ಪ್ರಕರಣ ಇತ್ಯರ್ಥಕ್ಕೆ ವಿಕೇಂದ್ರೀಕರಣ ವ್ಯವಸ್ಥೆ: ಸಚಿವ ಆರ್. ಅಶೋಕ್
ಅನ್ಯ ಅಧಿಕಾರಿಗಳಿಗೆ ಡಿಸಿ, ಎಸಿ ಕೋರ್ಟ್ಗಳ ಕೇಸು ಇತ್ಯರ್ಥ ಅಧಿಕಾರ
Team Udayavani, Nov 1, 2022, 7:10 AM IST
ಬೆಂಗಳೂರು: ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳ ಶೀಘ್ರ ಹಾಗೂ ಕಾಲಮಿತಿಯ ಇತ್ಯರ್ಥಕ್ಕೆ ವಿಕೇಂದ್ರೀಕರಣ ವ್ಯವಸ್ಥೆ ರೂಪಿಸಿ, ಅನ್ಯ ಅಧಿಕಾರಿಗಳಿಗೆ ಅಧಿಕಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 93,834 ಪ್ರಕರಣಗಳು ಬಾಕಿ ಇದ್ದು, ಕಾಲಮಿತಿಯ ಇತ್ಯರ್ಥಕ್ಕಾಗಿ ಅಧಿಕಾರಿಗಳಿಗೆ ಮ್ಯಾಜಿಸ್ಟೀರಿಯಲ್ ಅಧಿಕಾರ ನೀಡಲಾಗುವುದು ಎಂದು ತಿಳಿಸಿದರು.
ಕೊರೊನಾ ಸಂದರ್ಭದಲ್ಲಿ ಈ ನ್ಯಾಯಾಲಯಗಳಲ್ಲಿ ಪ್ರಕರಣಗಳ ವಿಚಾರಣೆ ಸ್ಥಗಿತಗೊಂಡಿದ್ದರಿಂದ ಇತ್ಯರ್ಥಕ್ಕೆ ಬಾಕಿಯಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳ ಪೈಕಿ ಆಯ್ದ ತಾಲ್ಲೂಕುಗಳ ಪ್ರಕರಣಗಳನ್ನು ಹೆಚ್ಚುವರಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿನ ಪ್ರಕರಣಗಳಲ್ಲಿ ಆಯ್ದ ತಾಲ್ಲೂಕುಗಳ ಪ್ರಕರಣಗಳನ್ನು ಉಪವಿಭಾಗಾಧಿಕಾರಿ ಶ್ರೇಣಿಯ ವಿಶೇಷ ಭೂಸ್ವಾಧೀನಾಧಿಕಾರಿ, ತಹಸೀಲ್ದಾರ್ ನ್ಯಾಯಾಲಯದ ಪ್ರಕರಣಗಳ ಪೈಕಿ ಆಯ್ದ ಹೋಬಳಿಗಳ ಪ್ರಕರಣಗಳನ್ನು ಉಪ ತಹಸೀಲ್ದಾರ್ಗಳು ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.
ಈ ಕುರಿತು 20 ದಿನಗಳಲ್ಲಿ ಆದೇಶ ಹೊರಡಿಸಲಾಗುವುದು. ಪ್ರಕರಣಗಳ ಇತ್ಯರ್ಥಕ್ಕಾಗಿ ಮಾಸಿಕವಾರು ವಿಚಾರಣೆ, ಇತ್ಯರ್ಥಕ್ಕೆ ಗುರಿ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
93,834 ಪ್ರಕರಣ:
ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ 15,881, ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ 62,100 ಹಾಗೂ ತಹಸೀಲ್ದಾರ್ ನ್ಯಾಯಾಲಯಗಳಲ್ಲಿ 15,853 ಪ್ರಕರಣಗಳು ಬಾಕಿ ಇವೆ ಎಂದು ಹೇಳಿದರು.
ಹಕ್ಕುಪತ್ರ ವಿತರಣೆ:
ಇದೇ ವೇಳೆ, ರಾಜ್ಯಾದ್ಯಂತ ಹಾಡಿ, ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ ಎಲ್ಲ ನಾಗರಿಕ ಸೌಲಭ್ಯ ಒದಗಿಸುವ ಕಾರ್ಯಕ್ರಮಗಳನ್ನು ಯಾದಗಿರಿಯಲ್ಲಿ ಮಾಡಲು ತೀರ್ಮಾನಿಸಲಾಗಿದೆ. ಐದು ಜಿಲ್ಲೆಗಳ ಒಟ್ಟು 60,000 ಕುಟುಂಬಗಳಿಗೆ ಅಂದು ಏಕಕಾಲಕ್ಕೆ ಹಕ್ಕುಪತ್ರ ವಿತರಿಸಲಾಗುವುದು. ಕುಟುಂಬಗಳು ನೆಲೆಸಿರುವ ವಿಸ್ತೀರ್ಣದ ಮನೆಗಳನ್ನು ಸಂಬಂಧಪಟ್ಟವರ ಹೆಸರಿಗೆ ನೋಂದಣಿ ಮಾಡಿಕೊಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ