ಡಿಸಿಸಿ-ಅಪೆಕ್ಸ್ ಬ್ಯಾಂಕ್ ವಿಲೀನ: ಸಾಧಕ-ಬಾಧಕ ಅಧ್ಯಯನ ನಡೆಸಿ ಕೇಂದ್ರಕ್ಕೆ ಪ್ರಸ್ತಾವನೆ
Team Udayavani, Mar 29, 2022, 10:30 PM IST
ಬೆಂಗಳೂರು: ರಾಜ್ಯದ ಡಿಸಿಸಿ ಬ್ಯಾಂಕ್ಗಳನ್ನು ಅಪೆಕ್ಸ್ ಬ್ಯಾಂಕ್ನಲ್ಲಿ ವಿಲೀನಗೊಳಿಸುವ ಬಗ್ಗೆ ಸಾಧಕ-ಬಾಧಕಗಳ ಅಧ್ಯಯನ ನಡೆಸಿ ಅನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಮಂಗಳವಾರ ಪ್ರಶ್ನೋತ್ತರ ವೇಳೆ ಆಡಳಿತ ಪಕ್ಷದ ಮುಖ್ಯ ಸಚೇತಕ ಸದಸ್ಯ ವೈ.ಎ. ನಾರಾಯಣಸ್ವಾಮಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನೆರೆಯ ಕೇರಳ, ಗುಜರಾತ್, ಛತ್ತೀಸ್ಗಡದಲ್ಲಿ ಡಿಸಿಸಿ ಬ್ಯಾಂಕ್ಗಳನ್ನು ಅಲ್ಲಿನ ಅಪೆಕ್ಸ್ ಬ್ಯಾಂಕ್ಗಳಲ್ಲಿ ವಿಲೀನ ಮಾಡಲಾಗಿದೆ.
ಇದರಿಂದ ಡಿಸಿಸಿ ಬ್ಯಾಂಕ್ಗಳ ಕಮಿಷನ್ ನೇರವಾಗಿ ರೈತರಿಗೆ ಸಿಗಲಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಈ ವಿಲೀನಗೊಳಿಸಲು ಸಾಧಕ-ಬಾಧಕಗಳ ಕುರಿತು ಅಧ್ಯಯನ ನಡೆಸಲಾಗುತ್ತಿದೆ.
ಈಗಾಗಲೇ ರಾಜ್ಯದ 21 ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರ ಜತೆಗೆ ಸಭೆ ನಡೆಸಲಾಗಿದೆ. ವಿಲೀನದ ಬಗ್ಗೆ ಅಧ್ಯಯನ ವರದಿ ಬಂದ ಮೇಲೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಗತ್ಯಬಿದ್ದರೆ ಕೇರಳ, ಗುಜರಾತ್, ಛತ್ತೀಸ್ಗಡಕ್ಕೆ ಅಧಿಕಾರಿಗಳ ತಂಡ ಕಳುಹಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಎರಡನೇ ಮದುವೆಯಾಗಲಿದ್ದಾರೆ 2015 ರ ಐಎಎಸ್ ಟಾಪರ್ ಟೀನಾ ದಾಬಿ
ಕೃಷಿಯೇತರ ಸಾಲ-ಪ್ರಕರಣ ದಾಖಲು
ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನಿಂದ ಕಳೆದ ಐದು ವರ್ಷಗಳಲ್ಲಿ 1,421 ಜನರಿಗೆ ಕೃಷಿಯೇತರ ಸಾಲ ನೀಡಲಾಗಿದ್ದು, ಇದರಲ್ಲಿ ಕೇವಲ 133 ಸುಸ್ತಿದಾರರಾಗಿದ್ದಾರೆ. ಇದರ ಮೊತ್ತ 2.40 ಕೋಟಿ ರೂ. ಆಗಿದ್ದು, ಅವರೆಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ರೈತರಿಗೆ ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ನೀಡಲಾಗಿದ್ದು, ಸುಸ್ತಿದಾರ ರೈತರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ