ಡಿಸಿಎಂ ಸ್ಥಾನ ತ್ಯಾಗಕ್ಕೆ ಸಿದ್ಧ: ಕಾರಜೋಳ
Team Udayavani, Jan 29, 2020, 3:04 AM IST
ಚಿಕ್ಕಮಗಳೂರು: ಪಕ್ಷದ ಮುಖಂಡರು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದರೆ ಹುದ್ದೆ ತ್ಯಾಗಕ್ಕೆ ಸಿದ್ಧ ಎಂದು ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಪುನರುಚ್ಚರಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ.
ರಾಜೀನಾಮೆ ನೀಡೋದು, ಬಿಡೋದು ಪಕ್ಷದ ಆಂತರಿಕ ವಿಚಾರ. ಪ್ರಧಾನಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಸೇರಿ ಈ ಬಗ್ಗೆ ಚರ್ಚೆ ಮಾಡುತ್ತಾರೆ. ಪಕ್ಷ ಏನೇ ನಿರ್ಣಯ ತೆಗೆದುಕೊಂಡರೂ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷದ ಮುಖಂಡರು ಉಪ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂದು ಸೂಚಿಸಿದರೆ ಸ್ಥಳದಲ್ಲೇ ಸರ್ಕಾರಿ ಕಾರನ್ನು ವಾಪಸ್ ಕಳಿಸಿ ಬಸ್ನಲ್ಲಿ ಹೋಗಲು ಸಿದ್ಧ ಎಂದರು.
ಕೆಲವರು ಉಪ ಮುಖ್ಯಮಂತ್ರಿ, ಮಂತ್ರಿ ಸ್ಥಾನ ತಮಗೆ ಕೊಡಿ ಎಂದು ಕೇಳಿದ್ದಾರೆ. ಇವೆಲ್ಲ ಸಾಮಾನ್ಯ ಬೇಡಿಕೆಗಳು. ಅದನ್ನು ಪರಿಗಣಿಸೋದು, ಬಿಡೋದು ಪಕ್ಷದ ಮುಖಂಡರಿಗೆ ಬಿಟ್ಟ ವಿಚಾರ. ಸೋತವರಿಗೆ ಸ್ಥಾನಮಾನ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಿಎಂಗೆ ಹೈಕಮಾಂಡ್ ಸಂಪೂರ್ಣ ಸ್ವಾತಂತ್ರ ನೀಡಿದೆ. ಇಲ್ಲದಿದ್ದರೆ ಅವರನ್ಯಾಕೆ ಮುಖ್ಯಮಂತ್ರಿ ಮಾಡುತ್ತಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…