಕ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿ – ಸಿಬಂದಿ ವರ್ಗದವರು ವೈಯಕ್ತಿಕವಾಗಿ ಧನಸಹಾಯ ನೀಡಿದರು.ಗ್ರಾಮ ಪಂಚಾಯತ್‌ ವತಿಯಿಂದಲೂ ನೀಡುವ ಕುರಿತು ನಿರ್ಧರಿಸಲಾಯಿತು.

ಗ್ರಾ.ಪಂ. ಉಪಾಧ್ಯಕ್ಷ ರವಿ ಕುಮಾರ್‌ ಬಿ.ಕೆ., ಸದಸ್ಯರಾದ ಗಿರಿಶಂಕರ ಸುಲಾಯ, ಪ್ರಕಾಶ್‌ ಕುದ್ಮನಮಜಲು, ದಿವಾಕರ ಬಂಗೇರ ಬೊಳಿಯಾಲ, ಸತೀಶ್‌ ಬಲ್ಯಾಯ, ಎಂ.ಎ. ರಫೀಕ್‌, ಸತೀಶ್‌ ಅಂಗಡಿಮೂಲೆ, ನಾಗೇಶ್‌ ಓಡಂತರ್ಯ, ರಾಜೀವಿ ಶೆಟ್ಟಿ ಕೆಡೆಂಜಿ, ಗಾಯತ್ರಿ ಬರೆಮೇಲು, ವೇದಾವತಿ ಅಂಜಯ, ಸುಧಾ ನಿಡ್ವಣ್ಣಾಯ, ಚೆನ್ನು ಮಾಂತೂರು, ನಳಿನಾಕ್ಷಿ ಎ., ದೇವಿಕಾ ಶ್ರೀಧರ್‌, ಜಯಂತಿ ಮಡಿವಾಳ, ವಸಂತಿ ಬಸ್ತಿ, ಮೀನಾಕ್ಷಿ ಕಲಾಪದಲ್ಲಿ ಭಾಗವಹಿಸಿದರು.

ಲೆಕ್ಕ ಸಹಾಯಕ ಎ. ಮನ್ಮಥ ಸ್ವಾಗತಿಸಿ, ಸಿಬಂದಿ ಪ್ರಮೋದ್‌ ಕುಮಾರ್‌ ರೈ ವಂದಿಸಿದರು. ದಯಾನಂದ ಮಾಲೆತ್ತಾರು, ಜಯಶ್ರೀ, ಜಯಾ ಕೆ., ಶಾರದಾ ಎಂ. ಸಹಕರಿಸಿದರು.

ಪ್ರಾಕೃತಿಕ ವಿಕೋಪದಿಂದ ಗ್ರಾ.ಪಂ. ವ್ಯಾಪ್ತಿಯ ಹಲವು ರಸ್ತೆಗಳು ಹಾನಿಯಾಗಿವೆ. ಗೌರಿ ಹೊಳೆ ತಟದ ಕೃಷಿಕರ ತೋಟಗಳಿಗೆ ಮಳೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿದೆ. ನಾಡೋಳಿಯಲ್ಲಿ ಗೌರಿಹೊಳೆ ಬದಿಯ ತಡೆಗೋಡೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಕೃಷಿ ಭೂಮಿ, ಕಿಂಡಿ ಅಣೆಕಟ್ಟು ಅಪಾಯದಲ್ಲಿವೆ. ಈ ಕುರಿತು ಸರಕಾರಕ್ಕೆ ಬರೆದುಕೊಳ್ಳುವಂತೆ ನಿರ್ಧರಿಸಲಾ ಯಿತು. ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಪಟ್ಟಿ ಮಾಡಲಾಯಿತು.

ಪ್ರಾಕೃತಿಕ ವಿಕೋಪ: ಹಲವು ರಸ್ತೆಗಳಿಗೆ ಹಾನಿ
ಪ್ರಾಕೃತಿಕ ವಿಕೋಪದಿಂದ ಗ್ರಾ.ಪಂ. ವ್ಯಾಪ್ತಿಯ ಹಲವು ರಸ್ತೆಗಳು ಹಾನಿಯಾಗಿವೆ. ಗೌರಿ ಹೊಳೆ ತಟದ ಕೃಷಿಕರ ತೋಟಗಳಿಗೆ ಮಳೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿದೆ. ನಾಡೋಳಿಯಲ್ಲಿ ಗೌರಿಹೊಳೆ ಬದಿಯ ತಡೆಗೋಡೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಕೃಷಿ ಭೂಮಿ, ಕಿಂಡಿ ಅಣೆಕಟ್ಟು ಅಪಾಯದಲ್ಲಿವೆ. ಈ ಕುರಿತು ಸರಕಾರಕ್ಕೆ ಬರೆದುಕೊಳ್ಳುವಂತೆ ನಿರ್ಧರಿಸಲಾ ಯಿತು. ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಪಟ್ಟಿ ಮಾಡಲಾಯಿತು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.