ಡಿಸಿಇಟಿ: ಪ್ರವೇಶ ಪರೀಕ್ಷೆ ಅಂಕ 100ಕ್ಕೆ ಇಳಿಕೆ: ಈ ವರ್ಷದಿಂದಲೇ ಹೊಸ ನಿಯಮ

ಪ್ರಶ್ನೆಪತ್ರಿಕೆ ಬಗ್ಗೆ ಅಧಿಸೂಚನೆ ವೇಳೆಗೆ ಅಂತಿಮ

Team Udayavani, Sep 18, 2022, 7:40 AM IST

ಡಿಸಿಇಟಿ: ಪ್ರವೇಶ ಪರೀಕ್ಷೆ ಅಂಕ 100ಕ್ಕೆ ಇಳಿಕೆ: ಈ ವರ್ಷದಿಂದಲೇ ಹೊಸ ನಿಯಮ

ಬೆಂಗಳೂರು: ಡಿಪ್ಲೊಮಾ ಸಿಇಟಿ (ಡಿಸಿಇಟಿ) ಕೋರ್ಸ್‌ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಹತ್ವದ ಬದಲಾವಣೆ ಮಾಡಿದೆ. ಪ್ರವೇಶ ಪರೀಕ್ಷೆ ಅಂಕಗಳನ್ನು 180ರಿಂದ 100ಕ್ಕೆ ಇಳಿಸಿದ್ದು, ಡಿಪ್ಲೊಮೊ ವ್ಯಾಸಂಗಕ್ಕೆ ಅಪ್ಲೆ„ಡ್‌ ವಿಜ್ಞಾನ ಮತ್ತು ಗಣಿತವಿಷಯಗಳನ್ನು ಮಾತ್ರ ಪರಿಗಣಿಸಿ ಎಲ್ಲ ಕೋರ್ಸ್‌ಗಳಿಗೆ ಅನ್ವಯವಾಗು ವಂತೆ ಪರೀಕ್ಷೆ ನಡೆಸಲಿದೆ.

ಯಾವುದೇ ಎಂಜಿನಿಯರಿಂಗ್‌ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿರುವ ಅಭ್ಯರ್ಥಿಗಳು ಬೇರೆ ಯಾವುದೇ ಎಂಜಿನಿಯರಿಂಗ್‌ ಪದವಿ ಪ್ರವೇಶಕ್ಕೆ ಅರ್ಹರು ಎಂದು ಅಖೀಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿ ಷತ್ತು (ಎಐಸಿಟಿಇ) 2020ರಲ್ಲಿ ನಿಯಮಗಳನ್ನು ಬದಲಾವಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೂತನ
ನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ ಡಿಸಿಇಟಿ- 2022ರ ಪರೀಕ್ಷೆಗೆ ಮಾತ್ರ ಪರಿಗಣಿಸಿ ಪರೀಕ್ಷಾ ಪ್ರಾಧಿಕಾರವು ನಿಯಮಗಳನ್ನು ಆದೇಶಿಸಿದೆ.

ಹೊಸ ನಿಯಮಗಳೇನು?
ಡಿಸಿಇಟಿ-2022ರ ಪರೀಕ್ಷೆಯಲ್ಲಿ ಡಿಪ್ಲೊಮಾ ವ್ಯಾಸಂಗದಲ್ಲಿ ಅಭ್ಯಾಸ ಮಾಡಿರುವ ಅಪ್ಲೆ„ಡ್‌ ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಮಾತ್ರ ಪರಿಗಣಿಸಿ ಎಲ್ಲ ವಿಷಯ ಗಳಿಗೆ ಅನ್ವಯವಾಗುವಂತೆ ಒಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಡಿಸಿಇಟಿ-2022ರ ಪರೀಕ್ಷೆಯನ್ನು 100 ಅಂಕಗಳಿಗೆ 3 ಗಂಟೆಯ ಅವಧಿಯ ಪರೀಕ್ಷೆಯನ್ನು ನಡೆಸುವುದು.
ಡಿಪ್ಲೊಮಾ ಅಂತಿಮ ವರ್ಷದ 5 ಮತ್ತು 6ನೇ ಸೆಮಿಸ್ಟರ್‌ ಪರೀಕ್ಷೆಯ ತೇರ್ಗಡೆಯಾದ ಫ‌ಲಿತಾಂಶವನ್ನು ಪರಿಗಣನೆಗೆ ತೆಗೆದುಕೊಳ್ಳುವುದು. ಡಿಸಿಇಟಿ-2022ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 100 ಅಂಕಗಳಿಗೆ ಗಳಿಸಿದ ಅಂಕಗಳ ಶೇ.50ರಷ್ಟು ಅಂಕಗಳನ್ನು ಪರಿಗಣಿಸುವುದು. ಅದೇ ರೀತಿ ಅಂತಿಮ ವರ್ಷದ ಡಿಪ್ಲೊಮಾ ತೇರ್ಗಡೆಯಾಗಿ ಪಡೆದ ಒಟ್ಟಾರೆ ಅಂಕಗಳ ಶೇ.50ರಷ್ಟು ಅನ್ನು ಪರಿಗಣನೆಗೆ ತೆಗೆದುಕೊಂಡು ಎರಡನ್ನೂ ಸೇರಿಸಿ ವಿದ್ಯಾರ್ಥಿಗಳ ರ್‍ಯಾಂಕ್‌ ಅನ್ನು ನಿಗದಿಪಡಿಸಲಾಗುತ್ತದೆ.

ಪ್ರಶ್ನೆಪತ್ರಿಕೆಯಲ್ಲಿ ಬದಲಾವಣೆ ಏನು?
ಡಿಪ್ಲೊಮಾದಲ್ಲಿ ಬೇರೆ ಬೇರೆ ಕೋರ್ಸ್‌ಗಳನ್ನು ಕಲಿಯುವವರಿಗೆ ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸ ಬೇಕಿದೆ. ಈ ಹಿನ್ನೆಲೆಯಲ್ಲಿ 100 ಅಂಕಗಳಲ್ಲಿ ಯಾವ ವಿಷಯಕ್ಕೆ ಎಷ್ಟು ಅಂಕಗಳ ಪ್ರಶ್ನೆಗಳನ್ನು ನೀಡಬೇಕು ಎಂಬುದು ಇನ್ನಷ್ಟೇ ನಿರ್ಣಯ ವಾಗಬೇಕಿದೆ. ಈವರೆಗೆ 180 ಅಂಕಗಳಿಗಿದ್ದ ಪರೀಕ್ಷೆಯನ್ನು 100 ಅಂಕಗಳಿಗೆ ಮತ್ತು ಎಲ್ಲ ಕೋರ್ಸ್‌ಗಳಿಗೆ ಅನ್ವಯ ಆಗಬೇಕಿರುವುದರಿಂದ ಪ್ರಶ್ನೆಪತ್ರಿಕೆ ಮಾದರಿಯನ್ನು ತಜ್ಞರೊಂದಿಗೆ ಚರ್ಚಿಸಿ ಅಧಿಸೂಚನೆ ವೇಳೆಗೆ ವಿದ್ಯಾರ್ಥಿಗಳಿಗೆ ತಿಳಿಸಲಾಗುವುದು ಎಂದು ಕೆಇಎ ಮೂಲಗಳು ತಿಳಿಸಿವೆ.

– ಎನ್‌. ಎಲ್‌. ಶಿವಮಾದು

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.