ಧಾರ್ಮಿಕ ಧ್ರುವೀಕರಣದಿಂದ ಕಾಂಗ್ರೆಸ್ಗೆ ಸೋಲು: ಐವನ್
Team Udayavani, May 26, 2019, 3:00 AM IST
ಮಂಗಳೂರು: ಮತದಾರರನ್ನು ಅಭಿವೃದ್ಧಿಯ ಹೊರತಾಗಿ ಧಾರ್ಮಿಕ ಧ್ರುವೀಕರಣದ ಮೂಲಕ ಸೆಳೆಯುವಲ್ಲಿ ಬಿಜೆಪಿ ಸಫಲವಾದ ಕಾರಣ ಕಾಂಗ್ರೆಸ್ ಸೋಲು ಅನುಭವಿಸಬೇಕಾಗಿ ಬಂತು. ಚುನಾವಣೆ ಫಲಿತಾಂಶ ತೃಪ್ತಿ ತಂದಿಲ್ಲವಾದರೂ ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೇನೆಯ ಸಾಧನೆಯನ್ನು ಪಕ್ಷದ ಸಾಧನೆಯೆಂದು ಬಿಂಬಿಸುವ ಮೂಲಕ, ಸೈನ್ಯದ ಮುಖ್ಯಸ್ಥರು ನೀಡಬೇಕಾಗಿದ್ದ ಹೇಳಿಕೆಗಳನ್ನು ಪ್ರಧಾನಿ, ಸಚಿವರೇ ನೀಡಿ ಭಾವನಾತ್ಮಕವಾಗಿ ಜನರನ್ನು ಸೆಳೆಯಲಾಯಿತು. ಅಭಿವೃದ್ಧಿಯನ್ನು ಕಡೆಗಣಿಸಿ ದೇಶದ ರಕ್ಷಣೆ ಮತ್ತು ಭದ್ರತೆ ವಿಚಾರದಲ್ಲಿ ಹೆಚ್ಚು ಪ್ರಚಾರ ನೀಡುವ ಮೂಲಕ ಬಿಜೆಪಿ ಜಯ ಸಾಧಿಸಿತು ಎಂದು ಟೀಕಿಸಿದರು.
ರಾಜ್ಯಕ್ಕೆ ಲೋಕಸಭೆಯ ಫಲಿತಾಂಶ ಅನ್ವಯ ಆಗದು. ರಾಜ್ಯದಲ್ಲಿ ಮೈತ್ರಿ ಸರಕಾರ ಸುಭದ್ರವಾಗಿದೆ. ಸರಕಾರ ಆಡಳಿತಕ್ಕೆ ಬಂದಂದಿನಿಂದ ಬಿಜೆಪಿ ಹಲವು ರೀತಿಯ ತಂತ್ರಗಳನ್ನು ನಡೆಸಿ ಸರಕಾರ ಉರುಳಿಸುವ ಕನಸು ಕಾಣುತ್ತಿದೆ. ಆದರೆ, ಶಾಸಕರೆಲ್ಲರೂ ಒಟ್ಟಾಗಿದ್ದಾರೆ. ಐದು ವರ್ಷಗಳ ಕಾಲ ಸರಕಾರ ನಡೆಯಲಿದೆ ಎಂದು ಐವನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು