ಕುಕ್ಕೆ, ಧರ್ಮಸ್ಥಳಕ್ಕೆ ದರ್ಶನ್ ಭೇಟಿ
Team Udayavani, Jun 29, 2019, 3:05 AM IST
ಮಂಗಳೂರು: ಚಲನಚಿತ್ರ ನಟ ದರ್ಶನ್ ಅವರು ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಬಳಿಕ ಡಾ|ಡಿ.ಹರ್ಷೆಂದ್ರ ಕುಮಾರ್ ಅವರನ್ನು ಭೇಟಿ ಮಾಡಿದರು.
ನಂತರ, ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು. ಬಳಿಕ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಅಲ್ಲಿಂದ ಪುತ್ತೂರಿನ ಸ್ನೇಹಿತರೊಬ್ಬರ ಮನೆಯ ಗೃಹಪ್ರವೇಶಕ್ಕೆ ತೆರಳಿ, ಬಳಿಕ ಬೆಂಗಳೂರಿಗೆ ತೆರಳಿದರು.