ಸಾಲಬಾಧೆ: ದಂಪತಿ ಆತ್ಮಹತ್ಯೆ
Team Udayavani, Aug 21, 2019, 3:00 AM IST
ಬಾದಾಮಿ: ಪ್ರವಾಹದಿಂದ ಬೆಳೆ ನಾಶ ಹಾಗೂ ಸಾಲಬಾಧೆಗೆ ಮನನೊಂದು ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾಚಿನಗುಡ್ಡ ಗ್ರಾಮದಲ್ಲಿ ನಡೆದಿದೆ. ರಮೇಶ್ ಬೆಳ್ಳಿ (28) ಹಾಗೂ ಶಿವಲೀಲಾ ಬೆಳ್ಳಿ (21) ಆತ್ಮಹತ್ಯೆಗೆ ಶರಣಾದ ದಂಪತಿ. ರಮೇಶ ಮನೆಯಲ್ಲಿ ಸೀರೆಯಿಂದ ನೇಣಿಗೆ ಶರಣಾಗಿದ್ದು, ಪತ್ನಿ ಶಿವಲೀಲಾ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
4 ಎಕರೆ ಹೊಲದಲ್ಲಿನ ಬೆಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್ನಲ್ಲಿ ಬೆಳೆ ಸಾಲ, ಟ್ರಾಕ್ಟರ್ ಸಾಲ ಸೇರಿ 7 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲ ಗಳು ತಿಳಿಸಿವೆ. ಬಾದಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ