ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ತೀರ್ಮಾನ
Team Udayavani, Sep 7, 2019, 3:00 AM IST
ಬೆಂಗಳೂರು: ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದಲ್ಲಿ ಖಾಸಗಿಯವರಿಗೆ ನೀಡಲು ಹಾಗೂ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಮೈಶುಗರ್ ಕಂಪನಿಯ 330 ನೌಕರರು ಸ್ವಯಂ ನಿವೃತ್ತಿ ಪಡೆಯಲು ಸಿದ್ಧರಾಗಿದ್ದಾರೆ. ಇದಕ್ಕೆ 22 ಕೋಟಿ ರೂ.ಬೇಕಾಗುತ್ತದೆ. ಅವರಿಗೆಲ್ಲ ಸ್ವಯಂ ನಿವೃತ್ತಿ ನೀಡಲಾಗುವುದು ಎಂದು ತಿಳಿಸಿದರು.