ನೂತನ ಸಂಸತ್ ಭವನಕ್ಕೆ ”ಅನುಭವ ಮಂಟಪ” ನಾಮಕರಣ ಮಾಡಲು ಆಗ್ರಹ
ಶಿಫಾರಸು ಮಾಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಒತ್ತಾಯ
Team Udayavani, Aug 7, 2022, 5:55 PM IST
ಬೆಂಗಳೂರು: ದೆಹಲಿಯ ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂಬ ಹೆಸರನ್ನು ನಾಮಕರಣ ಮಾಡಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮನವಿ ಮಾಡಿದೆ.
ಪ್ರಪ್ರಥಮವಾಗಿ ವಿಶ್ವ ಮಟ್ಟದಲ್ಲಿ ಪ್ರಜಾಪ್ರಭುತ್ವದ ಹುಟ್ಟು ಮತ್ತು ಸಂಸತ್ತು ಸ್ಥಾಪಿಸಿದ್ದು ಭಾರತದ ಬಸವಕಲ್ಯಾಣದಲ್ಲಿ ಎಂಬ ಮಹತ್ವದ ವಿಷಯವನ್ನು ಪ್ರಚಾರಪಡಿಸಿ ಇಡೀ ವಿಶ್ವದ ಗಮನ ಭಾರತದತ್ತ ಕೇಂದ್ರೀಕರಿಸುವಂತೆ ಮಾಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪ್ರಶಂಸೆ ವ್ಯಕ್ತ ಪಡಿಸಿದೆ.
ಅನುಭವ ಮಂಟಪದ ಮುಖಾಂತರ ಬಸವಾದಿ ಶರಣರು 12ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ವಿಶ್ವದ ಪ್ರಪ್ರಥಮ ಸಂಸತ್ತನ್ನು ಪ್ರಾರಂಭಿಸಿ ವಿಶ್ವಕ್ಕೆ ಪ್ರಜಾಪ್ರಭುತ್ವ ಸಂಸತ್ತಿನ ಕಲ್ಪನೆ ಕೊಟ್ಟ ದೇಶ ಭಾರತ. ಆದ್ದರಿಂದ ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಯವರು ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂಬ ಹೆಸರನ್ನು ನಾಮಕರಣ ಮಾಡಿ ಜಗತ್ತಿಗೆ ಪ್ರಪ್ರಥಮ ಪ್ರಜಾಪ್ರಭುತ್ವ ಸಂಸತ್ತಿನ ಕಲ್ಪನೆ ಮಾಡಿಕೊಟ್ಟಿದ್ದು ಭಾರತ ಎಂದು ತಿಳಿಯುವಂತೆ ಮಾಡಬೇಕೆಂದು ಮನವಿ ಮಾಡಲಾಗಿದೆ.
ಕರ್ನಾಟಕ ಸರ್ಕಾರವು ಈ ಬಗ್ಗೆ ಒಂದು ನಿರ್ಣಯ ಕೈಗೊಂಡು ಸಂಘಟನೆಯ ಬೇಡಿಕೆಗೆ ಒತ್ತಾಸೆಯಾಗಿ ನಿಲ್ಲುವುದರ ಜತೆಗೆ ಕೇಂದ್ರಕ್ಕೆ ಈ ಬಗ್ಗೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಲಾಗಿದೆ.
ಇದು ಕೇವಲ ಸಂಘಟನೆಯ ಕನಸು ಮಾತ್ರವಲ್ಲ, ಇಡೀ ಭಾರತ ದೇಶದ ಪ್ರತಿಯೊಬ್ಬರ ಆಸೆಯಾಗಿದ್ದು, ತಕ್ಷಣವೇ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಜನತೆಗೆ ಸಂತೋಷದ ವಿಷಯವನ್ನು ಕೊಡಬೇಕೆಂದು ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ