ಸಕ್ರೆಬೈಲು ಕಾಡಿನಲ್ಲಿ ಹೆಣ್ಣಾನೆ ಸಾವು
Team Udayavani, May 26, 2019, 3:03 AM IST
ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿ ಶನಿವಾರ ಹೆಣ್ಣು ಆನೆಯೊಂದು ಮೃತಪಟ್ಟಿದೆ. ಭಾರತಿ (1 ವರ್ಷ 9ತಿಂಗಳು) ಎಂಬ ಮರಿಯಾನೆ ಅನಾರೋಗ್ಯದಿಂದ ಸಕ್ರೆಬೈಲು ಕಾಡಿನಲ್ಲಿ ಮೃತಪಟ್ಟಿದೆ.
2014ರಲ್ಲಿ ಹಾಸನದಲ್ಲಿ ಹೆಣ್ಣಾನೆಯೊಂದನ್ನು ಸೆರೆ ಹಿಡಿದು ಇಲ್ಲಿಗೆ ತಂದು ಭಾನುಮತಿ ಎಂದು ನಾಮಕರಣ ಮಾಡಲಾಗಿತ್ತು. ಈ ಆನೆ ಭಾರತಿಗೆ ಜನ್ಮ ನೀಡಿತ್ತು. ತನ್ನ ಚೇಷ್ಟೆ ಹಾಗೂ ಆಟದ ಮೂಲಕ ಭಾರತಿ ಪ್ರವಾಸಿಗರ ಗಮನ ಸೆಳೆಯುತ್ತಿದ್ದಳು.
ಅನಾರೋಗ್ಯದಿಂದ ಬಳಲುತ್ತಿದ್ದ ಆನೆಮರಿಗೆ ಶುಕ್ರವಾರ ಚಿಕಿತ್ಸೆ ನೀಡಲಾಗಿತ್ತು. ಇದರಿಂದ ಚೇತರಿಸಿಕೊಂಡು ಆಟವಾಡಿಕೊಂಡು, ಮೇವು ತಿನ್ನುತ್ತ ಇತ್ತು. ಆದರೆ, ರಾತ್ರಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿ ಮೃತಪಟ್ಟಿದೆ.
ಶನಿವಾರ ಬೆಳಗ್ಗೆ ಹೋಗಿ ನೋಡಿದಾಗಲೇ ಈ ಬಗ್ಗೆ ತಿಳಿದು ಬಂದಿದೆ. ಮರಿ ಮೃತಪಟ್ಟಿದ್ದನ್ನು ಕಂಡು ತಾಯಿ ಭಾನುಮತಿ ಕೆಲಕಾಲ ಆಕ್ರಂದನ ವ್ಯಕ್ತಪಡಿಸಿತು. ಅದನ್ನು ಆ ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ