ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನಕ್ಕೆ ಡಿಸಿಎಂ ಗೋವಿಂದ ಕಾರಜೋಳ ಸಂತಾಪ.
Team Udayavani, May 26, 2021, 3:20 PM IST
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಶತಾಯುಷಿಗಳಾದ ಹೆಚ್. ಎಸ್.ದೊರೆಸ್ವಾಮಿಯವರ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ದೊರೆಸ್ವಾಮಿ ಅವರ ನಿಧನದ ಸುದ್ದಿ ಆಘಾತಕಾರಿಯಾಗಿದ್ದು, ದಿಗ್ಬಾಂತನಾಗಿದ್ದೇನೆ. ಅವರು ಇಳಿ ವಯಸ್ಸಿನಲ್ಲೂ ಉತ್ಸಾಹಿಯಾಗಿ, ಸಕ್ರಿಯ ವಾಗಿ ಹೋರಾಟಗಳಲ್ಲಿ ನೇತೃತ್ವ ವಹಿಸುತ್ತಿದ್ದರು. ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದಿದ್ದಾರೆ
ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಡಿಸಿಎಂ ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ : ಕೇಂದ್ರದಿಂದ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕ ಹಂಚಿಕೆ: ಶೆಟ್ಟರ್