ಪ್ರೇಮಿಗಳ ದಿನದಂದೇ ಡೀಸಿ, ಸಿಇಒ ವಿವಾಹ
Team Udayavani, Feb 3, 2019, 1:36 AM IST
ದಾವಣಗೆರೆ: ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್, ಜಿಲ್ಲಾ ಪಂಚಾಯತ್ ಸಿಇಒ ಎಸ್. ಅಶ್ವತಿ ಅವರು ಫೆ. 14ರ ಪ್ರೇಮಿಗಳ ದಿನದಂದು ಕೇರಳದ ಕಲ್ಲಿಕೋಟೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮೂಲತಃ ಆಂಧ್ರ ಪ್ರದೇಶದ ವಿಶಾಖಪಟ್ಟಣಂ (ವೈಜಾಗ್)ನ ಡಾ| ಬಗಾದಿ ಗೌತಮ್ ಕಾಕಿನಾಡಿನ ರಂಗರಾಯ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿ ನಂತರ ಭಾರತ ಸೇವಾ ಆಯೋಗದ ಪರೀಕ್ಷೆ ಬರೆದವರು. 2009ನೇ ಬ್ಯಾಚ್ ಐಎಎಸ್ ಅಧಿಕಾರಿ ಯಾಗಿರುವ ಅವರು ಬೆಳಗಾವಿ ಜಿ.ಪಂ. ಸಿಇಒ, ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ 4 ತಿಂಗಳ ಹಿಂದೆ ದಾವಣಗೆರೆ ಡೀಸಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೇರಳದ ಕಲ್ಲಿಕೋಟೆಯ ನಿವಾಸಿ ಎಸ್. ಅಶ್ವತಿ 2013ನೇ ಸಾಲಿನ ಐಎಎಸ್ ಅಧಿಕಾರಿ. ಮಣಿಪಾಲದಲ್ಲಿ ಎಂಬಿಎ ಮುಗಿಸಿದ ನಂತರ ಐಎಎಸ್ ಪರೀಕ್ಷೆ ಬರೆದಿದ್ದರು. ಡಾ| ಬಗಾದಿ ಗೌತಮ್ ಮತ್ತು ಎಸ್. ಅಶ್ವತಿ ಅವರದ್ದು ನಾಲ್ಕು ವರ್ಷದ ಗೆಳೆತನ. ಈಗ ಪ್ರೇಮಿಗಳ ದಿನದಂದೇ ಇಬ್ಬರೂ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಫೆ. 14 ರ ಗುರುವಾರ ಬೆಳಗ್ಗೆ 10ಕ್ಕೆ ಎಸ್.ಅಶ್ವತಿಯವರ ತವರೂರು ಕಲ್ಲಿಕೋಟೆಯ ಟ್ಯಾಗೋರ್ ಹಾಲ್ನಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. ಫೆ. 17 ರಂದು ವಿಶಾಖಪಟ್ಟಣಂನ ಪಾರ್ಕ್ ಹೋಟೆಲ್ನಲ್ಲಿ ಆರತಕ್ಷತೆ ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ