ಕಾಂಗ್ರೆಸ್-ಎಸ್ಡಿಪಿಐ ಸಂಬಂಧ ತನಿಖೆಗೆ ಆಗ್ರಹ: ಸಚಿವೆ ಶೋಭಾ ಕರಂದ್ಲಾಜೆ
Team Udayavani, Mar 18, 2023, 6:23 AM IST
ಬೆಂಗಳೂರು: ಕಾಂಗ್ರೆಸ್ ಮತ್ತು ಎಸ್ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಎಸ್ಡಿಪಿಐ ಈ ಹಿಂದೆ ಹೊಂದಾಣಿಕೆ ಮಾಡಿಕೊಂಡಿದ್ದವು. ಕಾಂಗ್ರೆಸ್ ಮತ್ತು ಎಸ್ಡಿಪಿಐ ಚುನಾವಣಾ ಹೊಂದಾಣಿಕೆ ಏನೆಂಬುದು ಜನರಿಗೆ ತಿಳಿದಿದೆ. ಪಿಎಫ್ಐ, ಕೆಎಫ್ಡಿ ಮತ್ತು ಎಸ್ ಡಿಪಿಐ ಕಾಂಗ್ರೆಸ್ಸಿನ ಇನ್ನೊಂದು ಮುಖ ಎಂದು ಆರೋಪಿಸಿದರು.
ರಾಜ್ಯದಲ್ಲಿ ನಡೆದ ಟಿಪ್ಪು ಜಯಂತಿಯ ವಿರುದ್ಧ ನಡೆದ ಹೋರಾಟದಲ್ಲಿ ಭಾಗಿಯಾದ ನಮ್ಮ ಕಾರ್ಯಕರ್ತರು ಇಂದಿಗೂ ಪ್ರಕರಣ ಎದುರಿಸುತ್ತಿದ್ದಾರೆ. ಪಿಎಫ್ಐ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡುತ್ತಿದೆ; ಭಯೋತ್ಪಾದಕತೆಗೆ ಫಂಡಿಂಗ್ ಮಾಡುತ್ತಿದೆ. ಹಲವಾರು ಹಿಂದೂ ಯುವಕರ ಹತ್ಯೆಗೆ ಕಾರಣವಾಗಿದೆ. ಪಿಎಫ್ಐ ಕಾರ್ಯಕರ್ತರು ಈಗ ಎಸ್ಡಿಪಿಐ ಸೇರಿದ್ದಾರೆಂದು ಆರೋಪಿಸಿದರು.
ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಬಾಂಬ್ ಸ್ಫೋಟ ನಡೆದಿದೆ. ಐಸಿಸ್ ಉಗ್ರರು ಇದರ ಹೊಣೆ ಹೊತ್ತುಕೊಂಡಿದ್ದಾರೆ. ಆದರೆ ಬಾಂಬ್ ಬ್ಲಾಸ್ಟ್ ಮಾಡಿದವನನ್ನು ನಿರಪರಾಧಿ ಎಂಬ ರೀತಿಯಲ್ಲಿ ಕಾಂಗ್ರೆಸ್ ನಾಯಕರು ಅದರಲ್ಲೂ ಮುಖ್ಯವಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಹಾಗಾದರೆ ಕಾಂಗ್ರೆಸ್ಸಿನ ಉದ್ದೇಶ ಏನು? ಎಸ್ಡಿಪಿಐ ಉದ್ದೇಶ ಏನು? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಮತ್ತು ಪಿಎಫ್ಐ ಹಾಗೂ ಕಾಂಗ್ರೆಸ್ ಮತ್ತು ಎಸ್ಡಿಪಿಐಗೆ ಇರುವ ಸಂಬಂಧದ ಸತ್ಯಾಸತ್ಯತೆ ಬಹಿರಂಗವಾಗಬೇಕು. ಸಂಬಂಧ ಕುರಿತಾಗಿ ತನಿಖೆ ಆಗಬೇಕು ಕಾಂಗ್ರೆಸ್ಸಿನ ಮಾನಸಿಕತೆ ಏನು ಎಂಬುದು ಜನರಿಗೆ ತಿಳಿಯಬೇಕು ಎಂದು ಆಗ್ರಹಿಸಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ರಾಜ್ಯ ಬಿಜೆಪಿ ಎಸ್. ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಪಿಎಫ್ಐಯ ರಾಜಕೀಯ ಮುಖವಾಡ ಮತ್ತು ರಾಜಕೀಯ ಮುಖವಾಣಿ ಎಸ್ ಡಿ ಪಿ ಐ. ಈ ಹಿಂದೆ ರಾಜ್ಯದಲ್ಲಿ ಅವರು ಕೆಎಫ್ಡಿ ಹೆಸರಿನಲ್ಲಿ ಕೆಲಸ ಮಾಡುತ್ತಿದ್ದರು. ಹಲವಾರು ಜನರನ್ನು ಬಂಧಿಸಲಾಗಿತ್ತು. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಸುಮಾರು 116 ಕೇಸುಗಳಲ್ಲಿ ಸಿಕ್ಕಿ ಬಿದ್ದಿದ್ದ 1700 ಪಿ ಎಫ್ ಐ ಮತ್ತು ಕೆಎಫ್ ಡಿ ಮುಖಂಡರು ಮತ್ತು ಕಾರ್ಯಕರ್ತರನ್ನು ಬಿಡುಗಡೆ ಮಾಡಿತ್ತು. ಹಾಗೆ ಬಿಡುಗಡೆಯಾದವರೇ ಸಮಾಜದಲ್ಲಿ ಗೊಂದಲದ ವಾತಾವರಣವನ್ನು ನಿರ್ಮಾಣ ಮಾಡಿದರು. ಕೆಜೆ ಹಳ್ಳಿ ಡಿಜೆ ಹಳ್ಳಿ, ಮಂಗಳೂರಿನ ಸ್ಟೇಷನ್ನಿಗೆ ನುಗ್ಗಿರುವುದು, ಹುಬ್ಬಳ್ಳಿಯಲ್ಲಿ ಪೆಲೀಸ್ ಠಾಣೆ ಮೇಲೆ ದಾಳಿ ಮಾಡಿರುವುದು ಪಿಎಫ್ ಐ ಕಾರ್ಯಕರ್ತರೇ ಆಗಿದ್ದಾರೆ ಎಂದು ದೂರಿದರು.
ಕಳೆದ ಬಾರಿ ನಾವು 25 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದ್ದೆವು. ಆದರೆ ಕಾಂಗ್ರೆಸ್ಸಿನ ನೇತಾರರ- ನಾಯಕರ ಕೋರಿಕೆ ಮೇರೆಗೆ ಅವರೆಲ್ಲರನ್ನು ಕಣಕ್ಕಿಳಿಸದೆ ಮೂರು ಜನರನ್ನು ಮಾತ್ರ ಕಣಕ್ಕಿಳಿಸಿದೆವು’ ಎಂದು ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಪಿಎಫ್ ಐ -ಎಸ್ ಡಿ ಪಿ ಐಗೆ ಸಹಾಯ ಮಾಡಿದ್ದಕ್ಕಾಗಿ ಎಸ್ಡಿಪಿಐ ಹೊಂದಾಣಿಕೆ ರಾಜಕೀಯ ಮಾಡಿಕೊಂಡಿದೆ ಎಂಬುದು ಇದರಿಂದ ದೃಢಪಟ್ಟಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ