5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಖಂಡಿತಾ ಅಧಿಕಾರಕ್ಕೆ ಬರುತ್ತದೆ: ಡಿಸಿಎಂ ವಿಶ್ವಾಸ


Team Udayavani, May 2, 2021, 7:51 PM IST

5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಖಂಡಿತಾ ಅಧಿಕಾರಕ್ಕೆ ಬರುತ್ತದೆ: ಡಿಸಿಎಂ ವಿಶ್ವಾಸ

ಬೆಂಗಳೂರು: ಕೇರಳದ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿ ನಿರಾಶೆಗೊಂಡಿಲ್ಲ. 2024ರ ಲೋಕಸಭೆ ಹಾಗೂ 2026ರ ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡುತ್ತೇವೆ ಎಂದು ಕೇರಳ ಬಿಜೆಪಿಯ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.

ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮುಂದಿನ ಐದು ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಮಾತನ್ನು ಇವತ್ತು ಆತ್ಮವಿಶ್ವಾಸದಿಂದ ಹೇಳುತ್ತಿದ್ದೇನೆ.  ಅದಕ್ಕೆ ಅಗತ್ಯವಾದ ಎಲ್ಲ ರೀತಿಯಲ್ಲೂ ಪಕ್ಷವನ್ನು ಬಲಪಡಿಸಲಾಗುವುದು” ಎಂದರು.

ಕೇರಳದಲ್ಲಿ ಕೆಲ ಕಾರಣಗಳಿಂದ ಪಿಣರಾಯಿ ವಿಜಯನ್‌ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ. ಹಾಗೆ ನೋಡಿದರೆ ದೇಶದಲ್ಲಿ ಕಮ್ಯುನಿಸ್ಟ್‌ ಪಕ್ಷಗಳ ಕಾಲ ಮುಗಿದಿದೆ. ಪಶ್ಚಿಮ ಬಂಗಾಳದಲ್ಲಿ ಆ ಪಕ್ಷ ಕಣ್ಮರೆಯಾಗುತ್ತಿರುವುದೇ ಇದಕ್ಕೆ ಸಾಕ್ಷಿ. ಇನ್ನು ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕೂಡ ಕೊನೆಗಾಲದಲ್ಲಿದೆ. ಮುಂದಿನ ಚುನಾವಣೆ ಹೊತ್ತಿಗೆ ಬಿಜೆಪಿಯನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಎಲ್ಲ ಕೆಲಸಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ :  ಗೋವಾ : ಲಾಕ್ ಡೌನ್ ತೆರವು ಮಾಡಿ ಕಠಿಣ ನಿಯಮಗಳನ್ನು ಮುಂದುವರೆಸಿದ ಸರ್ಕಾರ

ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಾಗಲಿಲ್ಲ ಎನ್ನುವುದಕ್ಕಿಂತ ಕೇರಳ ಜನತೆ ಕೊಟ್ಟ ಜನಾದೇಶವನ್ನು ನಾವು ಗೌರವಿಸುತ್ತೇವೆ. ಆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಚುನಾವಣೆ ಅಖಾಡಕ್ಕೆ ಇಳಿದಿತ್ತು. ನಮ್ಮ ಪಕ್ಷದ ಶಕ್ತಿಯ ಜತೆಗೆ, ಇತರೆ ಪಕ್ಷಗಳ ಶಕ್ತಿ-ದೌರ್ಬಲ್ಯಗಳನ್ನು ನಾವು ಅರಿತುಕೊಂಡಿದ್ದೇವೆ. ಮುಂದಿನ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಲಿದೆ ಎಂದು ಅವರು ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಕಳೆದ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆದ್ದಿತ್ತು. 2021ನೇ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ಎಲ್ಲಿಯ 3 ಕ್ಷೇತ್ರ, ಎಲ್ಲಿಯ 75. ಒಂದಂಕಿಯಿಂದ ಎರಡಂಕಿ ಸಾಧನೆ ಚಿಕ್ಕದೇನಲ್ಲ. 2026ರ ಚುನಾವಣೆಗೆ ಇದು ಅತ್ಯುತ್ತಮ ಮುನ್ನಡಿಯಾಗಿದೆ ಎಂದರು ಅವರು.

ಅಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ತಮಿಳುನಾಡಿನಲ್ಲಿ ನಾವು ಕಳೆದ ಚುನಾವಣೆಯಲ್ಲಿ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಆದರೆ, ಪ್ರಸಕ್ತ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಪುದುಚೆರಿಯಲ್ಲೂ ಪಕ್ಷ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ ಸ್ಥಾನ ಬಿಜೆಪಿಗೆ ಸಿಕ್ಕಿದೆ:

ವಿಧಾನಸಭೆ ಉಪ ಚುನಾವಣೆ ನಡೆದ ಎರಡು ಕ್ಷೇತ್ರಗಳ ಪೈಕಿ ಬಸವ ಕಲ್ಯಾಣದಲ್ಲಿ ಬಿಜೆಪಿ ಗೆದ್ದಿದೆ. ಮಸ್ಕಿಯಲ್ಲಿ ಸೋತಿರುವುದಕ್ಕೆ ನಿರಾಶೆ ಇಲ್ಲ. ಯಾಕೆಂದರೆ, ಇವೆರಡೂ ಕ್ಷೇತ್ರಗಳು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದವು ಎಂದ ಅವರು, ಮಸ್ಕಿ ಸೋಲು ಒಬ್ಬರ (ಬಿ.ವೈ.ವಿಜಯೇಂದ್ರ) ತಲೆಗೆ ಕಟ್ಟುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಹಾಗೆ ಮಾಡುವುದಿಲ್ಲ. ಚುನಾವಣೆಯಲ್ಲಿ ಇಡೀ ಸಂಘಟನೆ ತೊಡಗಿಸಿಕೊಳ್ಳುತ್ತದೆ. ಸೋಲು ಗೆಲುವು ಎನ್ನುವುದು ಎಲ್ಲರಿಗೂ ಸಂಬಂಧಿಸಿದ್ದು, ಅದಕ್ಕೆ ಎಲ್ಲರೂ ಹೊಣೆಗಾರರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೋವಿಡ್‌ & ಫಲಿತಾಂಶಕ್ಕೂ ಸಂಬಂಧ ಇಲ್ಲ;

ಮಸ್ಕಿ ಸೋಲು ಹಾಗೂ ಸರಕಾರದ ಕೋವಿಡ್‌ ನಿರ್ವಹಣೆಗೆ ಸಂಬಂಧ ಇಲ್ಲ. ರಾಜ್ಯಕ್ಕೆ ಮಾತ್ರ ಸೋಂಕು ಬಂದಿಲ್ಲ. ಇಡೀ ಜಗತ್ತಿಗೇ ಸೋಂಕು ಬಂದಿದೆ. ಎಲ್ಲೆಡೆ ಈ ಮಹಾಮಾರಿಯನ್ನು ನಿರ್ವಹಣೆ ಮಾಡಲು ಹೆಣಗಾಡಲಾಗುತ್ತಿದೆ. ಹೀಗಾಗಿ ಕೋವಿಡ್‌ಗೂ ಚುನಾವಣೆಗೂ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಡಿಸಿಎಂ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.