Chilli Crop ರಕ್ಷಣೆಗೆ 2.75 ಟಿಎಂಸಿ ನೀರು ಹರಿಸಲು ನಿರ್ಧಾರ: ಡಿ.ಕೆ.ಶಿವಕುಮಾರ್
ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ರೈತರ ಪ್ರತಿಭಟನೆಗೆ ಮಣಿದ ರಾಜ್ಯ ಸರಕಾರ
Team Udayavani, Jan 8, 2024, 6:45 AM IST
ಬೆಂಗಳೂರು: ಕೊನೆಗೂ ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ರೈತರ ಪ್ರತಿಭಟನೆಗೆ ಮಣಿದ ಸರಕಾರ, ಆ ಭಾಗದ ಮೆಣಸಿನಕಾಯಿ ಬೆಳೆ ರಕ್ಷಣೆಗೆ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ 2.75 ಟಿಎಂಸಿ ನೀರು ಹರಿಸಲು ನಿರ್ಧರಿಸಿದೆ.
“ಬರ ಪರಿಸ್ಥಿತಿಯಲ್ಲಿ ಬೆಳೆ ಹಾಕಬಾ ರದು’ ಎಂದು ಮನವಿ ಮಾಡಿದ್ದರೂ ಕೆಲವು ರೈತರು ಭತ್ತದ ಬದಲು ಮೆಣಸಿನಕಾಯಿ ಬೆಳೆ ಹಾಕಿಕೊಂಡಿದ್ದಾರೆ. ಈ ಬೆಳೆ ನಾಶವಾದರೆ, 2 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗುವ ಸಾಧ್ಯತೆ ಇದೆ. ಪ್ರತಿಭಟನನಿರತ ರೈತರು ಹಾಗೂ ಶಾಸಕರು ಮನವಿ ಮಾಡಿದ್ದರಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ. ತತ್ಕ್ಷಣದಿಂದ ನೀರು ಬಿಡುಗಡೆ ಮಾಡಲಾಗುವುದು. 75 ಕಿ.ಮೀ. ನೀರು ಹರಿಯಬೇಕಿದೆ. ಎರಡು ಮೂರು ದಿನಗಳಲ್ಲಿ ನೀರು ತಲುಪಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರವಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಹಿಂದೆ ಮಂಡ್ಯ ರೈತರ ರಕ್ಷಣೆ ಮಾಡಿದ್ದೆವು. ಭದ್ರಾ ನೀರಿನ ವಿಚಾರ ದಲ್ಲೂ ಸಮಸ್ಯೆಯನ್ನು ನಿವಾರಿಸಿ¨ªೆವು. ಈಗ ಕೃಷ್ಣಾ ಮೇಲ್ದಂಡೆ ವ್ಯಾಪ್ತಿ ರೈತರ ರಕ್ಷಣೆ ಮಾಡಲಾಗುತ್ತಿದೆ. ಆಲಮಟ್ಟಿ, ನಾರಾಯಣಪುರ ಅಣೆಕಟ್ಟು ಸಹಿತ 47 ಟಿಎಂಸಿ ನೀರು ಲಭ್ಯ ಇದೆ. ಕುಡಿಯುವ ನೀರಿಗೆ 37 ಟಿಎಂಸಿ ನೀರು, ಇತರೆ ಉದ್ದೇಶಕ್ಕೆ 3 ಟಿಎಂಸಿ ನೀರು ಬೇಕು. ನೀರು ಹರಿಸುವ ವೇಳೆ 1.5 ಟಿಎಂಸಿ ನೀರು ನಷ್ಟವಾಗುತ್ತದೆ. ಈ ಭಾಗದವರ ಒತ್ತಡಕ್ಕೆ ಈಗ 2.75 ಟಿಎಂಸಿ ನೀರು ಬಿಡುಗಡೆ ಮಾಡಲು ತೀರ್ಮಾನಿಸಿದ್ದೇವೆ. ಇನ್ನೂ ಆರು ತಿಂಗಳು ನೀರು ನಿರ್ವಹಣೆ ಮಾಡಬೇಕಿದೆ. ಹೀಗಾಗಿ ಈ ಬಾರಿ ಕೊನೆಯದಾಗಿ ನಾವು ರೈತರ ಜಮೀನಿಗೆ ನೀರು ಹರಿಸುತ್ತಿದ್ದೇವೆ ಎಂದರು.
ಮೆಣಸಿನಕಾಯಿಗೆ ಮಾತ್ರ ನೀರು
ನೀರಿನ ಬಳಕೆ ಮೇಲ್ವಿಚಾರಣೆ ಹೇಗೆ ಎಂದು ಕೇಳಿದಾಗ, ಮೇಲ್ವಿಚಾರಣೆಗೆ ಪೊಲೀಸರನ್ನು ಬಳಸಿಕೊಳ್ಳಲು ಆಗುವು ದಿಲ್ಲ. ಹೀಗಾಗಿ ಈ ಜವಾಬ್ದಾರಿಯನ್ನು ಜನಪ್ರತಿನಿಧಿ ಹಾಗೂ ರೈತ ಸಂಘಟನೆಗಳಿಗೇ ನೀಡಲಾಗಿದೆ. ನೀವೇ ಪೊಲೀಸರಾಗಿ ಈ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕು. ನಮ್ಮ ಅಧಿಕಾರಿ ಗಳಿಗೂ ನಾವು ಸೂಚನೆ ನೀಡಿದ್ದೇವೆ. ಆದರೆ ಅಧಿಕಾರಿಗಳು ರೈತರ ಜತೆ ಜಗಳ ಮಾಡಲು ಆಗುವುದಿಲ್ಲ. ಆ ರೀತಿ ಆದರೆ ಮಾಧ್ಯಮಗಳು ಅದನ್ನೇ ದೊಡ್ಡ ವಿಷಯ ಮಾಡುತ್ತವೆ. ಮಾಧ್ಯಮಗಳು ಕೂಡ ರೈತರ ಜವಾಬ್ದಾರಿ ಬಗ್ಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಮೆಣಸಿನಕಾಯಿ ಬೆಳೆಗೆ ಎಲ್ಲೆಲ್ಲಿ, ಎಷ್ಟು ಹಾನಿ?
ರಾಯಚೂರು/ಬಳ್ಳಾರಿ/ಬಾಗಲಕೋಟೆ: ಕಲಬುರಗಿ, ರಾಯಚೂರು, ಬಾಗಲಕೋಟೆ, ಯಾದಗಿರಿ ಭಾಗಗಳಲ್ಲಿ ಮೆಣಸಿನಕಾಯಿ ಬೆಳೆದಿದ್ದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಅಂದಾಜು 15 ಸಾವಿರ ಎಕ್ರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದೆ. ಇನ್ನೂ ಎರಡು ಬಾರಿ ನೀರು ಹರಿಸಿದರೆ ಮಾತ್ರ ಬೆಳೆ ಕೈ ಸೇರಲಿದೆ.
ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೆಳೆಯುವ ರೈತರು ಎಚ್ಎಲ್ಸಿ ಕಾಲುವೆ ನೀರಿಗಾಗಿ ಶೇ.60, ಎಲ್ಎಲ್ಸಿ ಕಾಲುವೆ ನೀರಿಗಾಗಿ ಶೇ.25 ಅವಲಂಬಿತರಾಗಿದ್ದಾರೆ. ಸಮರ್ಪಕವಾಗಿ ನೀರು ದೊರೆಯದೆ ಬೆಳೆ ನಷ್ಟವಾಗಿದೆ. ಪ್ರತಿ ಎಕ್ರೆಗೆ 14-16 ಕ್ವಿಂಟಾಲ್ ಬೆಳೆಯುತ್ತಿದ್ದ ಮೆಣಸಿನಕಾಯಿ ಈಗ 6-8 ಕ್ವಿಂಟಾಲ್ ಬೆಳೆದರೂ ಹೆಚ್ಚು ಎಂಬಂತಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಶೇ.76.90ರಷ್ಟು ಬೆಳೆ ಹಾನಿಯಾಗಿದೆ.
ಬಾಗಲಕೋಟೆ, ಹುನಗುಂದ ಹಾಗೂ ಇಳಕಲ್ ತಾಲೂಕಿನಲ್ಲಿ ಈ ಬಾರಿ ಅತಿಹೆಚ್ಚು ಮೆಣಸು ಬೆಳೆಯಲಾಗಿದೆ. ಜಿಲ್ಲೆಯಲ್ಲಿ 21, 816 ಹೆಕ್ಟೇರ್ ಪ್ರದೇಶ ದಲ್ಲಿ ಬಿತ್ತನೆಯಾಗಿದ್ದು, 19,255 ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್ ಉಸ್ತುವಾರಿ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ