ಸಂವಿಧಾನದ ಮೇಲೆ ಚರ್ಚೆಗೆ ನಿರ್ಧಾರ: ಸ್ಪೀಕರ್ ಕಾಗೇರಿ
Team Udayavani, Mar 2, 2020, 3:03 AM IST
ಬೆಂಗಳೂರು: ಸಂವಿಧಾನ ರಚನಾ ಸಮಿತಿಯು ಸಂವಿಧಾ ನಕ್ಕೆ ಅನುಮೋದನೆ ನೀಡಿ 70 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನ ಮಂಡಲ ಅಧಿವೇಶನದಲ್ಲಿ ಎರಡು ದಿನಗಳ ಕಾಲ ಸಂವಿಧಾನದ ಮೇಲೆ ಚರ್ಚೆಗೆ ನಿರ್ಧ ರಿಸಲಾಗಿದೆ. ಇದೇ ಮೊದಲ ಬಾರಿಗೆ ವಿಧಾನ ಮಂಡಲ ಅಧಿವೇಶನ ಸಂದರ್ಭದಲ್ಲಿ ಸಂವಿಧಾನ ಕುರಿತ ಚರ್ಚೆ ನಿಗದಿಪಡಿಸಲಾಗಿದೆ.
ಕಲಾಪ ಸಲಹಾ ಸಮಿತಿ ಯಲ್ಲೂ ಈ ಕುರಿತು ಚರ್ಚಿಸಿ ಆಡಳಿತ ಹಾಗೂ ಪ್ರತಿಪಕ್ಷ ಒಪ್ಪಿಗೆ ಸೂಚಿ ಸಿವೆ. ಸಂವಿಧಾನ ರಚನಾ ಕರಡು ಸಮಿತಿಯು ಭಾರತದ ಸಂವಿಧಾನಕ್ಕೆ 1946 ನವೆಂಬರ್ 26ರಂದು ಒಪ್ಪಿಗೆ ನೀಡಿದ್ದು, 1950ರ ಜ.26ರಿಂದ ಸಂವಿಧಾನ ಜಾರಿಗೆ ಬಂದಿದೆ. ಸಂವಿಧಾನ ಜಾರಿಯಾಗಿ 70 ವರ್ಷ ಪೂರ್ಣ ಗೊಂಡಿರುವ ಹಿನ್ನೆಲೆ ಯಲ್ಲಿ ಸಂವಿಧಾನದ ಆಶಯ, ಉದ್ದೇಶಗಳ ಚರ್ಚೆಗೆ ವಿಧಾನ ಮಂಡಲ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಅವಕಾಶ ಮಾಡಿಕೊಡ ಲಾಗಿದೆ.
ಸಂವಿಧಾನದ ಪರಿಪಾಲನೆಯಲ್ಲಿ ನಮ್ಮ ಜವಾಬ್ದಾರಿ ಗಳು ಏನು ಎಂಬು ದನ್ನು ಅರಿತುಕೊಳ್ಳಲು ಮತ್ತು ಒಟ್ಟಾರೆಯಾಗಿ ಸಂವಿಧಾನದ ಚರ್ಚೆಯೂ ರಾಜಕೀಯ, ರಾಜಕೀಯ ಪಕ್ಷಗಳ ಚರ್ಚೆಗಿಂತ ಮೇಲ್ಪಟ್ಟಿರಬೇಕು ಎಂಬ ಉದ್ದೇಶದಿಂದ ಅವಕಾಶ ಮಾಡಿಕೊಡಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?