2 ತಿಂಗಳ ಹಿಂದೆಯೇ ನಿರ್ಧರಿಸಿದ್ದೆ, ಸಿಎಂ ಸ್ಥಾನಕ್ಕೆ ಯಾರನ್ನೂ ಶಿಫಾರಸ್ಸು ಮಾಡಲ್ಲ:ಬಿಎಸ್ ವೈ
Team Udayavani, Jul 22, 2021, 3:53 PM IST
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಎರಡು ತಿಂಗಳ ಹಿಂದೆಯೇ ನಿರ್ಧಾರ ಮಾಡಿದ್ದೆ. ಹೈಕಮಾಂಡ್ ಯಾವಾಗ ರಾಜೀನಾಮೆ ನೀಡಲು ಸೂಚಿಸುತ್ತಾರೆಯೋ ಅಂದು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾರ ಸೂಚನೆಯನ್ನು ಪಾಲಿಸುತ್ತೇನೆ. ಹೈಕಮಾಂಡ್ ಹೇಳುವವರೆಗೆ ನಾನು ಸಿಎಂ ಆಗಿ ಮುಂದುವರಿಸುತ್ತೇನೆ. ಇದುವರೆಗೆ ಯಾವುದೇ ಸಂದೇಶ ಬಂದಿಲ್ಲ ಎಂದರು.
ಅಧಿಕಾರ ಇಲ್ಲದೇ ಇದ್ದರೂ ಪಕ್ಷ ಸಂಘಟನೆಗೆ ನಾನು ದುಡಿಯುತ್ತೇನೆ. ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಬಿಎಸ್ ವೈ ಹೇಳಿದರು.
ಇದನ್ನೂ ಓದಿ:ಕೇಂದ್ರ ಏನೇ ಹೇಳಿದರೂ ಬಿಎಸ್ ವೈ ಹಾಗೂ ನಾವು ತಲೆಬಾಗುತ್ತೇವೆ: ಆರ್ ಅಶೋಕ್
ಮುಂದೆ ಯಾರನ್ನು ಸಿಎಂ ಮಾಡಬೇಕೆಂದು ನಾನು ಹೇಳುವುದಿಲ್ಲ. ಹೈಕಮಾಂಡ್ ಯಾವ ತೀರ್ಮಾನ ಬೆಕಾದರೂ ಮಾಡಲಿ. ಯಾವ ಸಮುದಾಯಕ್ಕೆ ನೀಡಬೇಕೆಂಬುದರ ಬಗ್ಗೆಯೂ ನಾನು ಮಾತಾನಾಡುವುದಿಲ್ಲ. ಯಾವುದೇ ಹೆಸರನ್ನು ನಾನು ಶಿಫಾರಸ್ಸು ಮಾಡುವುದಿಲ್ಲ ಎಂದು ಯಡಿಯೂರಪ್ಪ, ಇನ್ನೂ ಹೈಕಮಾಂಡ್ ಸಂದೇಶ ಬಂದಿಲ್ಲ. ಈಗಲೇ ಯಾಕೆ ಅವಸರದ ಮಾತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ