ವಾಣಿವಿಲಾಸ ಸಾಗರಕ್ಕೆ ಡೆಡ್‌ ಸ್ಟೋರೇಜ್‌ ಭೀತಿ


Team Udayavani, May 17, 2019, 6:08 AM IST

aaaasddd

ಚಿತ್ರದುರ್ಗ: ಜಿಲ್ಲೆಯ ಏಕೈಕ ಅಣೆಕಟ್ಟು ಎನಿಸಿಕೊಂಡಿರುವ ಹಿರಿಯೂರಿನ ವಾಣಿವಿಲಾಸ ಸಾಗರ ಜಲಾಶಯ ಸಂಪೂರ್ಣ ಬತ್ತಿ ಹೋಗುವ ಭೀತಿ ಎದುರಾಗಿದ್ದು, ಡೆಡ್‌ ಸ್ಟೋರೇಜ್‌ ಹಂತ ತಲುಪಿದೆ.

ವಿವಿ ಸಾಗರ ಜಲಾಶಯದ ಡೆಡ್‌ ಸ್ಟೋರೇಜ್‌ 60 ಅಡಿ ಇದ್ದು, ಏ.29ರಂದು ಜಲಾಶಯದಲ್ಲಿದ್ದ ನೀರಿನ ಪ್ರಮಾಣ 61 ಅಡಿ ಮಾತ್ರ. 2017ರಲ್ಲಿ 66 ಅಡಿ ಹಾಗೂ 2018ರಲ್ಲಿ 68 ಅಡಿ ನೀರಿನ ಪ್ರಮಾಣ ಇತ್ತು. 2019ರಲ್ಲಿ 61 ಅಡಿ ತಲುಪಿದೆ. ಅಂದರೆ ಹೆಚ್ಚುವರಿಯಾಗಿ ಒಂದು ಅಡಿ ನೀರಿದ್ದು, ಇಲ್ಲಿಂದ ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ ನಗರಗಳು ಸೇರಿದಂತೆ ಮಾರ್ಗ ಮಧ್ಯದ ಹಳ್ಳಿಗಳು ಹಾಗೂ ಚಳ್ಳಕೆರೆ ತಾಲೂಕಿನ ಕುದಾಪುರದಲ್ಲಿರುವ ಡಿಆರ್‌ಡಿಒಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಡೆಡ್‌ ಸ್ಟೋರೇಜ್‌ಗಿಂತ ಕೆಳಗಿನ ನೀರು ಬಳಕೆ ಅಪಾಯದ ಸಂಕೇತವಾಗಿದೆ.

ಜಿಲ್ಲೆಯ ಬರ ಪರಿಸ್ಥಿತಿ ಕಂಡು ಶತಮಾನದ ಹಿಂದೆಯೇ ವಾಣಿವಿಲಾಸ ಸಾಗರ ಜಲಾಶಯವನ್ನು ಪ್ರಮುಖವಾಗಿ ಕೃಷಿ ಉದ್ದೇಶಕ್ಕಾಗಿಯೇ ನಿರ್ಮಾಣ ಮಾಡಲಾಗಿದೆ. ಈ ಜಲಾಶಯವನ್ನು ನಂಬಿ ಕೃಷಿ ಮಾಡುತ್ತಿದ್ದ ರೈತರ ಬಹುತೇಕ ತೋಟಗಳು ಒಣಗಿ ಹೋಗಿವೆ. ಅಚ್ಚುಕಟ್ಟು ಪ್ರದೇಶದ ಬಹುತೇಕ ಹಳ್ಳಿಗಳಿಗೆ ಟ್ಯಾಂಕರ್‌ ನೀರು ಆಧಾರ. ಸಾವಿರ ಅಡಿ ಕೊರೆದರೂ ಹನಿ ನೀರು ಬಾರದೆ, ಕುಡಿವ ನೀರಿನ ಸಮಸ್ಯೆ ದಿನೇ ದಿನೆ ಉಲ್ಬಣಿಸುತ್ತಿದೆ.

ವಿವಿ ಸಾಗರ ಇತಿಹಾಸ: ವಾಣಿವಿಲಾಸ ಸಾಗರ ಜಲಾಶಯ ಹಿರಿಯೂರು ತಾಲೂಕಿನ ಮಾರಿಕಣಿವೆ ಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ 1898-1907ರ ಅವಧಿಯಲ್ಲಿ ನಿರ್ಮಾಣವಾಗಿದೆ. ವೇದಾವತಿ ನದಿ, ಕೃಷ್ಣಾ ನದಿಯ ಉಪ ನದಿಯಾಗಿದೆ. 43.28 ಮೀಟರ್‌ ಎತ್ತರ (142 ಅಡಿ) ಮತ್ತು 405.50 ಮೀಟರ್‌ ಉದ್ದದ ನಾನ್‌ ಓವರ್‌ ಪ್ಲೋ ಅಣೆಕಟ್ಟು ನಿರ್ಮಾಣ ಮಾಡಿ 25,000 ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಅಣೆಕಟ್ಟು ನಿರ್ಮಾಣದಿಂದ ಜಲಾಶಯದ ಒಟ್ಟಾರೆ ಸಂಗ್ರಹ ಸಾಮರ್ಥ್ಯ 850.30 (30ಟಿಎಂಸಿ). ಜಲಾವೃತ ಪ್ರದೇಶ 5374 ಚದರ ಕಿಮೀ (2075 ಚದರ ಮೈಲಿ) ಆಗಿದೆ.

ಡೆಡ್‌ ಸ್ಟೋರೇಜ್‌ 60 ಅಡಿ ತಲುಪಿದ್ದು, ಇದರ ಕೆಳಗಿನ ನೀರು
ಬಳಕೆ ಮಾಡಬೇಕಾದರೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ.ಆದರೆ ಡೆಡ್‌ ಸ್ಟೋರೇಜ್‌ ಕೆಳಗಿನ ನೀರು ಬಳಕೆ ಮಾಡುವುದರಿಂದ ಅಣೆಕಟ್ಟೆಗೆ ತಾಂತ್ರಿಕವಾಗಿ ಯಾವುದೇ ಅಪಾಯ ಇಲ್ಲ.
– ಶಿವಕುಮಾರ್‌, ಭದ್ರಾ ಮೇಲ್ದಂಡೆ
ಯೋಜನೆಯ ಮುಖ್ಯ ಎಂಜಿನಿಯರ್‌

ಅಣೆಕಟ್ಟೆ ನಿರ್ಮಾಣ ಮಾಡಿ 112 ವರ್ಷಗಳು ಕಳೆದ ನಂತರ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹನಿ ನೀರಿಗೆ ನಿತ್ಯ ಕಾದಾಟವಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಅಣೆಕಟ್ಟೆ ಬತ್ತಿ ಹೋಗುವ ಸಾಧ್ಯತೆ ಇದೆ.
– ಎ. ಉಮೇಶ್‌, ವಿವಿ ಪುರ

-ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.