ಜೂನ್ ತಿಂಗಳ ಮೊದಲ ವಾರದಲ್ಲಿ ಜನಸೇವಕ ಸೇವೆ ಕುರಿತು ನಿರ್ಧಾರ
Team Udayavani, May 8, 2020, 1:00 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯ ಸರ್ಕಾರದ ಜನ ಸೇವಕ ಸೇವೆಯ ಕುರಿತು ಜೂನ್ ಮೊದಲ ವಾರದಲ್ಲಿ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜನ ಸಾಮಾನ್ಯರ ಮನೆ ಬಾಗಿಲಿಗೆ ಸರ್ಕಾರದ ಸೇವೆಯನ್ನು ಒದಗಿಸುವ ಜನ ಸೇವಕ ಯೋಜನೆಗೆ ಕೆಲವು ತಿಂಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ, ಕೊರೊನಾದಿಂದ ಸೇವೆ ತಾತ್ಕಾಲಿಕ ಸ್ಥಗಿತ ಕಂಡಿತ್ತು. ಈ ಸೇವೆಯ ಪುನರ್ ಆರಂಭ ಕುರಿತು ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದರು. ಯಾವುದೇ ಹೊರಗಿನ ವ್ಯಕ್ತಿ ಕುರಿತು ಇಂದು ಮುಕ್ತ ಮನಸ್ಸಿನಿಂದ ನೋಡುವ ಪರಿಸ್ಥಿತಿ ಇಲ್ಲ. ಈ ವಾತಾವರಣದಲ್ಲಿ ಜನಸೇವಕ
ಪುನರಾರಂಭಿಸುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಸಭೆಯಲ್ಲಿ ಬಂದಿದೆ. ಈ ಹಿನ್ನೆಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಪರಿಸ್ಥಿತಿ ಅವಲೋಕಿಸಿ ಜನಸೇವಕ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು ಎಂದು ತಿಳಿಸಿದ್ದಾರೆ. ಈಗ ಜನಸೇವಕ ಕಾರ್ಯವನ್ನು ಪುನರಾರಂಭಿಸುವುದಕ್ಕೆ ಮುಖ್ಯ ಸಮಸ್ಯೆಯೆಂದರೆ ಸಮಾಜದಲ್ಲಿ ಹೊಸದಾಗಿ ಹುಟ್ಟಿಕೊಂಡಿರುವ ಪರಸ್ಪರ ಸಂಶಯ. ನಮ್ಮ ಜನಸೇವಕರು ನಾಗರಿಕ ಸೇವೆ ಹೋದಾಗ ಮನೆಗಳಲ್ಲಿ ಯಾವ ರೀತಿ ಅವರನ್ನು ನೋಡುತ್ತಾರೆ ಎಂಬುದು ಇಂದಿನ ಪ್ರಶ್ನೆಯಾಗಿದೆ. ಹೀಗಾಗಿ ಜೂನ್ ಮೊದಲ ವಾರದಲ್ಲಿ ಈ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು.
ಜನಸೇವಕ ಸದ್ಯಕ್ಕೆ ಬೆಂಗಳೂರಿನ ದಾಸರಹಳ್ಳಿ, ಮಹದೇವಪುರ, ಬೊಮ್ಮನಹಳ್ಳಿ ಹಾಗೂ ರಾಜಾಜಿನಗರ ಕ್ಷೇತ್ರಗಳಲ್ಲಿ ಪ್ರಾರಂಭವಾಗಿತ್ತು.
ನಗರದ ಎಲ್ಲಾ ಕ್ಷೇತ್ರಗಳಿಗೂ ನಂತರ ರಾಜ್ಯದ ಎಲ್ಲ ನಗರ ಪ್ರದೇಶಗಳಿಗೂ ಜನಸೇವಕ ಸೇವೆ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಹೊಂದಿತ್ತು. ನಾಗರಿಕರ
ಮನೆಬಾಗಿಲಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವುದು ಜನಸೇವಕನ ಕಾರ್ಯವಾಗಿದೆ. ಜನಸೇವಕ ಕಾರ್ಯಕ್ರಮದಡಿ ಸುಮಾರು 50 ನಾಗರಿಕ ಸೇವೆಗಳು ಲಭ್ಯವಿದೆ. ಕೊರೋನಾ ವೈರಸ್ ಆಕ್ರಮಣದಿಂದ ಜನಸೇವಕ ಬೀದಿಗೆ ಬರುವಂತಿಲ್ಲ. ಆದ್ದರಿಂದ ಈ ಅತ್ಯುತ್ತಮ ಸೇವೆ ಸದ್ಯಕ್ಕೆ ಸ್ಥಗಿತಗೊಂಡಿದೆ. ಸರ್ಕಾರದ ಎಲ್ಲ ಕಚೇರಿಗಳು ಕ 45 ದಿನಗಳಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯವಾಗಿಲ್ಲ. ಹೀಗಾಗಿ ಜನಸೇವಕ ಸೇವೆಯೂ ತಾತ್ಕಾಲಿಕವಾಗಿ ನಿಂತಿತ್ತು ಎಂದು ವಿವರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ